ಕುಳಗೇರಿ ಕ್ರಾಸ್: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಇಬ್ರಾಹಿಮ್ ಸುತಾರ ಅವರಿಗೆ ನುಡಿ ನಮನ
Team Udayavani, Feb 5, 2022, 7:41 PM IST
ಕುಳಗೇರಿ ಕ್ರಾಸ್ (ಬಾಗಲಕೋಟೆ) : ಕನ್ನಡದ ಕಬಿರ, ಭಾವೈಕ್ಯ ಮಂದಾರ ಇಬ್ರಾಹಿಮ್ ಸುತಾರವರ ಪ್ರವಚನವನ್ನು ಕೇಳದಿರುವ ಮನಸ್ಸುಗಳು ಇಲ್ಲ. ಗೌರಿಶಂಕರ ಶಿಖರದಂತಹ ಶ್ರೇಷ್ಠ ವ್ಯಕ್ತಿತ್ವವನ್ನು ಹೊಂದಿದ ಸಂತರವರು ತಮ್ಮ ಪ್ರವಚನ ಮೂಲಕ ನಾಡಿನಲ್ಲಿ ಭಾವೈಕ್ಯ ಮಕರಂದವನ್ನು ಬೀರಿ ಸರ್ವಜನಾಂಗದ ಶಾಂತಿಯ ತೋಟದಂತಿರುವ ನಾಡಲ್ಲಿ ಮತ್ತಷ್ಟು ಪುಷ್ಟಿ ತಂದುಕೊಟ್ಟವರು ಎಂದು ಬೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಪೂಜ್ಯ ಶಾಂತಲಿಂಗ ಶ್ರೀಗಳು ನುಡಿದರು.
ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶರಣ ಇಬ್ರಾಹಿಮ್ ಸುತಾರ ಅವರ ನುಡಿ ನಮನ ಕಾರ್ಯಕ್ರಮದಲ್ಲಿ ಅವರ ಭಾವ ಚಿತ್ರಕ್ಕೆ ಪುಷ್ಪ ವೃಷ್ಠಿ ಮಾಡಿ ಗೌರವ ನಮನ ಸಲ್ಲಿಸಿ ಮಾತನಾಡಿದರು.
ಸುತಾರ ಅವರು ಭಾವೈಕ್ಯತೆಯ ಪ್ರಾರ್ಥನೆಗಳಿಂದ ಕೂಡಿದ ನಾವೆಲ್ಲ ಭಾರತೀಯರು ಎಂಬ ಕವನ ಸಂಕಲನವನ್ನು ಹೊರ ತರುವುದರ ಮೂಲಕ ಸಮಸ್ತ ಭಾರತೀಯರಲ್ಲಿ ಭಾರತೀಯತೆಯ ಭಾತೃತ್ವವನ್ನು ಎತ್ತಿ ಹಿಡಿದ ಮೇರು ವ್ಯಕ್ತಿಯಾಗಿದ್ದರು.
ಅವರ ಪ್ರವಚನಗಳಲ್ಲಿ ಕೇವಲ ಆದ್ಯಾತ್ತಿಕತೆ ಇರಲಿಲ್ಲ ಬದಲಾಗಿ ಸಮಾಜಪರ ಚಿಂತನೆಗಳು ಹಾಗೂ ಜನರಲ್ಲಿ ಜಾಗೃತಿ ಮೂಡಿಸುವಂತಹ ಅನೇಕ ವಿಚಾರಗಳು ಇರುತ್ತಿದ್ದವು. ಅವರ ಪ್ರವಚನದಿಂದ ರಸ್ತೆ, ದೇವಸ್ಥಾನ ಜಿರ್ಣೋದ್ಧಾರದಂತಹ ಅನೇಕ ಜನಪರ ಕಾರ್ಯಗಳಾಗಿದ್ದನ್ನು ಕಾರ ಬಹುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಶಿವಯ್ಯ ಹಿರೇಮಠ, ಕೊಣ್ಣೂರ ಕಲಾವಿದ ಖಾನಸಾಬ ಮಸೂತಿಮನಿ, ಚನ್ನಪ್ಪ ಚಿನಿವಾಲರ, ಭಗವಂತ ಮೊರಬದ, ಬಸಪ್ಪ ಸಂಗಳದ, ಶಿವಾನಂದ ಹಿರೇಮಠ ಸೇರಿದಂತೆ ಪ್ರಮುಖರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…
BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ ದೂರು ದಾಖಲು
Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ
ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.