ಸಂಕಷ್ಟದ ಸಮಯದಲ್ಲಿ ಬಿಸಿಸಿಐ ಮಾನ ಕಾಪಾಡಿದ್ದ ಲತಾ ಮಂಗೇಶ್ಕರ್‌!


Team Udayavani, Feb 7, 2022, 9:52 AM IST

lata mangeshkar rescued bcci in tough time

ನವದೆಹಲಿ: ಇವತ್ತು ಜಗತ್ತಿನ ಶ್ರೀಮಂತ ಕ್ರಿಕೆಟ್‌ ಸಂಸ್ಥೆಯಾಗಿರುವ ಬಿಸಿಸಿಐಗೆ ಒಂದುಕಾಲದಲ್ಲಿ ತನ್ನ ಆಟಗಾರರಿಗೆ ಉದಾರವಾಗಿ ನೆರವು ನೀಡಲೂ ಹಣವಿರಲಿಲ್ಲ!

1983ರಲ್ಲಿ ಭಾರತ ತಂಡ ಕಪಿಲ್‌ ದೇವ್‌ ನಾಯಕತ್ವದಲ್ಲಿ ವಿಶ್ವಕಪ್‌ ಗೆದ್ದಿತ್ತು. ಆಗ ತನ್ನ ಆಟಗಾರರನ್ನು ಸನ್ಮಾನಿಸುವುದು ಹೇಗೆ ಅನ್ನುವ ಚಿಂತೆಯಲ್ಲಿ ಬಿಸಿಸಿಐ ಮುಳುಗಿತ್ತು. ಅಂತಹ ಹೊತ್ತಿನಲ್ಲಿ ನೆರವಿಗೆ ಬಂದಿದ್ದು ಪಕ್ಕಾ ಕ್ರಿಕೆಟ್‌ ಅಭಿಮಾನಿ, ಭಾರತ ರತ್ನ ಲತಾ ಮಂಗೇಶ್ಕರ್‌.

ತನ್ನ ತಂಡ ಯಾರೂ ಊಹಿಸದ ರೀತಿಯಲ್ಲಿ ವಿಶ್ವಕಪ್‌ ಗೆದ್ದರೂ, ನಗದು ಬಹುಮಾನ ನೀಡಲು ಹಣವೇ ಇಲ್ಲ. ಅಂತಹ ಬಿಕ್ಕಟ್ಟಿನಲ್ಲಿ ಅಂದಿನ ಕೇಂದ್ರ ಮಂತ್ರಿ ಎನ್‌ಕೆಪಿ ಸಾಳ್ವೆ ಅಧ್ಯಕ್ಷತೆಯ ಬಿಸಿಸಿಐ ಇತ್ತು. ಆಗ ದಿನಕ್ಕೆ ಕೇವಲ 250 ರೂ.ಗಳನ್ನು ಆಟಗಾರರಿಗೆ ದಿನಭತ್ಯೆಯಾಗಿ ನೀಡಲಾಗುತ್ತಿತ್ತು. ಈ ಸಮಸ್ಯೆಗೆ ಪರಿಹಾರ ನೀಡಿದ್ದು ಬಿಸಿಸಿಐನ ಇನ್ನೊಬ್ಬ ಮಾಜಿ ಅಧ್ಯಕ್ಷ ರಾಜ್‌ಸಿಂಗ್‌ ಡುಂಗಾರ್ಪುರ್‌.

ಇದನ್ನೂ ಓದಿ:ಅವಿವಾಹಿತೆಯಾಗಿ ಉಳಿದಿದ್ದೇಕೆ? ಲತಾ- ರಾಜ್‌ಸಿಂಗ್‌ ದುಂಗಾರ್ಪುರ್‌ “ಪ್ರೇಮ್‌’ ಕಹಾನಿ

ಲತಾ ಅವರ ಸ್ನೇಹಿತೆಯಾಗಿದ್ದರಿಂದ ತಕ್ಷಣ ಆಟಗಾರರಿಗಾಗಿ ಹಾಡಲು ಒಪ್ಪಿಕೊಂಡರು. ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಮೈದಾನ ಕಿಕ್ಕಿರಿದು ತುಂಬಿತ್ತು. ಅದರಿಂದ ಸಂಗ್ರಹವಾದ ಹಣದಿಂದ ವಿಶ್ವಕಪ್‌ ವಿಜೇತ 14 ಆಟಗಾರರಿಗೆ ತಲಾ 1 ಲಕ್ಷ ರೂ. ಕೊಡಲು ಬಿಸಿಸಿಐಗೆ ಸಾಧ್ಯವಾಯಿತು. ಆ ಕಾಲದಲ್ಲಿ ಒಂದು ಲಕ್ಷ ರೂ. ಅಂದರೆ ದೊಡ್ಡ ಮೊತ್ತವೆನ್ನುವುದನ್ನು ಮರೆಯಬಾರದು. ಮಂಗೇಶ್ಕರ್‌ ಅಂದು ಬಿಸಿಸಿಐಯನ್ನು ಅವಮಾನದಿಂದ ಪಾರು ಮಾಡಿದ್ದರು. ಅದರ ಸವಿನೆನಪಿಗಾಗಿ ಬಿಸಿಸಿಐ ಅವರ ಮರಣದವರೆಗೂ ಭಾರತದಲ್ಲಿ ಎಲ್ಲೇ ಅಂತಾರಾಷ್ಟ್ರೀಯ ಪಂದ್ಯ ನಡೆಯಲಿ; ಮಂಗೇಶ್ಕರ್‌ ಹೆಸರಿನಲ್ಲಿ ಎರಡು ವಿಐಪಿ ಟಿಕೆಟ್‌ಗಳನ್ನು ಮೀಸಲಾಗಿಟ್ಟಿತ್ತು.

ಕಪ್ಪುಪಟ್ಟಿ ಧರಿಸಿದ ಭಾರತೀಯ ಕ್ರಿಕೆಟಿಗರು: ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಭಾರತೀಯ ಕ್ರಿಕೆಟಿಗರು ತೋಳಿಗೆ ಕಪ್ಪುಪಟ್ಟಿ ಧರಿಸಿ ಕಣಕ್ಕಿಳಿದಿದ್ದರು. ಗಾನ ಕೋಗಿಲೆ, ಲಂತಾ ಮಂಗೇಶ್ಕರ್‌ ನಿಧನದ ಹಿನ್ನೆಲೆಯಲ್ಲಿ ತಂಡದ ಆಟಗಾರರು ಶೋಕ ತೋರಿಸಿದ ರೀತಿ ಹೀಗಿತ್ತು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.