![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 4, 2022, 4:33 PM IST
ಹುಬ್ಬಳ್ಳಿ: ಹೆಣ್ಣು ಮಕ್ಕಳು ಧೈರ್ಯ- ಶೌರ್ಯದಿಂದ ಸಾಗಿದರೆ ಅಸಮಾನತೆ ಹೋಗಲಾಡಿಸಬಹುದಾಗಿದೆ. ಇದಕ್ಕೆ ಶಿಕ್ಷಣ ಮಹತ್ವದ ಪ್ರಭಾವ ಬೀರಲಿದೆ ಎಂದು ಸಾಯಿ ಪಿಯು ಕಾಲೇಜಿನ ಸಂಸ್ಥಾಪಕ ಅಧ್ಯಕ್ಷೆ ಡಾ|ವೀಣಾ ಬಿರಾದಾರ ಹೇಳಿದರು.
ಜಗದ್ಗುರು ಮೂರುಸಾವಿರಮಠ ವಿದ್ಯಾವರ್ಧಕ ಸಂಘದ ಕಲಾ ಮತ್ತು ವಾಣಿಜ್ಯ ಮಹಿಳಾ ಕಾಲೇಜು, ಮಹಿಳಾ ಅಧಯ್ಯನ ಹಾಗೂ ಸಮಾಜಶಾಸ್ತ್ರ ವಿಭಾಗ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ಲಿಂಗ ಸಮಾನತೆ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾಲ ಬದಲಾದಂತೆ ಸ್ತ್ರೀ ಸಮಾನತೆಯಲ್ಲಿ ಬದಲಾವಣೆ ಆಗುತ್ತ ಬಂದಿದೆ. ಮುಖ್ಯವಾಗಿ 12ನೇ ಶತಮಾನದಲ್ಲಿ ಬಸವಣ್ಣನವರು ಅನುಭವ ಮಂಟಪ ಮೂಲಕ ಜೀವನಾನುಭವ ಹಂಚಿಕೊಳ್ಳಲು ಪ್ರಭಾವ ಬೀರಿದ್ದರು. ಮಹಿಳೆಗೆ ಸಮಾನ ಅವಕಾಶ ಕಲ್ಪಿಸಿದ್ದರು ಎಂದರು.
ಪ್ರಾಂಶುಪಾಲ ಡಾ|ಲಿಂಗರಾಜ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಿಳೆಯರು ಸಮಾಜದ ಆಸ್ತಿ, ಅವರಿಗೆ ಮುಕ್ತ ಅವಕಾಶ ನೀಡುವ ಮೂಲಕ ಅವರನ್ನು ಇನ್ನಷ್ಟು ಮುಖ್ಯವಾಹಿನಿಗೆ ತರವಲ್ಲಿ ಮುಂದಾದರೆ ಲಿಂಗ ಅಸಮಾನತೆ ಹೋಗಲಾಡಿಸಬಹುದು ಎಂದರು.
ವಿದ್ಯಾರ್ಥಿಗಳಾದ ಮಿತಾ ಜಿತೂರಿ, ಹರ್ಷಾ ಪವಾರ ಮಾತನಾಡಿದರು. ವೀಣಾ ಬಿರಾದಾರ ಅವರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಮಹಿಳಾ ಅಧ್ಯಯನ ವಿಭಾಗದ ಮುಖ್ಯಸ್ಥ ಅಣ್ಣಪ್ಪ ಕೊರವರ ಪ್ರಾಸ್ತಾವಿಕ ಮಾತನಾಡಿದರು. ಸಮಾಜಶಾಸ್ತ್ರ ಮುಖ್ಯಸ್ಥೆ ಡಿವಿನಾ ಫರ್ನಾಂಡೀಸ್, ಸಮಾಜಶಾಸ್ತ್ರ ಉಪನ್ಯಾಸಕಿ ಉಷಾ ಕೆಂಚರ್ಲಿ, ಡಾ|ಸಿಸಿಲಿಯಾ ಡಿಕ್ರೋಜ್ ಇನ್ನಿತರರಿದ್ದರು. ಅಂಬಿಕಾ ಬಂಕಾಪುರಮಠ ನಿರೂಪಿಸಿದರು. ಮಂಜುಳಾ ಗೌರಿ ವಂದಿಸಿದರು.
Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’
ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ
Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು
Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್ ವಶಕ್ಕೆ
ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.