ಅಘಾಡಿ ಸರ್ಕಾರ ಕೆಡವಲು ನನಗೆ ಆಮಿಷ! ಶಿವಸೇನೆ ಸಂಸದ ಸಂಜಯ ರಾವತ್ ಸ್ಫೋಟಕ ಮಾಹಿತಿ
ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡುಗೆ ಪತ್ರ; ಸರ್ಕಾರ ಪತನಗೊಳಿಸುವ ಸಂಚಿನಲ್ಲಿ ಪ್ರಧಾನ ಸೂತ್ರಧಾರನ ಆಮಿಷ
Team Udayavani, Feb 10, 2022, 7:40 AM IST
ಮುಂಬೈ: “ಮಹಾರಾಷ್ಟ್ರದಲ್ಲಿನ ಮಹಾ ವಿಕಾಸ ಅಘಾಡಿ ಸರ್ಕಾರವನ್ನು ಪತನಗೊಳಿಸಲು ಕೆಲವು ವ್ಯಕ್ತಿಗಳು ನನ್ನನ್ನು ಸಂಪರ್ಕಿಸಿದ್ದರು. ಈ ಬಗ್ಗೆ ನೆರವು ನೀಡುವಂತೆ ಕೋರಿದ್ದರು’
– ಹೀಗೆಂದು ಶಿವಸೇನೆ ವಕ್ತಾರ, ರಾಜ್ಯಸಭೆ ಸದಸ್ಯ ಸಂಜಯ ರಾವುತ್ ಗಂಭೀರ ಆರೋಪ ಮಾಡಿದ್ದಾರೆ ಮತ್ತು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಪತ್ರ ಬರೆದು, ಬೆಳವಣಿಗೆಗಳನ್ನು ವಿವರಿಸಿದ್ದಾರೆ. ಅದಕ್ಕೆ ಪೂರಕವಾಗಿ ಹಿಂದಿಯಲ್ಲಿ ಟ್ವೀಟ್ ಮಾಡಿರುವ ರಾವತ್ ಶಿವಸೇನೆಯ ಚಿಹ್ನೆ ಹುಲಿಯ ಚಿತ್ರದ ಸಹಿತ “ನಾವು ಯಾರಿಗೂ ಬಾಗುವುದಿಲ್ಲ. ಜೈ ಮಹಾರಾಷ್ಟ್ರ’ ಎಂದು ಬರೆದುಕೊಂಡಿದ್ದಾರೆ.
ಜತೆಗೆ ಪತ್ರಕರ್ತರ ಜತೆಗೆ ಮಾತನಾಡಿದ ರಾವತ್ “ಇದು ಮುಂಬೈ ಮತ್ತು ಈ ನಗರದಲ್ಲಿ ನಮ್ಮ ಪಕ್ಷವೇ ಹೆಚ್ಚು ಬಾಹುಳ್ಯವನ್ನು ಹೊಂದಿದೆ. ಎಂವಿಎ ಸರ್ಕಾರ ಐದು ವರ್ಷಗಳ ಅವಧಿ ಪೂರ್ತಿಗೊಳಿಸಲಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಜಮ್ಮು ಮತ್ತು ಕಾಶ್ಮೀರ: 610 ಕಾಶ್ಮೀರಿ ಪಂಡಿತರ ಆಸ್ತಿ ಮರುಸ್ಥಾಪನೆ
ರಾಜ್ಯಸಭೆ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಬರೆದ ಪತ್ರದಲ್ಲಿ “ಸುಮಾರು ಒಂದು ತಿಂಗಳ ಹಿಂದೆ ರಾಜ್ಯ ಸರ್ಕಾರವನ್ನು ಪತನಗೊಳಿಸುವ ಯೋಜನೆ ಮುಂದಿಟ್ಟುಕೊಂಡು ಕೆಲವರು ನನ್ನ ಬಳಿಗೆ ಆಗಮಿಸಿದ್ದರು. ಈ ಸಂಚಿನಲ್ಲಿ ನಾನು ಪ್ರಧಾನ ಪಾತ್ರ ವಹಿಸುವಂತೆ ಸೂಚಿಸಲಾಗಿತ್ತು. ಈ ಮೂಲಕ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಸಲು ಯತ್ನಿಸಲಾಗಿತ್ತು. ಆದರೆ, ಈ ಆಫರ್ ತಿರಸ್ಕರಿಸಿದೆ.
ಇ.ಡಿ..ಸೇರಿದಂತೆ ಕೇಂದ್ರ ಸರ್ಕಾರದ ಸಂಸ್ಥೆಗಳನ್ನು ಶಿವಸೇನೆ ವಿರುದ್ಧ ಛೂ ಬಿಡಲಾಗುತ್ತಿದೆ. ಎಂವಿಎ ಸರ್ಕಾರ ರಚನೆಯಾದ ಬಳಿಕ ಈ ಬೆಳವಣಿಗೆ ನಡೆದಿದೆ. ಈ ಪತ್ರ ಏನಿದ್ದರೂ ಒಂದು ಮಾದರಿ ಮಾತ್ರ. ಬಿಜೆಪಿ ಜತೆ ಸೇರಿಕೊಂಡು ಇ.ಡಿ.ಯ ಕೆಲವು ಅಧಿಕಾರಿಗಳು ಅಕ್ರಮ ನಡೆಸುತ್ತಿದ್ದಾರೆ’ ಎಂದು ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
SC ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ರದ್ದು ಅರ್ಜಿ ಎರಡು ವಾರ ಮುಂದೂಡಿಕೆ
FollowUp:Tirupati Laddoo ವಿವಾದ- ಆಂಧ್ರ ಸಿಎಂ ಬಳಿ ವಿಸ್ತೃತ ವರದಿ ಕೇಳಿದ ಕೇಂದ್ರ ಸರ್ಕಾರ
Moradabad ರಕ್ತದಾನಿಯಂತೆ ಪೋಸ್ ನೀಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬಿಜೆಪಿ ಮೇಯರ್!
West Bengal ಕೋರ್ಟ್ ಗಳಲ್ಲಿ ಭಯದ ವಾತಾವರಣ-ಸಿಬಿಐಗೆ ಸುಪ್ರೀಂಕೋರ್ಟ್ ತರಾಟೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ
Priya Shatamarshan: ಇನ್ಸ್ ಪೆಕ್ಟರ್ ಗಿರಿಜಾ ರಿಪೋರ್ಟಿಂಗ್ ಸಾರ್..
Roopali Naik: ರಾಷ್ಟ್ರದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ
ಶಿರೂರುಗುಡ್ಡ ಕುಸಿತ ಸ್ಥಳ ತಲುಪಿದ ಡ್ರೆಜ್ಜಿಂಗ್ ಯಂತ್ರ-3 ಕುಟುಂಬಕ್ಕೆ ಪರಿಹಾರ ಸಿಕ್ಕಿಲ್ಲ!
Congress ಪಕ್ಷವನ್ನು ತುಕ್ಡೆ ತುಕ್ಡೆ ಗ್ಯಾಂಗ್, ನಗರ ನಕ್ಸಲರು ನಡೆಸುತ್ತಿದ್ದಾರೆ:ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.