ಸಿನೆಮಾ ಕ್ಷೇತ್ರ ರಂಗೇರಲು ಬೇಕಿದೆ ಹಲವು ತಿಂಗಳು


Team Udayavani, Feb 7, 2022, 6:40 AM IST

ಸಿನೆಮಾ ಕ್ಷೇತ್ರ ರಂಗೇರಲು ಬೇಕಿದೆ ಹಲವು ತಿಂಗಳು

ಉಡುಪಿ: ರಾಜ್ಯ ಸರಕಾರ ಚಿತ್ರಮಂದಿರಗಳಿಗೆ ಶೇ.100 ಆಸನಭರ್ತಿ ಮಾಡಿ ಸಿನೆಮಾ ನೋಡಬಹುದು ಎಂದು ಪರಿಷ್ಕೃತ ಆದೇಶ ಹೊರಡಿಸಿದ್ದರೂ ಚಿತ್ರಮಂದಿರಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಲಾಕ್‌ಡೌನ್‌ ಹಾಗೂ ಕೋವಿಡ್‌ ಸಂದರ್ಭದಲ್ಲಿ ಥಿಯೇಟರ್‌ಗಳಿಗೆ ಹಲವಾರು ಬಾರಿ ನಿರ್ಬಂಧ ವಿಧಿಸಲಾಗಿತ್ತು. ಶೇ. 50 ಆಸನ ಮಿತಿ ಮಾಡಿದರೂ ಅದೂ ಭರ್ತಿ ಯಾಗುತ್ತಿರಲಿಲ್ಲ. ಸದ್ಯಕ್ಕೆ ಉತ್ತಮ ಚಿತ್ರಗಳೂ ಬಿಡುಗಡೆಯಾಗುತ್ತಿಲ್ಲ. ಈ ಕಾರಣಕ್ಕೆ ಹಲವಾರು ಚಿತ್ರಮಂದಿರದ ಮಾಲಕರು ಚಿತ್ರಮಂದಿರಗಳನ್ನೇ ಬಂದ್‌ ಮಾಡಿದ್ದಾರೆ.

ಹೈ ಬಜೆಟ್‌ ಚಿತ್ರಗಳ ನಿರೀಕ್ಷೆ
ಪ್ರಸ್ತುತ ಯಾವ ಸಿನೆಮಾಗಳಿಗೂ ಉತ್ತಮ ಮಾರುಕಟ್ಟೆ ಲಭಿಸುತ್ತಿಲ್ಲ. ಕೋವಿಡ್‌ ಕಾರಣದಿಂದಾಗಿ ಹೈ ಬಜೆಟ್‌ ಸಿನೆಮಾಗಳು ದಿನಾಂಕವನ್ನೂ ಮುಂದೂಡುತ್ತಲೇ ಬಂದಿದೆ. ಕೆಜಿಎಫ್ 2, ವಿಕ್ರಾಂತ್‌ ರೋಣ, ಚಾರ್ಲಿ 007, ಜೇಮ್ಸ್‌, ಆರ್‌ಆರ್‌ಆರ್‌ ಸಿನೆಮಾಗಳು ಪೂರ್ಣಪ್ರಮಾಣದಲ್ಲಿ ಸಿದ್ದಗೊಂಡಿದ್ದರೂ ಬಿಡುಗಡೆ ಮಾಡಿಲ್ಲ.

ವೆಬ್‌ಸೀರೀಸ್‌ನತ್ತ ಯುವಜನತೆ
ಈ ನಡುವೆ ಯುವಜನತೆ ತಿಂಗಳಿಗೆ ಇಂತಿಷ್ಟ ಮೊತ್ತ ವಿನಿಯೋಗಿಸಿ ನೆಟ್‌ಫ್ಲಿಕ್ಸ್‌, ಅಮೇಜಾನ್‌ ಪ್ರೈಮ್‌, ಹಾಟ್‌ಸ್ಟಾರ್‌ ಮೂಲಕ ವೆಬ್‌ಸೀರೀಸ್‌ಗಳತ್ತ ಆಕರ್ಷಿತರಾಗುತ್ತಿದ್ದಾರೆ. ಹಲವಾರು ಚಲನಚಿತ್ರಗಳನ್ನೂ ಈಗ ಆನ್‌ಲೈನ್‌ ಮೂಲಕವೇ ನೋಡಲಾಗುತ್ತಿದೆ. ಇದು ಕೂಡ ಚಿತ್ರಮಂದಿರಗಳಿಗೆ ಬಹುದೊಡ್ಡ ಹೊಡೆತ ನೀಡುತ್ತಿದೆ.

ಬಹುದೊಡ್ಡ ಹೊಡೆತ
ಸುಮಾರು 1 ವರ್ಷಕ್ಕೂ ಅಧಿಕ ಕಾಲ ಚಿತ್ರಮಂದಿರಗಳಿಗೆ ಜನರೂ ಸುಳಿಯುತ್ತಿಲ್ಲ. 8ರಿಂದ 10 ಮಂದಿ ಪ್ರೇಕ್ಷಕರು ಕಂಡುಬರುತ್ತಿದ್ದಾರೆ. ಬಹುತೇಕ ಚಿತ್ರಮಂದಿರಗಳು ರಾತ್ರಿ ಪ್ರದರ್ಶನಗಳನ್ನೂ ರದ್ದುಮಾಡಿವೆ. ಸಿಬಂದಿ ವೇತನ ಪಾವತಿ, ವಿದ್ಯುತ್‌ ಶುಲ್ಕ ಸಹಿತ ಇತರ ಶುಲ್ಕ ಪಾವತಿಗೆ ತಿಂಗಳಿಗೆ ಲಕ್ಷಾಂತರ ರೂ.ಬೇಕಾಗುತ್ತದೆ. ಲಾಭ ಬೇಡ ಮಾಡಿದ ಖರ್ಚಾದರೂ ಸಿಕ್ಕಿದರೆ ಉಪಯೋಗವಾಗುತ್ತಿತ್ತು ಎನ್ನುತ್ತಾರೆ ಚಿತ್ರಮಂದಿರದ ಮಾಲಕರು.

6 ತಿಂಗಳು ಅಗತ್ಯ
ಜಿಲ್ಲೆಯ ಕಲ್ಪನಾ ಚಿತ್ರಮಂದಿರ ಶೇ.50 ಆಸನ ಸಾಮರ್ಥ್ಯವಿದ್ದಾಗಲೇ ಚಿತ್ರಮಂದಿರಕ್ಕೆ ಜನವಿಲ್ಲದ ಕಾರಣ ಬಂದ್‌ ಮಾಡಲಾಗಿತ್ತು. ಮುಂದಿನ ಶುಕ್ರವಾರದಿಂದ ಮತ್ತೆ ಆರಂಭಿಸಲಾಗುವುದು. ಹಿಂದಿನಂತೆ ಚಿತ್ರಮಂದಿರಗಳಿಗೆ ಜನ ಆಗಮಿಸಲು ಇನ್ನೂ 6 ತಿಂಗಳ ಆವಶ್ಯಕತೆ ಇದೆ.
-ವಿ.ಎಸ್‌.ಸಿ.ಹೊಳ್ಳ,
ಮ್ಯಾನೇಜರ್‌, ಕಲ್ಪನಾ ಚಿತ್ರಮಂದಿರ, ಉಡುಪಿ

 

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.