ಅಲ್ಲಾಹು ಅಕ್ಬರ್ ಘೋಷಣೆ ಕೂಗಿದ ವಿದ್ಯಾರ್ಥಿನಿಗೆ ಬಹುಮಾನಗಳ ಮಹಾಪೂರ

ಮಂಡ್ಯಕ್ಕೆ ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ಭೇಟಿ, ಪ್ರಶಂಸೆ

Team Udayavani, Feb 11, 2022, 3:16 PM IST

1-wtwwrwer

ಮಂಡ್ಯ:ಮಂಗಳವಾರ ಪಿಎಇಸ್‌ ಕಾಲೇಜಿನಲ್ಲಿ ಕೇಸರಿ ಶಾಲುಗಳನ್ನು ಧರಿಸಿದ್ದ ವಿದ್ಯಾರ್ಥಿಗಳತ್ತ ಏಕಾಂಗಿಯಾಗಿ ಮುನ್ನುಗ್ಗಿ ಅಲ್ಲಾಹು ಅಕ್ಬರ್ ಎಂದು ಘೋಷಣೆ ಕೂಗಿದ್ದ ವಿದ್ಯಾರ್ಥಿನಿ ಮುಸ್ಕಾನ್‌ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು, ಆಕೆಗೆ ಹಲವು ಮುಸ್ಲಿಂ ಮುಖಂಡರು ಜನ ಪ್ರತಿನಿಧಿಗಳು ಬಹುಮಾನಗಳನ್ನು ನೀಡಿದ್ದಾರೆ.

ಮಹಾರಾಷ್ಟ್ರದ ಕಾಂಗ್ರೆಸ್ ಶಾಸಕ ಜೇಶಾನ್ ಸಿದ್ಧಿಕಿ ಅವರು ಗುರುವಾರ ಮುಸ್ಕಾನ್‌ ಅವರ ಮನೆಗೆ ಭೇಟಿ ನೀಡಿ ಪ್ರಶಂಸೆ ಸೂಚಿಸಿ ಐ ಫೋನ್ ಮತ್ತು ವಾಚ್ ಉಡುಗೊರೆಗಳನ್ನು ನೀಡಿದ್ದಾರೆ.

ಹಿಜಾಬ್ ಧರಿಸುವ ಹಕ್ಕನ್ನು ತಡೆಯಲು ಪ್ರಯತ್ನಿಸಿದ ಫ್ಯಾಸಿಸ್ಟರ ವಿರುದ್ಧ ದೃಢವಾಗಿ ನಿಂತ ಕರ್ನಾಟಕದ ಸಿಂಹಿಣಿಯನ್ನು ಭೇಟಿಯಾದೆ. ನಾನು ಧೈರ್ಯಶಾಲಿ ಹುಡುಗಿ ಮುಸ್ಕಾನ್ ಖಾನ್ ಮತ್ತು ಅವರ ಕುಟುಂಬವನ್ನು ಭೇಟಿಯಾದೆ, ಆಕೆಗೆ ಮೆಚ್ಚುಗೆಯ ಟೋಕನ್ ನೀಡಿ, ಅವಳ ಧೈರ್ಯವನ್ನು ಶ್ಲಾಘಿಸಿದೆ! ಎಂದು ಟ್ವೀಟ್ ಮಾಡಿದ್ದಾರೆ.

ಅವರದ್ದು ತಪ್ಪಿಲ್ಲ, ನನ್ನದೂ ತಪ್ಪಿಲ್ಲ

ಅವರ ಸಂಸ್ಕೃತಿ ಅವರದ್ದು. ನಮ್ಮ ಸಂಸ್ಕೃತಿ ನಮ್ಮದು. ಅವರು ನನ್ನ ಬಳಿ ಬಂದು ಜೈಶ್ರೀ ರಾಮ್‌ ಎಂದು ಘೋಷಣೆ ಕೂಗಿದರು. ಅದು ಅವರ ಧರ್ಮ, ಅದೇ ರೀತಿ ನಾನು ಅಲ್ಲಾ ಹು ಅಕ್ಬರ್ ಎಂದು ಕೂಗಿದೆ. ಇದು ನನ್ನ ಧರ್ಮ. ಇದರಲ್ಲಿ ಅವರದ್ದು ತಪ್ಪಿಲ್ಲ. ನನ್ನದೂ ತಪ್ಪಿಲ್ಲ. ಎಲ್ಲರಿಗೂ ಸ್ವಾತಂತ್ರ್ಯ. ಅದಕ್ಕೆ ಅವರು ವಿರೋಧ ಮಾಡುವಂತಿಲ್ಲ ಎಂದು ವಿದ್ಯಾರ್ಥಿನಿ ಮುಸ್ಕಾನ್‌ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ಹಿಜಾಬ್‌ ತೆಗೆಯುವಂತೆ ಹೈಕೋರ್ಟ್‌ ಆದೇಶ ನೀಡಿದರೆ ತೆಗೆಯುವುದು ಕಷ್ಟ. ಅದು ನಮ್ಮ ಹಕ್ಕು ಎಂದಿದ್ದಾರೆ.

ತಪ್ಪೇನು ?

ಆಕೆ ಧೈರ್ಯವಂತೆ, ಆಕೆಗೆ ಉಡುಗೊರೆ ನೀಡುವುದರಲ್ಲಿ ತಪ್ಪೇನಿದೆ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಪ್ರಶ್ನಿಸಿದ್ದಾರೆ.

5 ಲಕ್ಷ ಬಹುಮಾನ?
ಅಲ್ಲಾಹು ಅಕ್ಬರ್‌ ಎಂದು ಘೋಷಣೆ ಕೂಗಿದ ವಿದ್ಯಾರ್ಥಿನಿ ಮುಸ್ಕಾನ್‌ಗೆ 5 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ವ್ಯಕ್ತಿಯೊಬ್ಬರು ಪೋಸ್ಟ್‌ ಮಾಡಿದ್ದಾರೆ. ಇರ್ಜನ್‌ ಅಡ್ಡೂರ್‌ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ, ಜಮಾತೇ ಹೇ ಹಿಂದ್‌ನ ಪ್ರಮುಖ ಮೌಲಾನ ಮಹಮೂದ ಮದನಿ ಅವರು 5 ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ ಎಂದು ಪೋಸ್ಟ್‌ ಮಾಡಿದ್ದಾರೆ. ಆ ಹಣವು ಆದಷ್ಟು ಬೇಗ ಅವಳ ಕುಟುಂಬಕ್ಕೆ ಸೇರಲಿ. ಸಹೋದರಿಯು ಉನ್ನತ ಶಿಕ್ಷಣಕ್ಕೆ ಉಪಯೋಗಿಸಲಿ ಎಂದು ಬರೆದುಕೊಂಡಿದ್ದಾರೆ. ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ 5 ಲಕ್ಷ ರೂ. ಬಹುಮಾನ ಘೋಷಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ವಿದ್ಯಾರ್ಥಿನಿ ಮುಸ್ಕಾನ್‌, ನಮಗೆ ಗೊತ್ತಿಲ್ಲ. ಆದರೆ ಅದು ವೈರಲ್‌ ಆಗುತ್ತಿದೆ ಎಂದಿದ್ದಾರೆ.

ಟಾಪ್ ನ್ಯೂಸ್

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

‌INDvsBAN; ಬಸವಳಿದ ಬಾಂಗ್ಲಾ ಎದುರು ಪಂತ್-ಗಿಲ್‌ ಸೂಪರ್‌ ಶತಕ; ಡಿಕ್ಲೇರ್ ಘೋಷಿಸಿದ ಭಾರತ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.