ಮಹಿಳೆಯರಿಗೆ ಬೇಕಿದೆ ಆರ್ಥಿಕ ಸಾಕ್ಷರತೆ

ಭವಿಷ್ಯದ ಬದುಕಿಗೆ ಅನುಕೂಲವಾಗಲೆಂದೋ ಉಳಿತಾಯ ಖಾತೆಯಲ್ಲಿ ತೆಗೆದಿಡಬೇಕು

Team Udayavani, Feb 10, 2022, 6:15 PM IST

ಮಹಿಳೆಯರಿಗೆ ಬೇಕಿದೆ ಆರ್ಥಿಕ ಸಾಕ್ಷರತೆ

ಬಾಗಲಕೋಟೆ: ನಗರದ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ಏಕ್ಯೂಎಸಿ ಘಟಕ ಹಾಗೂ ಮಹಿಳಾ ಸಶಕ್ತೀಕರಣ ಘಟಕದ ಸಹಯೋಗದಲ್ಲಿ ಬಜೆಟ್‌-2022: ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ವಿಷಯ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಜರುಗಿತು.

ಸಂಪನ್ಮೂಲ ವ್ಯಕ್ತಿಗಳಾಗಿ ಆಗಿದ್ದ ಚಾರ್ಟರ್ಡ್‌ ಅಕೌಂಟೆಂಟ್‌ ಸೀಮಾ ಮಣ್ಣೂರ ಮಾತನಾಡಿ, 2022ರ ಕೇಂದ್ರದ ಬಜೆಟ್‌ ಸಾಂಕ್ರಾಮಿಕದಿಂದ ಹೊರಬರುತ್ತಿರುವ ಸಮಸ್ತ ಭಾರತೀಯರಿಗೆ ಆಶಾದಾಯಕವಾಗಿದೆ. ಸರ್ವತೋಮುಖ ಅಭಿವೃದ್ಧಿಯ ನಿಟ್ಟಿನಲ್ಲಿ ಬೂಸ್ಟರ್‌ ಡೋಸ್‌ ನೀಡಿದಂತಾಗಿ ಭರವಸೆಯನ್ನು ಬಲಪಡಿಸಿದೆ. ಜಾಗತಿಕರಣದ ಇವತ್ತಿನ ಸಂದರ್ಭದಲ್ಲಿ ಪ್ರತಿಯೊಬ್ಬರಿಗೂ ಕೇಂದ್ರದ ಬಜೆಟ್‌ ಅರಿವು ಎಷ್ಟು ಮುಖ್ಯವೋ, ಪ್ರತಿಯೊಬ್ಬ ವ್ಯಕ್ತಿಯ ಕುಟುಂಬದ ಬಜೆಟ್‌ ಅರಿವೂ ಕೂಡಾ ಅಷ್ಟೇ ಪ್ರಮುಖವಾಗಿದೆ ಎಂದು ಹೇಳಿದರು.

ಭಾರತ ಹಳ್ಳಿಗಳ ದೇಶ ಗ್ರಾಮೀಣ ಪ್ರದೇಶದ ಹೆಣ್ಣುಮಕ್ಕಳಿಗೆ ಮನೆಯ ಖರ್ಚುವೆಚ್ಚಗಳ ಬಗೆಗೆ ಅರಿವು ಮೂಡಿಸಬೇಕಾದ ಅಗತ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಆರ್ಥಿಕ ಸಾಕ್ಷರತೆ ಬೇಕೆಬೇಕು. ಅಂದರೆ ಮನೆಗೆ ಬರುವ ಆದಾಯ ಎಷ್ಟು, ಮಾಡಬೇಕಾದ ಖರ್ಚು ಎಷ್ಟು, ಉಳಿತಾಯ ಎಷ್ಟು ಮಾಡಬೇಕು ಎಂಬುದರ ಕುರಿತು ಮನೆಯ ಯಜಮಾನ-ಯಜಮಾನಿ ಇಬ್ಬರೂ ಕೂಡಿ ಚರ್ಚಿಸಬೇಕಾದ ಅಗತ್ಯವಿದೆ. ನಮ್ಮ ಮಾಸಿಕ ಆದಯಕ್ಕೆ ತಕ್ಕಂತೆ ನಮ್ಮ ಮನೆಯ ಖರ್ಚು – ವೆಚ್ಚಗಳಿರಬೇಕು.

ಬರುವ ಆದಾಯದಲ್ಲಿಯೇ ಪ್ರತಿ ತಿಂಗಳ ಮನೆಯ ಬಜೆಟ್‌ನ್ನು ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಅನೇಕ ಸಮಸ್ಯೆಗಳಿಗೆ ಗುರಿಯಾಗಬೇಕಾಗುತ್ತದೆ ಎಂದು ತಿಳಿಸಿದರು. ಜಾಗತಿಕ ಹಣಕಾಸು ವ್ಯವಹಾರ, ಅಂದರೆ ಖರ್ಚು-ವೆಚ್ಚ 50:30:20 ರಂತೆ ವಿಭಾಗ ಮಾಡಿಕೊಳ್ಳಬೇಕು. ತಮಗೆ ಬರುವ ಆದಾಯದ 20ರಷ್ಟು ಭಾಗ ಉಳಿತಾಯ ಖಾತೆಗೆ ತೆಗೆದಿರಸಬೇಕು. 50ರಷ್ಟು ಭಾಗ ಖಾತ್ರಿ ಇರುವ ಮನೆಯ ತಿಂಗಳಿನ ಖರ್ಚಿಗಾಗಿ ತೆಗೆದಿಡಬೇಕು. 30ರಷ್ಟು ಭಾಗ ಅನಿರೀಕ್ಷಿತ
ಖರ್ಚಿಗಾಗಿ ಅಥವಾ ಯಾವುದೇ ಆಸ್ತಿಯನ್ನು ಕೊಳ್ಳುವ ಸಲುವಾಗಿಯೋ ಅಥವಾ ಭವಿಷ್ಯದ ಬದುಕಿಗೆ ಅನುಕೂಲವಾಗಲೆಂದೋ ಉಳಿತಾಯ ಖಾತೆಯಲ್ಲಿ ತೆಗೆದಿಡಬೇಕು ಎಂದು ಹೇಳಿದರು.

ಅಲ್ಲದೇ ಹಣವನ್ನು ಬ್ಯಾಂಕಿನಲ್ಲಿ ಫಿಕ್ಸೆಡ್ ಡಿಪಾಜಿಟ್‌ ಅಥವಾ ಮ್ಯೂಚುವಲ್‌ ಫಂಡ್‌ ಅಥವಾ ನ್ಯಾಷನಲ್‌ ಫೈನೆನ್ಸ್‌ ಸ್ಕೀಮ್‌ ನಲ್ಲಿ ಬಡ್ಡಿಗಾಗಿ ಹೂಡಬೇಕು ಎಂಬ ಸಲಹೆ ನೀಡಿದರು. ಪ್ರಾಚಾರ್ಯ ಪ್ರೊ| ಎಸ್‌.ಎ. ಭೂಸನೂರುಮಠ ಅಧ್ಯಕ್ಷತೆ ವಹಿಸಿ, ಪ್ರತಿಯೊಬ್ಬ ಉದ್ಯೋಗಸ್ಥ ಮತ್ತು ಉದ್ಯಮಿಗೆ ತಕ್ಕಮಟ್ಟಿನ ಹಣಕಾಸಿನ ವ್ಯವಹಾರದ ಮಾಹಿತಿ ಇರಬೇಕು ಎಂದರು.

ಐಕ್ಯುಎಸಿ ಸಂಯೋಜಕ ಡಾ. ಎಸ್‌.ಎಂ.ಗಾಂವಕರ್‌, ಮಹಿಳಾ ಸಶಕ್ತೀಕರಣ ಘಟಕದ ಕಾಯಾಧ್ಯಕ್ಷ ಪ್ರೊ| ಎಸ್‌.ಆರ್‌.ದೇಶಪಾಂಡೆ, ಸದಸ್ಯೆ ತುಳಸಿ ಚೌವ್ಹಾಣ, ವಿದ್ಯಾರ್ಥಿ ಪ್ರತಿನಿಧಿ  ಸುರಭಿ ಕುಂಬಾರ ಮುಂತಾದವರು ಉಪಸ್ಥಿತರಿದ್ದರು. ಪ್ರೊ| ಎಸ್‌.ಆರ್‌.ದೇಶಪಾಂಡೆ ಸ್ವಾಗತಿಸಿದರು. ಶ್ವೇತಾ ರೇವಡಕುಂಡಿ ನಿರೂಪಿಸಿದರು. ತುಳಸಿ ಚೌವ್ಹಾಣ ವಂದಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.