![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 3, 2022, 3:13 PM IST
ಕ್ವೆಟ್ಟಾ: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಚೀನಾಕ್ಕೆ ಭೇಟಿ ನೀಡುವ ಕೆಲವೇ ಗಂಟೆಗಳ ಮೊದಲು ಪ್ರತ್ಯೇಕತಾವಾದಿ ಉಗ್ರರು ಎರಡು ಸೇನಾ ನೆಲೆಗಳ ಮೇಲೆ ದಾಳಿ ನಡೆಸಿರುವ ಘಟನೆ ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ.
ಉಗ್ರರ ದಾಳಿಯಲ್ಲಿ ಪಾಕ್ ನ ಓರ್ವ ಸೈನಿಕ ಸಾವನ್ನಪ್ಪಿದ್ದು, ಪ್ರತಿದಾಳಿಯಲ್ಲಿ ನಾಲ್ವರು ಬಂಡುಕೋರರು ಬಲಿಯಾಗಿರುವುದಾಗಿ ವರದಿ ಹೇಳಿದೆ. ಉಗ್ರರ ದಾಳಿಯನ್ನು ಸಮರ್ಥವಾಗಿ ಎದುರಿಸಿದ ನಮ್ಮ ಸೈನಿಕರ ಧೈರ್ಯಕ್ಕೆ ಅಭಿನಂದಿನೆಗಳು ಎಂದು ಇಮ್ರಾನ್ ಖಾನ್ ಗುರುವಾರ(ಫೆ 03) ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದ ಬಲೂಚ್ ಲಿಬರೇಷನ್ ಆರ್ಮಿ(ಬಿಎಲ್ ಎಫ್) ಸೇನಾ ನೆಲೆಯ ಮೇಲೆ ದಾಳಿ ನಡೆಸಿರುವ ಘಟನೆಯ ಹೊಣೆ ಹೊತ್ತುಕೊಂಡಿದ್ದು, ಈ ಕುರಿತ ಹೇಳಿಕೆಯನ್ನು ರಾಯಿಟರ್ಸ್ ಗೆ ಕಳುಹಿಸಿದ್ದು, ಸ್ಫೋಟಕ ತುಂಬಿದ್ದ ವಾಹನಗಳಲ್ಲಿ ಆತ್ಮಹತ್ಯಾ ಬಾಂಬರ್ ಗಳು ಸೇನಾ ನೆಲೆಯ ಮುಂಭಾಗದಲ್ಲಿರುವ ಸುಮಾರು 50ಕ್ಕೂ ಅಧಿಕ ಸೈನಿಕರನ್ನು ಹತ್ಯೆಗೈಯುವ ಉದ್ದೇಶ ಹೊಂದಿರುವುದಾಗಿ ತಿಳಿಸಿತ್ತು.
ಕಳೆದ ವಾರ ಗ್ವಾದಾರ್ ಬಂದರು ಪ್ರದೇಶದ ಸಮೀಪ ಬಿಎಲ್ ಎಫ್ ಉಗ್ರರು ನಡೆಸಿದ್ದ ದಾಳಿಯಲ್ಲಿ ಹತ್ತು ಮಂದಿ ಸೈನಿಕರು ಸಾವನ್ನಪ್ಪಿದ್ದರು. ಇತ್ತೀಚೆಗೆ ಬಲೂಚಿಸ್ತಾನದಲ್ಲಿ ಬಂಡುಕೋರರ ದಾಳಿಗೆ ಅಧಿಕ ಪ್ರಮಾಣದಲ್ಲಿ ಸೈನಿಕರು ಸಾವನ್ನಪ್ಪಿರುವುದಾಗಿ ವರದಿ ವಿವರಿಸಿದೆ.
Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್ ಗಂಡಸು: ಮಸ್ಕ್ ತಂದೆ
Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!
Mexico:ಯುರೋಪ್ ನ Most ವಾಂಟೆಡ್ ಕ್ರಿ*ಮಿನಲ್, ಡ್ರ*ಗ್ ಕಿಂಗ್ ಪಿನ್ ಮಾರ್ಕೋ ಹ*ತ್ಯೆ
Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ
ರಷ್ಯಾ-ಉಕ್ರೇನ್ ಕಾಳಗ ತಪ್ಪಿಸಲು ಮುಂದಿನ ವಾರ 3 ದೇಶದ ಅಧಿಕಾರಿಗಳ ಸಭೆ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.