ವಿವಿಧ ಡಿಪೋಗಳ 8 ಕೆಎಸ್‌ಆರ್‌ಟಿಸಿ ಬಸ್‌ ನಿಲುಗಡೆ 


Team Udayavani, Feb 6, 2022, 12:54 PM IST

ವಿವಿಧ ಡಿಪೋಗಳ 8 ಕೆಎಸ್‌ಆರ್‌ಟಿಸಿ ಬಸ್‌ ನಿಲುಗಡೆ 

ಗುಡಿಬಂಡೆ: ಕೊರೊನಾ ಕರಿನೆರಳಿನಲ್ಲಿ ಯಾವುದೇ ಆದಾಯದ ಮೂಲ ಇಲ್ಲದೆ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ತಾಲೂಕಿನ ಜನರಿಗೆ ಕೆಎಸ್‌ಆರ್‌ ಟಿಸಿ ಅಧಿಕಾರಿಗಳು ಯಾವುದೇ ಮೂನ್ಸೂಚನೆ ನೀಡದೆ, ಜಿಲ್ಲೆಯ ಎಲ್ಲಾ ಸಾರಿಗೆ ಡಿಪೋಗಳಿಂದ ಎಂಟು ಬಸ್‌ ನಿಲುಗಡೆ ಮಾಡಿರುವುದು ಈಗ ಸಾರ್ವಜನಿಕರಿಗೆ ಆಕ್ರೋಶಕ್ಕೆ ಕಾರಣವಾಗಿದೆ.

ತಾಲೂಕಿನ ಜನತೆ ಕೃಷಿ ಹೊರತುಪಡಿಸಿ ಬೇರಾವುದೇ ಆದಾಯದ ಮೂಲ ಇಲ್ಲದೆ ಇರುವ ಸಮಯದಲ್ಲಿ ಕೊರೊನಾ ಆವಳಿಯಿಂದ ಸಂಕಷ್ಟಕ್ಕೆ ಒಳಗಾಗಿದ್ದ ಜನತೆಗೆ, ಅತಿವೃಷ್ಟಿಯಿಂದ ಬೆಳೆನಷ್ಟವಾಗಿ ಗಾಯದ ಮೇಲೆ ಬರೆ ಎಳೆದಂತಾಗಿ, ಕೇವಲ ಸರ್ಕಾರಿ ಸಾರಿಗೆಯನ್ನೇ ನಂಬಿಕೊಂಡಿದ್ದಪರಿಸ್ಥಿತಿಯಲ್ಲಿ ಏಕಾಏಕಿಯಾಗಿ ಚಿಕ್ಕಬಳ್ಳಾಪುರವಿಭಾಗ ವ್ಯಾಪ್ತಿಯಲ್ಲಿನ ಬಾಗೇಪಲ್ಲಿ, ಚಿಕ್ಕಬಳ್ಳಾಪುರ,ಗೌರಿಬಿದನೂರು ಬಸ್‌ ಡಿಪೋಗಳಿಂದ ಎಂಟು ಬಸ್‌ಗಳು ನಿಲ್ಲಿಸಿದ್ದಾರೆ. ಇದರಿಂದಾಗಿ ದಿನ ನಿತ್ಯಓಡಾಡುವ ವಿದ್ಯಾರ್ಥಿಗಳಿಗೆ, ಸರ್ಕಾರಿ ನೌಕರರಿಗೆಹಾಗೂ ಸಾರ್ವಜನಿಕರಿಗೆ ಬಹಳ ತೊಂದರೆಯಾಗಿದೆ.

ಬೇಜವಾಬ್ದಾರಿ ಹೇಳಿಕೆ: ಬಸ್‌ಗಳು ಏಕಾಏಕಿ ನಿಲ್ಲಿಸಿರುವುದನ್ನು ಸಾರ್ವಜನಿಕರು ಬಸ್‌ ಡಿಪೋವ್ಯವಸ್ಥಾಪಕರಿಗೆ ಪ್ರಶ್ನಿಸಿದರೆ ನಿಮ್ಮ ತಾಲೂಕಿಗೆಬರುವ ಬಸ್‌ಗಳೇ ಇನ್ನು ನಿಲ್ಲಿಸುವಂತೆ ಮೇಲಧಿಕಾರಿಗಳು ಹೇಳುತ್ತಿದ್ದಾರೆ ಎಂದು ಬೇಜಾವಾಬ್ದಾರಿಯ ಹೇಳಿಕೆಯನ್ನು ನೀಡುತ್ತಿದ್ದಾರೆ ಎಂದು ಸಾರ್ವಜನಿಕರು ದೂರುತ್ತಿದ್ದಾರೆ.

ಪ್ರಯಾಣಿಕರಿದ್ರೂ ಪ್ರಯೋಜನವಿಲ್ಲ: ಹಲವು ವರ್ಷಗಳಿಂದ ಗುಡಿಬಂಡೆ ತಾಲೂಕಿನಲ್ಲಿ ಸಾರಿಗೆಯನ್ನು ಸರಿಪಡಿಸುವಂತೆ ಸಂಬಂಧಪಟ್ಟ ಸಾರಿಗೆ ಅಧಿಕಾರಿಗಳನ್ನು ಮತ್ತು ಜಿಲ್ಲಾ ಮಟ್ಟದಅಧಿಕಾರಿಗಳಿಗೆ ಕೋರುತ್ತಾ ಬಂದರೂಇಲ್ಲಿಯವರೆಗೂ ಯಾವುದೇ ರೀತಿಯ ಕ್ರಮವಹಿಸುತ್ತಿಲ್ಲ, ಜನ ಸಂಖ್ಯೆ ಹೆಚ್ಚುತ್ತಿದ್ದಂತೆ ಸಾರಿಗೆಯನ್ನು ಹೆಚ್ಚು ಮಾಡುವುದು ಬಿಟ್ಟು, ಹಾಲಿ ಇರುವ ಬಸ್‌ ಗಳನ್ನೇ ನಿಲ್ಲಿಸುತ್ತಿರುವುದು ದುರದೃಷ್ಟಕರ ಸಂಗತಿ.

ಕೊರೊನಾ ಹೆಸರಿನಲ್ಲಿ 8 ಬಸ್‌ ನಿಲುಗುಡೆ: ಚಿಕ್ಕಬಳ್ಳಾಪುರ ವಿಭಾಗೀಯ ಕಚೇರಿ ವ್ಯಾಪ್ತಿಯ ಬಾಗೇಪಲ್ಲಿ ಡಿಪೋ ವತಿಯಿಂದ ಮಾರ್ಗ ಸಂಖ್ಯೆ 34, 27, 51, 52, ಗೌರಿಬಿದನೂರು ಡಿಪೋದಿಂದ ಮಾರ್ಗ ಸಂಖ್ಯೆ 14, 12, 40, ಚಿಕ್ಕಬಳ್ಳಾಪುರ ಡಿಪೋದಿಂದ ಮಾರ್ಗ ಸಂಖ್ಯೆ 16 ಬಸ್‌ ಏಕಾಏಕಿ ಕೊರೊನಾ ಹೆಸರನ್ನು ಇಟ್ಟುಕೊಂಡು ಸಾರಿಗೆ ನಿಯಂತ್ರಣಾಧಿಕಾರಿಗಳು ಗುಡಿಬಂಡೆ ಮಾರ್ಗ ಕಿತ್ತು ಬೇರೆಡೆಗೆ ಹಾಕಿದ್ದಾರೆ.

ಖಾಸಗಿ ವಾಹನಗಳೇ ಗತಿ: ತಾಲೂಕಿನಲ್ಲಿ ಈಗ ಹಾಲಿ ಇರುವ ಸಾರಿಗೆ ಬಸ್‌ಗಳನ್ನು ಏಕಾಏಕಿನಿಲ್ಲಿಸುತ್ತಿರುವುದರಿಂದ ಖಾಸಗಿ ಮಿನಿ ಬಸ್‌ಗಳು, ಆಟೋಗಳೇ ಗತಿಯಾಗಿದ್ದು, ವಿದ್ಯಾರ್ಥಿಗಳಿಗೆ ಮತ್ತು ಸರ್ಕಾರಿ ಸಿಬ್ಬಂದಿಗಂತೂ ವಾರ್ಷಿಕ ಹಾಗೂ ಮಾಸಿಕ ಬಸ್‌ ಮಾಡಿಸಿದ್ದರೂ ಸರಿಯಾದ ಸಾರಿಗೆ ವ್ಯವಸ್ಥೆ ಇಲ್ಲದೆ ಇರುವ ಕಾರಣ, ಖಾಸಗಿ ವಾಹನಗಳಲ್ಲಿ ದುಬಾರಿ ಶುಲ್ಕ ತೆತ್ತಿ ಸಂಚರಿಸಬೇಕಾಗಿದೆ.

ಫಾರಂ 4 ಕೊಟ್ಟರೆ ಬಸ್‌ ಕಳುಹಿಸುತ್ತೇವೆ:

ಬಾಗೇಪಲ್ಲಿ ಡಿಪೋ ವ್ಯವಸ್ಥಾಪಕರು ಹೇಳುವ ಪ್ರಕಾರ ವಿಭಾಗೀಯ ನಿಯಂತ್ರಣಾಧಿಕಾರಿಗಳು ನಮಗೆ ಫಾರಂ 4 ಕೊಟ್ಟರೆ ಮಾತ್ರ ನಾವು ಬಸ್‌ ಕಳುಹಿಸಲುಸಾಧ್ಯ. ಇಲ್ಲದೆ ಇದ್ದ ಪಕ್ಷದಲ್ಲಿ ನಾವು ಬಸ್‌ ಕಳುಹಿಸಲು ಸಾಧ್ಯವೇ ಇಲ್ಲ ಎಂದು ಹೇಳುತ್ತಾರೆ.

ಗುಡಿಬಂಡೆ ಮಾರ್ಗದ ಯಾವುದೇ ಬಸ್‌ಗಳನ್ನು ನಾವು  ನಿಲ್ಲಿಸಿಲ್ಲ, ಎಲ್ಲಾ ಮಾರ್ಗಗಳಲ್ಲೂ ಬಸ್‌ ಗಳು ಸಂಚರಿಸುತ್ತಿವೆ. ಕೃಷ್ಣಮೂರ್ತಿ, ಚಿಕ್ಕಬಳ್ಳಾಪುರ ವಿಭಾಗೀಯ ನಿಯಂತ್ರಣಾಧಿಕಾರಿ

ಎನ್‌.ನವೀನ್‌ಕುಮಾರ್‌

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

12

Chikkaballapur: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ತಜ್ಞ ವೈದ್ಯರ ಕೊರತೆ!

suicide (2)

Chikkaballapur: ಪೋಕ್ಸೋ ಆರೋಪಿ ಜತೆಗೆ 16 ವರ್ಷದ ಬಾಲಕಿ ಆತ್ಮಹತ್ಯೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.