ಜಾತಿ ನಿಂದನೆ; ಶೇ.3 ರಷ್ಟು ಮಾತ್ರ ಶಿಕ್ಷೆ: ಸಚಿವ ನಾರಾಯಣಸ್ವಾಮಿ ಆಕ್ರೋಶ
ಪೊಲೀಸ್ ವೈಫಲ್ಯ ಎಂದು ಕಿಡಿ
Team Udayavani, Feb 11, 2022, 1:52 PM IST
ಬೆಂಗಳೂರು : ಜಾತಿ ನಿಂದನೆ ಪ್ರಕರಣದಲ್ಲಿ ಶೇ.೩ರಷ್ಟು ಮಾತ್ರ ಶಿಕ್ಷೆಯಾಗಿದೆ, ಮ್ಯಾನ್ಯುವಲ್ ಸ್ಕ್ಯಾವೆಂಜ್ ನಲ್ಲಿ90 ಜನರು ಮೃತಪಟ್ಟಿದ್ದಾರೆ ಈ ಬಗ್ಗೆ ಎಷ್ಟು ಜನರಿಗೆ ಆರೋಪಪಟ್ಟಿ ಸಲ್ಲಿಸಿದ್ದೀರಿ ? ಎಂದು ಕೇಂದ್ರ ಸಮಾಜ ಕಲ್ಯಾಣ ಸಚಿವ ಎ.ನಾರಾಯಣಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಈ ವಿಚಾರ ತಿಳಿಸಿದ ಅವರು, ೧೯೯೫ ರಿಂದ ೨೦೨೨ರ ಅವಧಿಯಲ್ಲಿ ೯೦ ಜನರು ಮೃತಪಟ್ಟಿದ್ದಾರೆ. ಈ ಸಂಬಂಧ ಏನು ಕ್ರಮ ತೆಗೆದುಕೊಂಡಿದ್ದಾರೆ ಗುತ್ತಿಗೆದಾರರ ವಿರುದ್ಧ ಎಷ್ಟು ಪ್ರಕರಣ ದಾಖಲಾಗಿದೆ ಎಂದು ಪ್ರಶ್ನೆ ಕೇಳಲಾಗಿದೆ. ಆದಷ್ಟು ಬೇಗ ವಿವರಣೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಎಷ್ಟು ಮರ್ಯಾದೆ ಹತ್ಯಾ ಪ್ರಕರಣ ನಡೆದಿದೆ ಎಂಬ ಬಗ್ಗೆ ಮಾಹಿತಿ ಕೇಳಿದ್ದೇನೆ. ಆರೋಪಪಟ್ಟಿ ಸಲ್ಲಿಸದೇ ಇರುವುದು ಪೊಲೀಸ್ ವೈಫಲ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಾತಿ ನಿಂದನೆ ಪ್ರಕರಣದಲ್ಲಿ ಶಿಕ್ಷೆ ಪ್ರಮಾಣ ಶೇ. ೩ರಷ್ಟು ಮಾತ್ರ ಇದೆ. ೬೦೦೦ ಪ್ರಕರಣಗಳಲ್ಲಿ ಆರೋಪಪಟ್ಟಿ ಸಲ್ಲಿಸಬೇಕಾಗಿದೆ. ಈ ಬಗ್ಗೆ ತುರ್ತು ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ರೈತರಿಗೆ ನೀರಾವರಿ ಸೌಲಭ್ಯ ಕಲ್ಪಿಸುವುದಕ್ಕೆ ಮಾಸ್ಟರ್ ಪ್ಲಾನ್ ರೂಪಿಸುವಂತೆ ರಾಜ್ಯ ಸರಕಾರಕ್ಕೆ ಸೂಚನೆ ನೀಡಲಾಗಿದೆ. ಗ್ರಾಮೀಣಾಭಿವೃದ್ಧಿ, ನರೇಗಾ, ತೋಟಗಾರಿಕೆ, ರೇಷ್ಮೆ, ಕೃಷಿ ಇಲಾಖೆ ಸೇರಿ ಮಾಸ್ಟರ್ ಪ್ಲ್ಯಾನ್ ರೂಪಿಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ʼಪುಷ್ಪ-3 ಬರುವುದು ಕನ್ಫರ್ಮ್.. ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು
KSRTC ನಿಲ್ದಾಣ-ಲಾಲ್ಭಾಗ್ ರಸ್ತೆ ಫುಟ್ಪಾತ್ ಇಲ್ಲದೆ ಪಾದಚಾರಿಗಳ ಪರದಾಟ
Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್: ಮಹಾನಗರ ಪಾಲಿಕೆಯ ಹೊಸ ಕ್ರಮ
IPL 2025: ಸಿಎಸ್ ಕೆ ಅಭಿಮಾನಿಗಳಿಗೆ ಶಾಕಿಂಗ್ ಸುದ್ದಿ ಕೊಟ್ಟ ಎಂ.ಎಸ್.ಧೋನಿ
Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.