ಮ್ಯೂಸಿಯಂ, ಬಳೇಮಂಟಪ ಸುತ್ತ ಸರ್ವೆ ನಡೆಸಿ


Team Udayavani, Feb 5, 2022, 2:12 PM IST

ಮ್ಯೂಸಿಯಂ, ಬಳೇಮಂಟಪ ಸುತ್ತ ಸರ್ವೆ ನಡೆಸಿ

ಯಳಂದೂರು: ಪಟ್ಟಣದಲ್ಲಿರುವ ಐತಿಹಾಸಿಕ ಬಳೇಮಂಟಪ, ಗೌರೇಶ್ವರ ದೇಗುಲ ಹಾಗೂ ದಿವಾನ್‌ ಪೂರ್ಣಯ್ಯ ವಸ್ತು ಸಂಗ್ರಹಾಲಯಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್‌ ಶುಕ್ರವಾರ ಭೇಟಿ ನೀಡಿ ಇದರ ಸುತ್ತಲೂ ಇರುವ ಸ್ಥಳವನ್ನು ಸರ್ವೆ ನಡೆಸಿ, ವರದಿ ನೀಡಬೇಕು ಎಂದು ತಹಶೀಲ್ದಾರ್‌ಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪ್ರಾಚ್ಯ ಇಲಾಖೆಯ ವ್ಯಾಪ್ತಿಯಲ್ಲಿರುವ ದಿವಾನ್‌ ಪೂರ್ಣಯ್ಯ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಿ, ಇಲ್ಲಿ ಸಂಗ್ರಹಿಸಿರುವ ವಸ್ತುಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ಇದರ ಮುಂಭಾಗ ದಲ್ಲಿರುವ ಖಾಲಿ ಸ್ಥಳವು ನ್ಯಾಯಾಲಯದಲ್ಲಿದೆ. ಪಕ್ಕದಲ್ಲಿರುವ ಖಾಲಿ ನಿವೇಶನದ ತೀರ್ಪು ಸರ್ಕಾರದ ಪರವಾಗಿದೆ ಎಂದು ಪ್ರಾಚ್ಯ ಇಲಾಖೆಯ ಸುನೀಲ್‌ ಕುಮಾರ್‌ ಮಾಹಿತಿ ನೀಡಿದರು.

ನಂತರ ಪಕ್ಕದಲ್ಲಿರುವ ಗೌರೇಶ್ವರ ದೇಗುಲ ಹಾಗೂ ಬಳೇಮಂಪಟವನ್ನು ವೀಕ್ಷಿಸಿ ಮಾಹಿತಿ ಪಡೆದರು. ಇಲ್ಲಿನ ಅರ್ಚಕ ಮಹೇಶ್‌ ಚಂದ್ರಮೌಳಿ ದೀಕ್ಷೀತ್‌, ಇದರ ಮುಂಭಾಗದಲ್ಲಿರುವ ರಾಷ್ಟ್ರೀಯ ಹೆದ್ದಾರಿ 209 ಎತ್ತರಿಸಿದ ಬಳಿಕೆ ದೇಗುಲ ಕೆಳಕ್ಕೆ ಇದೆ. ಇದನ್ನು ವೀಕ್ಷಿಸಲು ಬರುವ ವೃದ್ಧರು ಹಾಗೂ ಮಹಿಳೆಯರು, ಮಕ್ಕಳು ಕಷ್ಟ ಪಡುವ ಸ್ಥಿತಿ ಇದೆ. ಹೀಗಾಗಿ ಇದಕ್ಕೆ ಮೆಟ್ಟಿಲುಗಳನ್ನು ನಿರ್ಮಿಸಿಕೊಡಬೇಕೆಂದು ಕೋರಿದರು.

ಕೂಡಲೇ ನಗರೋತ್ಥಾನ ಇಲಾಖೆಯ ಯೋಜನಾ ನಿರ್ದೇಶಕ ಸುರೇಶ್‌ ಅವರಿಗೆ ಈ ಬಗ್ಗೆ ಪಪಂ ಎಂಜಿನಿಯರ್‌ ಬಳಿ ಚರ್ಚಿಸಿ ಇದಕ್ಕೆ ಮೆಟ್ಟಿಲು ನಿರ್ಮಿಸಲು ಕೂಡಲೇ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಪಟ್ಟಣದ ಬಸ್‌ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 209ರ ನಡುವೆ ಇರುವ ಖಾಸಗಿವ್ಯಕ್ತಿಯೊಬ್ಬರ ಕಟ್ಟಡವನ್ನು ತೆರವುಗೊಳಿಸಿಲ್ಲ. ಇದರ ಬಗ್ಗೆ ನ್ಯಾಯಾಲಯವೂ ಆದೇಶಿಸಿದ್ದರೂ ಕ್ರಮವಹಿಸಿಲ್ಲ. ಇದರಿಂದ ಈ ಭಾಗದಲ್ಲಿ ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದ್ದು ಕೂಡಲೇ ಈ ಬಗ್ಗೆ ಕ್ರಮವಹಿಸಬೇಕು ಎಂದು ಮೀರೆಸಿದ್ದರಾಜು ಸೇರಿದಂತೆ ಕೆಲವು ಮನವಿ ಮಾಡಿದರು. ಈ ಬಗ್ಗೆ ಪರಿಶೀಲಿಸಿಕ್ರಮ ವಹಿಸುವ ಭರವಸೆಯನ್ನು ಜಿಲ್ಲಾಧಿಕಾರಿ ನೀಡಿದರು.

ಈ ವೇಳೆ ತಹಶೀಲ್ದಾರ್‌ ಆನಂದಪ್ಪ ನಾಯಕ್‌, ಪಪಂ ರಾಜಸ್ವ ನಿರೀಕ್ಷಕ ನಂಜುಂಡಶೆಟ್ಟಿ,ಆರೋಗ್ಯಾಧಿಕಾರಿ ಮಹೇಶ್‌ಕುಮಾರ್‌,ಪರಶಿವಮೂರ್ತಿ, ಮಲ್ಲಿಕಾರ್ಜುನ, ಮುಖಂಡರಾದ ನಿಂಗರಾಜು ಸೇರಿಂದತೆ ಮತ್ತಿತರರು ಹಾಜರಿದ್ದರು.

 

 

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

Gundlupete: ಅಪರಿಚಿತ ವಾಹನ‌ ಡಿಕ್ಕಿ ಹೊಡೆದು ಇಬ್ಬರ ಮೃತ್ಯು…

1—–wewqewq

Gundlupete; ಅಂತ್ಯಕ್ರಿಯೆಗೆ ತೆರಳಿದ ವೇಳೆ ಹೆಜ್ಜೇನು ದಾಳಿ: 19 ಮಂದಿ ಆಸ್ಪತ್ರೆಗೆ

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ ; ಇಬ್ಬರ ಸಾವು

Road Mishap: ಕೆಎಸ್‌ಆರ್‌ಟಿಸಿ ಬಸ್ -ದ್ವಿಚಕ್ರ ವಾಹನ ಢಿಕ್ಕಿ; ಇಬ್ಬರ ಸಾವು

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

Chamarajanagar ನೂತನ ಎಸ್ಪಿ ಯಾಗಿ ಡಾ.ಬಿ.ಟಿ.ಕವಿತಾ ಅಧಿಕಾರ ಸ್ವೀಕಾರ

suicide (2)

kollegala; ಬೈಕ್ ಗೆ ಅಡ್ಡ ಬಂದ ನವಿಲು: ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.