“ಜೋಳ ನೋಂದಣಿ ಸಮಸ್ಯೆ ಪರಿಹರಿಸುವೆ”


Team Udayavani, Feb 10, 2022, 1:01 PM IST

15corn

ಸಿಂಧನೂರು: ಜೋಳ ಖರೀದಿಗೆ ನೋಂದಣಿ ಕೆಲಸ ಆರಂಭಿಸಿದ್ದು, ತಾಂತ್ರಿಕ ತೊಡಕುಗಳಿದ್ದರೆ ಅವುಗಳನ್ನು ಪರಿಹರಿಸಲು ಸೂಚನೆ ನೀಡುವೆ ಎಂದು ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ನಗರದ 40ನೇ ಉಪಕಾಲುವೆ ಮಾರ್ಗದ ರಸ್ತೆ ಸುಧಾರಣೆ ಕಾಮಗಾರಿಗೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ಹಿಂಗಾರು-ಮುಂಗಾರು ಬೆಳೆ ನಮೂದು ಮಾಡುವಾಗ ಆಗಿರುವ ಸಮಸ್ಯೆ ನಿವಾರಿಸಲು ತಿಳಿಸುವೆ. ಯಾರೇ ನೋಂದಣಿ ಮಾಡಲು ಹೋದರೂ ಅವರಿಗೆ ಸ್ಪಂದಿಸಬೇಕು. ನೋಂದಣಿಗೆ ಬ್ರೇಕ್‌ ಬಿದ್ದಿದ್ದರೆ, ತಕ್ಷಣವೇ ಪರಿಹರಿಸಲು ತಿಳಿಸುತ್ತೇನೆ. ಪ್ರತಿಯೊಬ್ಬ ರೈತನಿಂದ ಕೇವಲ 20 ಕ್ವಿಂಟಲ್‌ ಜೋಳ ಮಾತ್ರ ಖರೀದಿ ಮಾಡಬೇಕು ಎಂಬ ಷರತ್ತು ತೆಗೆಯುವ ವಿಷಯದಲ್ಲಿ ಈಗಾಗಲೇ ಸರಕಾರದ ಗಮನ ಸೆಳೆದಿರುವೆ. ವಿಧಾನ ಮಂಡಲ ಅಧಿವೇಶನದಲ್ಲಿ ರೈತರ ಪರವಾಗಿ ಧ್ವನಿ ಎತ್ತುತ್ತೇನೆ ಎಂದರು.
3 ಕೋಟಿ ರೂ. ವೆಚ್ಚದಲ್ಲಿ ಕೆಲಸ

40ನೇ ಉಪಕಾಲುವೆ ರಸ್ತೆ ಸುಧಾರಣೆ ಬಹುದಿನಗಳ ಬೇಡಿಕೆಯಾಗಿತ್ತು. 7 ಮೀಟರ್‌ ರಸ್ತೆ ಸಿಸಿ ಕಾಮಗಾರಿಯಾಗಲಿದ್ದು, ಎರಡು ಬದಿಯಲ್ಲಿ 10 ಅಡಿ ಅಂತರ ಬಿಟ್ಟು ಕೆಲಸ ಮಾಡಲು ತಿಳಿಸುವೆ. ಈಗಾಗಲೇ ಒತ್ತುವರಿ ತೆರವುಗೊಳಿಸುವುದಕ್ಕಾಗಿ ಗುರುತು ಹಾಕಲಾಗಿದೆ. ಕಾಲುವೆ ಎಡ-ಬಲದಲ್ಲಿನ 99 ಅಡಿ ರಸ್ತೆಯನ್ನು ಸ್ವಯಂ ಪ್ರೇರಿತವಾಗಿ ತೆರವು ಮಾಡಿಕೊಳ್ಳಲು ಮನವಿ ಮಾಡುತ್ತೇನೆ. ಇಲ್ಲವಾದರೆ, ಇಲಾಖೆ ಅಧಿಕಾರಿಗಳು ನಿಯಮದ ಪ್ರಕಾರ ಕ್ರಮ ಕೈಗೊಳ್ಳಲಿದ್ದಾರೆ ಎಂದರು.

ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌, ಉಪಾಧ್ಯಕ್ಷ ಮುರ್ತುಜಾ ಹುಸೇನ್‌, ಜೆಡಿಎಸ್‌ ಮುಖ್ಯಸಂಚಾಲಕ ಬಿ.ಹರ್ಷ, ಜೆಡಿಎಸ್‌ ತಾಲೂಕು ಘಟಕದ ಅಧ್ಯಕ್ಷ ಬಸವರಾಜ ನಾಡಗೌಡ, ವಿಎಸ್‌ ಎಸ್‌ಎನ್‌ ಮಾಜಿ ಅಧ್ಯಕ್ಷ ಅಮರೇಶಪ್ಪ ಮೈಲಾರ್‌, ಅಲ್ತಾಪ್‌ ಸಾಹುಕಾರ್‌, ಜೆಡಿಎಸ್‌ ನಗರ ಘಟಕದ ಅಧ್ಯಕ್ಷ ಎಂ.ಡಿ. ನದಿಮುಲ್ಲಾ, ತಾಲೂಕು ನಗರ ಘಟಕದ ಅಧ್ಯಕ್ಷ ಕೆ.ವೆಂಕಟೇಶ್‌, ನಗರ ಯುವ ಘಟಕದ ಅಧ್ಯಕ್ಷ ಅಜಯ್‌ ದಾಸರಿ, ನಗರಸಭೆ ಸದಸ್ಯರಾದ ಚಂದ್ರು ಮೈಲಾರ್‌, ದಾಸರಿ ಸತ್ಯನಾರಾಯಣ, ಮುನಿರ್‌ಪಾಷಾ, ವೆಂಕೋಬ ಕಲ್ಲೂರು, ವೆಂಕಟೇಶ್‌ ನಂಜಲದಿನ್ನಿ ಸೇರಿದಂತೆ ಅನೇಕರು ಇದ್ದರು.

ಈ ವಿವಾದ ಯಾಕೆ ಗೊತ್ತಾಗುತ್ತಿಲ್ಲ?

ಹಿಜಾಬ್‌ ವಿವಾದವನ್ನು ಯಾಕೆ ಎತ್ತಿದ್ದಾರೋ ಗೊತ್ತಿಲ್ಲ. ವಿಷಯ ಕೋರ್ಟ್‌ ಮೆಟ್ಟಿಲೇರಿದೆ. ಅದು ಇತ್ಯರ್ಥವಾಗುವ ತನಕ ಎಲ್ಲರೂ ಶಾಂತಿಯುತವಾಗಿ ವರ್ತಿಸಬೇಕು ಎಂದು ಶಾಸಕ ವೆಂಕಟರಾವ್‌ ನಾಡಗೌಡ ಮನವಿ ಮಾಡಿದರು. ಕಾಲೇಜುಗಳಿಗೆ ಡ್ರೆಸ್‌ ಕೋಡ್‌ ಇಲ್ಲ. ಗಲಾಟೆ ಪ್ರಾರಂಭವಾಗಿ 3 ದಿನ ರಜೆ ಘೋಷಣೆ ಮಾಡಲಾಗಿದೆ. ಎಲ್ಲ ಸಮಾಜದ ಮುಖಂಡರಿಗೆ ಮನವಿ ಮಾಡುತ್ತೇನೆ. ಇಂತಹ ವಿಷಯದಲ್ಲಿ ರಾಜಕೀಯ ಬೇಡ ಎಂದು ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ಟಾಪ್ ನ್ಯೂಸ್

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ

RadhaMohan-das

Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್‌ “ಇಂಜೆಕ್ಷನ್‌’

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ

ಕಾರು ಚಾಲನೆ ವೇಳೆ ಚಾಲಕನಿಗೆ ಹೃದಯಾಘಾತ… ಹಲವು ವಾಹನಗಳಿಗೆ ಡಿಕ್ಕಿ, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

Manvi ವಸತಿ ನಿಲಯ; 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Raichur; ಭಕ್ತರ ಸೋಗಿನಲ್ಲಿ ಬಂದು ಸ್ವಾಮೀಜಿಯನ್ನು ಬೆದರಿಸಿ ಮಠದಲ್ಲಿ ದರೋಡೆ

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Police-Head

Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ

Prahalad-Joshi

MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

23

“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್‌. ಶ್ರೀವತ್ಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.