ಮೂರು ತಿಂಗಳಲ್ಲಿ ವೈಟ್‌ ಟಾಪಿಂಗ್‌ ಪೂರ್ಣ


Team Udayavani, Feb 9, 2022, 12:38 PM IST

ಮೂರು ತಿಂಗಳಲ್ಲಿ  ವೈಟ್‌ಟಾಪಿಂಗ್‌ ಪೂರ್ಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸುಗಮ ಸಂಚಾರ ಉದ್ದೇಶದಿಂದ ಪ್ರಾರಂಭವಾದ ವೈಟ್‌ ಟಾಪಿಂಗ್‌ ಕಾಮಗಾರಿ ಅಂತೂ ಇಂತೂ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ.

ನಗರದ ಹೃದಯಭಾಗ, ವಾಣಿಜ್ಯ ಪ್ರದೇಶ, ಸಂಚಾರ ಒತ್ತಡದ ಮಾರ್ಗಗಳಲ್ಲಿ ನಡೆಯುತ್ತಿರುವವೈಟ್‌ ಟಾಪಿಂಗ್‌ ಕಾಮಗಾರಿ ಮುಂದಿನ ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, 152.24 ಕಿ.ಮೀ.ಸಂಚಾರಕ್ಕೆ ಪೂರ್ಣ ಪ್ರಮಾಣದಲ್ಲಿ ತೆರೆದುಕೊಳ್ಳಲಿದೆ.ಇದರಿಂದಾಗಿ ಎರಡು ವರ್ಷಗಳಿಂದಕಾಮಗಾರಿ ಕಿರಿಕಿರಿಯಿಂದ ತೊಂದರೆಗೊಳಗಾಗಿದ್ದ ವಾಹನ ಸವಾರರು ಹಾಗೂ ಸಾರ್ವ ಜನಿಕರು ನಿಟ್ಟುಸಿರು ಬಿಡುವಂತಾಗಲಿದೆ. ಈಗಾಗಲೇ ನಗರಾದ್ಯಂತದ ಪ್ರಮುಖ ರಸ್ತೆಗಳಲ್ಲಿ ಕೈಗೊಂಡಿರುವ ವೈಟ್‌ ಟಾಪಿಂಗ್‌ ಕಾಮಗಾರಿ ಶೇ.80ಪೂರ್ಣ ಗೊಂಡಿದೆ.

ಒಟ್ಟಾರೆ, 152.24 ಕಿ.ಮೀ. ಉದ್ದದರಸ್ತೆಯಲ್ಲಿ 103.68 ಉದ್ದದ ರಸ್ತೆಗಳಕಾಮಗಾರಿ ಸಂಪೂರ್ಣಗೊಂಡಿದ್ದು, 48.56 ಕಿ.ಮೀ. ಉದ್ದದ ಶೇ.20 ರಷ್ಟು ಕಾಮಗಾರಿ ಬಾಕಿ ಇದ್ದು 3ತಿಂಗಳಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.ವೈಟ್‌ಟಾಪಿಂಗ್‌ ಕಾಮಗಾರಿಯಿಂದಾಗಿ ಮುಂದಿನ20-30 ವರ್ಷಗಳ ಕಾಲ ರಸ್ತೆಗಳು ಯಾವುದೇ ಸಮಸ್ಯೆ ಇಲ್ಲದೆ ನಿರ್ವಹಣೆಯಾಗಲಿದ್ದು,ಪದೇ ಪದೆ ಅಥವಾ ಪ್ರತಿ ವರ್ಷ ಕಾಮಗಾರಿ, ದುರಸ್ತಿಯ ಪ್ರಮೇಯವೇ ಇರುವುದಿಲ್ಲ ಎಂದಿದ್ದಾರೆ.2018ರಲ್ಲಿ ವೈಟ್‌ಟಾಪಿಂಗ್‌ ಯೋಜನೆ ಯನ್ನು ಕೈಗೆತ್ತಿಕೊಳ್ಳಲಾಗಿತ್ತಾದರೂ ಕೊರೊನಾ ಲಾಕ್‌ಡೌನ್‌, ಕಾರ್ಮಿಕರ ಅಭಾವದಿಂದಾಗಿ ಒಂದಷ್ಟು ದಿನ ಕಾಮಗಾರಿಗೆ ಅಡ್ಡಿಯಾಗಿತ್ತು. ಮುಖ್ಯಮಂತ್ರಿಯವರ ನಗರೋತ್ಥಾನದಡಿ ಲಭ್ಯವಿದ್ದ ಅನುದಾನವನ್ನೂ ವೈಟ್‌ ಟಾಪಿಂಗ್‌ ಯೋಜನೆಗೆ ಬಳಸಲಾಗಿದ್ದು, ಇತ್ತೀಚಿಗೆ ಕಾಮಗಾರಿ ಚುರುಕುಗೊಂಡಿದೆ. ಹೀಗಾಗಿ, 2022ರಡಿಸೆಂಬರ್‌ ಅಂತ್ಯಕ್ಕೆ ಮುಗಿಯಬೇಕಾದ ಕಾಮಗಾರಿಏಪ್ರಿಲ್‌ ಅಥವಾ ಮೇ ಅಂತ್ಯಕ್ಕೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.

ಮೈಸೂರು ರಸ್ತೆಯಿಂದ ಹಳೆಯ ಹೊರವರ್ತುಲ ರಸ್ತೆ ಮಾರ್ಗವಾಗಿ ವಿಶ್ವವಿದ್ಯಾಲಯ ದ್ವಾರದವರೆಗಿನ 7.58 ಕಿ.ಮೀ, ಹೊಸೂರು ರಸ್ತೆ 5.55 ಕಿ.ಮೀ,ಸರ್ಜಾಪುರ ರಸ್ತೆಯ 5.30ಕಿ.ಮೀ. ಉದ್ದದ ರಸ್ತೆಸೇರಿದಂತೆ ಬಹುತೇಕ ರಸ್ತೆಗಳ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ.

ಆದರೆ, ಬನ್ನೇರುಘಟ್ಟ ರಸ್ತೆಯ 4.20 ಕಿ.ಮೀ, ವಿಲ್ಸನ್‌ ಗಾರ್ಡನ್‌ ರಸ್ತೆಯ 1.42, ಲ್ಯಾವೆಲ್ಲಿ ರಸ್ತೆಯ1.38 ಕಿ.ಮೀ, ಇಂದಿರಾ ನಗರದ ಮೂಲಕ ಹಳೆಯವಿಮಾನ ನಿಲ್ದಾಣದವರೆಗಿನ 1.96ಕಿ.ಮೀ. ಸೇರಿಇಪ್ಪತ್ತು ರಸ್ತೆಗಳ ವೈಟ್‌ ಟಾಪಿಂಗ್‌ ಕಾಮಗಾರಿ ಇದೀಗ ಬಾಕಿ ಇದೆ.

22 ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣ :

ಸ್ಮಾರ್ಟ್‌ ಸಿಟಿ ಯೋಜನೆಯಡಿ ಎಂ.ಜಿ.ರಸ್ತೆಯಿಂದ ಕಾಮರಾಜ್‌ ಮಾರ್ಗವಾಗಿ ಕಮರ್ಷಿಯಲ್‌ ಸ್ಟ್ರೀಟ್‌ವರೆಗೆ ಹಾಗೂ ಕಮರ್ಷಿಯಲ್‌ ಸ್ಟ್ರೀಟ್‌ನಿಂದ ಸೆಂಟ್‌ಜಾನ್ಸ್‌ ಚರ್ಚ್‌ ರಸ್ತೆವರೆಗೆ ರೂ.25.72 ಕೋಟಿ ವೆಚ್ಚದ1.83 ಕಿ.ಮೀ ರಸ್ತೆ ಕಾಮಗಾರಿ ಸೇರಿದಂತೆ ಒಟ್ಟು460.02 ಕೋಟಿ ರೂ. ವೆಚ್ಚದ 27.80 ಕಿಮೀ ಉದ್ದದ,32 ರಸ್ತೆಗಳನ್ನೂ ಅಭಿವೃದ್ಧಿ ಮಾಡಲಾಗುತ್ತಿದೆ. 22 ರಸ್ತೆಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿದ್ದು, ಐದುರಸ್ತೆಗಳು ಡಾಂಬರೀಕರಣ ಆಗಬೇಕಿದೆ. ಇದೂ ಪೂರ್ಣಗೊಂಡರೆ ನಗರದಲ್ಲಿ ಸಂಚಾರ ಸುಗಮವಾಗುತ್ತದೆ ಎಂದು ಅಧಿಕಾರಿಗಳು ಹೇಳುತ್ತಾರೆ.

ಕೆಲವು ಕಾಮಗಾರಿ ಮುಕ್ತಾಯ :

ನಗರದ ಪ್ರಮುಖ ರಸ್ತೆಗಳಲ್ಲಿ ಒಟ್ಟು ನೂರು ರಸ್ತೆಗಳನ್ನು ವೈಟ್‌ ಟಾಪಿಂಗ್‌ಗೆಆಯ್ಕೆಮಾಡಿಕೊಳ್ಳಲಾಗಿತ್ತು. ಆ ಪೈಕಿ ಬಿಇಎಲ್‌ವೃತ್ತದಿಂದ ಹೆಬ್ಟಾಳದ ಮೂಲಕ ಬೆನ್ನಿಗಾನಹಳ್ಳಿಮೇಲ್ಸೇತುವೆವರೆಗಿನ 11ಕಿ.ಮೀ, ಮೈಸೂರುರಸ್ತೆಯಿಂದ ಸುಮನಹಳ್ಳಿ ಜಂಕ್ಷನ್‌ ಮೂಲಕತುಮಕೂರು ರಸ್ತೆವರೆಗಿನ 9.66 ಕಿ.ಮೀ, ನಾಗಾವಾರ ಜಂಕ್ಷನ್‌ನಿಂದ ಥಣಿಸಂದ್ರ ಮುಖ್ಯರಸ್ತೆಯ ಮಾರ್ಗದ 8.65 ಕಿ.ಮೀ. ಉದ್ದದರಸ್ತೆಗಳಲ್ಲಿ ವೈಟ್‌ ಟಾಪಿಂಗ್‌ ಕಾಮಗಾರಿ ಸಂಪೂರ್ಣಗೊಂಡಿದೆ.

ಮಳೆಗಾಲದಲ್ಲಿ ಜಲಾವೃತ, ಡಾಂಬರು ಕಿತ್ತು ಬರುವುದು, ರಸ್ತೆಗುಂಡಿಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಎಂಬಂತೆ ರೂಪಿಸಲಾಗಿರುವ ವೈಟ್‌ ಟಾಪಿಂಗ್‌ ಕಾಮಗಾರಿ ಪೂರ್ಣಗೊಂಡರೆ ನಗರದ ಸಂಚಾರ ದಟ್ಟಣೆ ನಿವಾರಣೆಗೂ ಸಹಕಾರಿಯಾಗಲಿದೆ. ಲೋಕೇಶ್‌ , ಬಿಬಿಎಂಪಿ ಮುಖ್ಯ ಎಂಜಿನಿಯರ್‌

-ಭಾರತಿ ಸಜ್ಜನ್‌

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಪ್ರೇಯಸಿಯ ಪೀಡಿಸುತ್ತಿದ್ದವನಿಗೆ ಪ್ರಿಯಕರನಿಂದ ಚಾಕು ಇರಿತ!

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಮೆಜೆಸ್ಟಿಕ್‌ ಬಳಿ ಬಿಎಂಟಿಸಿ ಬಸ್‌ ಡಿಕ್ಕಿ; ಅಂಗವಿಕಲ ಸ್ಥಳದಲ್ಲೇ ಸಾವು

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Bengaluru: ಪರಪ್ಪನ ಅಗ್ರಹಾರ ಕಾರಾಗೃಹದ‌ಲ್ಲಿ ಮತ್ತೆ 9 ಮೊಬೈಲ್‌ ಫೋನ್‌ಗಳು ಪತ್ತೆ!

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

Leopard: ಎಲೆಕ್ಟ್ರಾನಿಕ್‌ ಸಿಟಿ ಎನ್‌ಟಿಟಿಎಫ್ ಆವರಣ ಬಳಿ ತಡರಾತ್ರಿ ಚಿರತೆ ಪ್ರತ್ಯಕ್ಷ

6

Anekal: ಶಾಲಾ ಬಸ್‌ ಅಡ್ಡಗಟ್ಟಿ ಚಾಲಕನಿಗೆ ತೀವ್ರ ಹಲ್ಲೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.