13 ಅಡಿ ನೀರು ಶೇಖರಣೆ, ಕೆಲವು ದಿನಗಳಲ್ಲಿ ನೀರು ಸರಬರಾಜು

ಎಣ್ಣೆಹೊಳೆ: ಏತ ನೀರಾವರಿ ಯೋಜನೆಯ ಅಣೆಕಟ್ಟಿಗೆ ಗೇಟ್‌ ಅಳವಡಿಕೆ ಪೂರ್ಣ

Team Udayavani, Feb 9, 2022, 5:30 PM IST

13 ಅಡಿ ನೀರು ಶೇಖರಣೆ, ಕೆಲವು ದಿನಗಳಲ್ಲಿ ನೀರು ಸರಬರಾಜು

ಅಜೆಕಾರು: ಎಣ್ಣೆಹೊಳೆಯ ಸುವರ್ಣ ನದಿಯಲ್ಲಿ ಸುಮಾರು 108 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಬೃಹತ್‌ ಏತ ನೀರಾವರಿ ಯೋಜನೆಯ ಕಾಮಗಾರಿಗಳು ಬಹುತೇಕ ಅಂತಿಮ ಹಂತದಲ್ಲಿದ್ದು ಅಣೆಕಟ್ಟಿಗೆ ಗೇಟ್‌ ಅಳವಡಿಕೆ ಕಾರ್ಯ ಪೂರ್ಣಗೊಂಡಿದೆ.

ಗೇಟ್‌ ಅಳವಡಿಕೆ ಬಳಿಕ ಈಗ ಸುಮಾರು 13 ಅಡಿಗಳಷ್ಟು ನೀರು ಶೇಖರಣೆಗೊಂಡಿದ್ದು ಒಂದೆರಡು ದಿನಗಳಲ್ಲಿ ಸುಮಾರು 15 ಅಡಿಗಳಷ್ಟು ನೀರು ಶೇಖರಣೆಗೊಳ್ಳವ ನಿರೀಕ್ಷೆ ಇದೆ. ಸುವರ್ಣಾ ನದಿಗೆ ತಡೆಯಾಗಿ ನಿರ್ಮಾಣವಾದ ಅಣೆಕಟ್ಟಿಗೆ 15 ಅಡಿ ಎತ್ತರದ 19 ಗೇಟ್‌ ಅಳವಡಿಸಲಾಗಿದೆ.ಅಂತರ್ಜಲ ವೃದ್ಧಿಸುವ ಉದ್ದೇಶದೊಂದಿಗೆ ಕೃಷಿಗೆ ನೀರು ಒದಗಿಸುವ ಯೋಜನೆ ಹೊಂದಲಾಗಿದೆ.

ಕಾರ್ಕಳ ಪುರಸಭೆ, ಮರ್ಣೆ ಗ್ರಾಮ ಪಂಚಾಯತ್‌, ಹಿರ್ಗಾನ ಗ್ರಾಮ ಪಂಚಾಯತ್‌, ಕುಕ್ಕುಂದೂರು ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯ ಹಳ್ಳ ತೊರೆಗಳಿಗೆ ನೀರು ಹಾಯಿಸುವ ಗುರಿ ಹೊಂದಲಾಗಿದೆ. ಈಗಾಗಲೇ ಈ ವ್ಯಾಪ್ತಿಯಲ್ಲಿ ಸುಮಾರು 35 ಚೆಕ್‌ ಡ್ಯಾಂ ನಿರ್ಮಾಣ ಮಾಡಲಾಗಿದ್ದು ಇನ್ನು 10 ಚೆಕ್‌ ಡ್ಯಾಂಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ.

ಅಜೆಕಾರು, ಹಿರ್ಗಾನ ಭಾಗಗಳಲ್ಲಿ ಪೈಪ್‌ ಲೈನ್‌ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಪೈಪ್‌ ಲೈನ್‌ ಕಾಮಗಾರಿ ಪ್ರಗತಿಯಲ್ಲಿದೆ.

2020ರ ಫೆಬ್ರವರಿಯಲ್ಲಿ ಪ್ರಾರಂಭಗೊಂಡ ಏತ ನೀರಾವರಿ ಕಾಮಗಾರಿ ಈಗ ಅಂತಿಮ ಹಂತದಲ್ಲಿದ್ದು ಪ್ರಸಕ್ತ ವರ್ಷ ಪ್ರಾಯೋಗಿಕವಾಗಿ ನೀರು ಸರಬರಾಜು ಮಾಡಿ ಸಾಧಕ ಬಾಧಕಗಳನ್ನು ತಿಳಿದು ಮುಂದಿನ ವರ್ಷ ಪೂರ್ಣ ಪ್ರಮಾಣದಲ್ಲಿ ನೀರು ಪೂರೈಕೆಯಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೈಪ್‌ ಲೈನ್‌ ಅವಾಂತರ
ನೀರಾವರಿ ಯೋಜನೆಯ ಪೈಪ್‌ ಲೈನ್‌ ನಡೆದ ಕೆಲವೆಡೆ ಕಾಮಗಾರಿ ಅಸಮರ್ಪಕವಾಗಿ ನಡೆಸಲಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಜೆಕಾರು ಪೇಟೆ ಭಾಗದಲ್ಲಿ ಪೈಪ್‌ಲೈನ್‌ಗಾಗಿ ರಸ್ತೆ, ಚರಂಡಿಗಳನ್ನು ಅಗೆಯಲಾಗಿದ್ದು. ಅದನ್ನು ಸಮರ್ಪಕವಾಗಿ ಮುಚ್ಚದೆ ಸಾರ್ವಜನಿಕ ಸಂಚಾರಕ್ಕೆ, ವ್ಯಾಪಾರಿಗಳಿಗೆ ಭಾರೀ ಸಮಸ್ಯೆಯಾಗುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದು ತ್ವರಿತವಾಗಿ ಸಮರ್ಪಕವಾಗಿ ಕಾಮಗಾರಿ ನಡೆಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಸ್ಥಳೀಯರಲ್ಲಿ ಆತಂಕ
ಏತ ನೀರಾವರಿ ಯೋಜನೆ ಪ್ರಾರಂಭದ ಹಂತದಿಂದಲೂ ಎಣ್ಣೆಹೋಳೆ ಭಾಗದ ಜನತೆ ಆತಂಕದಲ್ಲಿದ್ದು ಕಾಮಗಾರಿ ಪೂರ್ಣಗೊಳ್ಳುತ್ತಾ ಬಂದರೂ ಆತಂಕ ಕಡಿಮೆಯಾಗಿಲ್ಲ. ಸ್ಥಳೀಯರಿಗೆ ಈ ಕಾಮಗಾರಿ ಬಗ್ಗೆ ಪೂರ್ಣ ಪ್ರಮಾಣದ ಮಾಹಿತಿಯನ್ನು ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ನೀಡುತ್ತಿಲ್ಲ ಎಂಬುದು ಸ್ಥಳೀಯರ ಆರೋಪ. ಮಳೆಗಾಲದಲ್ಲಿ ಸುವರ್ಣಾ ನದಿ ಉಕ್ಕಿ ಹರಿಯುವುದರಿಂದ ಈಗ ನದಿಯಲ್ಲಿ ಅಣೆಕಟ್ಟು ನಿರ್ಮಾಣವಾದ ಪರಿಣಾಮ ನದಿ ನೀರು ಇನ್ನಷ್ಟು ಕೃಷಿ ಭೂಮಿಗೆ, ಜನವಸತಿ ಪ್ರದೇಶಕ್ಕೆ ನೀರು ನುಗ್ಗಿ ಹಾನಿಯಾಗಲಿದೆಯೇ ಎಂಬ ಭಯ ಸ್ಥಳೀಯರನ್ನು ಕಾಡುತ್ತಿದೆ.

ಕಾಮಗಾರಿ ಪೂರ್ಣ
ಎಣ್ಣೆಹೊಳೆ ಏತ ನೀರಾವರಿ ಯೋಜನೆಯಡಿ ನಿರ್ಮಾಣಗೊಳ್ಳುತ್ತಿರುವ ಅಣೆಕಟ್ಟಿನ ಕಾಮಗಾರಿ ಪೂರ್ಣಗೊಂಡಿದ್ದು ಗೇಟ್‌ ಅಳವಡಿಕೆ ಮಾಡಲಾಗಿದೆ. ಮುಂದಿನ 10 ದಿನಗಳಲ್ಲಿ ಪ್ರಾಯೋಗಿಕವಾಗಿ ಅಜೆಕಾರು ಭಾಗಕ್ಕೆ ನೀರು ಹಾಯಿಸಲಾಗುತ್ತದೆ.
– ಚಿರಂಜೀವಿ, ಎಂಜಿನಿಯರ್‌

ಟಾಪ್ ನ್ಯೂಸ್

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

1-horoscope

Horoscope: ಆರಿಸಿದ ಮಾರ್ಗದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.