ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಸ್ಪರ್ಧೆ ಪ್ರಯತ್ನ: ತೀನ ಘೋಷಣೆ


Team Udayavani, Feb 11, 2022, 5:04 PM IST

ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ನಿಂದ ಸ್ಪರ್ಧೆ ಪ್ರಯತ್ನ: ತೀನ ಘೋಷಣೆ

ಸಾಗರ: ಶಾಸಕ ಸ್ಥಾನ ಯಾರ ಸ್ವತ್ತಲ್ಲ. ನಾನು ಮುಂದಿನ ವಿಧಾನಸಭಾ ಚುನಾವಣೆಗೆ ಸಾಗರ ಕ್ಷೇತ್ರದಿಂದ ಸ್ಪರ್ಧೆ ಮಾಡುವ ನಿರ್ಧಾರ ಮಾಡಿದ್ದು ಕಾಂಗ್ರೆಸ್ ಪಕ್ಷದ ಟಿಕೆಟ್‌ಗಾಗಿ ಪ್ರಯತ್ನ ನಡೆಸುತ್ತಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಜಿಲ್ಲಾಧ್ಯಕ್ಷ ತೀ.ನ.ಶ್ರೀನಿವಾಸ್ ಘೋಷಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಶಾಸಕ ಹರತಾಳು ಹಾಲಪ್ಪ ಅವರು ನನಗೆ ಒಂದು ಗುಂಟೆ ಭೂಮಿ ಇಲ್ಲ ಎಂದು ಟೀಕೆ ಮಾಡಿ, ಭೂಮಿ ಇಲ್ಲದವರು ರೈತರ ಪರವಾಗಿ ಮಾತನಾಡುತ್ತಾರೆ ಎಂದು ಹೇಳಿರುವುದು ಖಂಡನೀಯ. ಭೂಮಿ ಇಲ್ಲದೆ ಇದ್ದರೂ ರೈತ ಪರವಾಗಿ ಹೋರಾಟ ಮಾಡಬಾರದು ಎಂಬ ಕಾನೂನು ಇಲ್ಲ. ನಾನು ಪ್ರೊ. ನಂಜುಂಡಸ್ವಾಮಿ, ಸುಂದರೇಶ್, ರುದ್ರೇಶ್ ಇನ್ನಿತರರ ರೈತ ಹೋರಾಟದಿಂದ ಪ್ರೇರಣೆಗೊಂಡು ನಾಲ್ಕು ದಶಕಕ್ಕೂ ಹೆಚ್ಚು ಕಾಲದಿಂದ ರೈತಪರ ಹೋರಾಟ ಮಾಡಿಕೊಂಡು ಬಂದವನು. ರೈತರ ಸಮಸ್ಯೆ ಏನು ಎನ್ನುವುದು ಶಾಸಕ ಹಾಲಪ್ಪ ಅವರಿಗಿಂತ ನನಗೆ ಚನ್ನಾಗಿ ಗೊತ್ತು ಎಂದು ಹೇಳಿದರು.

ಶಾಸಕರು ತಾವು ಶರಾವತಿ ಮುಳುಗಡೆ ಕುಟುಂಬದವರು ಎಂದು ಪದೇಪದೇ ಹೇಳುತ್ತಾರೆ. ಆದರೆ ಮುಳುಗಡೆ ಸಂತ್ರಸ್ತ ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಅವರ ಪ್ರಯತ್ನ ಏನು ಎಂದು ಪ್ರಶ್ನಿಸಿದ ಅವರು, ಸೊರಬ ಕ್ಷೇತ್ರದ ಶಾಸಕರಾಗಿದ್ದ ಸಂದರ್ಭದಲ್ಲಿ ಹಾಲಪ್ಪ ಅವರು ಕೆರೆಹಳ್ಳಿ, ತಾಳಗುಪ್ಪದಲ್ಲಿ ೩೨ಕ್ಕೂ ಹೆಚ್ಚು ರೈತರನ್ನು ಒಕ್ಕಲೆಬ್ಬಿಸಿದ್ದಾರೆ. ಇದನ್ನು ವಿರೋಧ ಮಾಡಿದ ೫೦ಕ್ಕೂ ಹೆಚ್ಚು ರೈತರನ್ನು ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಕೂಡಿಹಾಕಿದ್ದರು. ಈ ಸಂದರ್ಭದಲ್ಲಿ ಕಾಗೋಡು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ರೈತಪರ ಹೋರಾಟ ನಡೆಸಲಾಗಿತ್ತು. ಎಣ್ಣೆಕೊಪ್ಪದ ಭೋವಿ ಜನಾಂಗದ ರೈತರನ್ನು ಒಕ್ಕೆಲಬ್ಬಿಸುವ ಸಂದರ್ಭದಲ್ಲಿ ಸಹ ನಾವು ಹೋರಾಟ ಮಾಡಿದ್ದೇನೆ ಎಂದರು.

ಶಾಸಕರು ಜನರನ್ನು ಗಣಪತಿ ಕೆರೆ ಪಕ್ಕದಲ್ಲಿ ಧ್ವಜಸ್ತಂಭ ನಿರ್ಮಾಣ ಮಾಡಿ ಗಣಪತಿ ಕೆರೆ ಅಂಗಳವನ್ನು ಒತ್ತುವರಿ ಮಾಡಿದ್ದಾರೆ. ಕೆರೆ ಒತ್ತುವರಿಗೆ ಸಂಬಂಧಪಟ್ಟಂತೆ ಮೂರು ಬಾರಿ ಸರ್ವೆ ಕಾರ್ಯ ನಡೆದಿದ್ದು, ಒತ್ತುವರಿದಾರರ ಪಟ್ಟಿಯಲ್ಲಿ ಶಾಸಕರ ಹೆಸರು ಸಹ ಇದೆ. ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ವೈಫಲ್ಯ ಹೊಂದಿರುವ ಶಾಸಕರು ಸಣ್ಣಪುಟ್ಟ ಕಚೇರಿ ಎದುರು ಪ್ರತಿಭಟನೆ ನಡೆಸಿ ತಾವು ಅಸಮರ್ಥರು ಎಂದು ಸಾಬೀತುಪಡಿಸುತ್ತಿದ್ದಾರೆ. ಅದರ ಬದಲು ವಿಧಾನಸೌಧದಲ್ಲಿ ಧರಣಿ ಕುಳಿತುಕೊಳ್ಳಲಿ ಎಂದು ಸವಾಲು ಹಾಕಿದರು.

ಶರಾವತಿ ಮುಳುಗಡೆ ಸಂತ್ರಸ್ತರಿಗೆ, ಅರಣ್ಯಹಕ್ಕು ಸಾಗುವಳಿದಾರರಿಗೆ, ಬಗರ್‌ಹುಕುಂ ಸಾಗುವಳಿದಾರರಿಗೆ ಭೂಮಿ ಕೊಡಿಸುವಲ್ಲಿ ವಿಫಲವಾಗಿರುವ ಶಾಸಕರು ಹೇಗೆ ರೈತಪರವಾಗುತ್ತಾರೋ ನನಗೆ ಗೊತ್ತಿಲ್ಲ. ಅವರು ಮೂರು ಬಾರಿ ಶಾಸಕರಾಗಿದ್ದಾಗಲೂ ರೈತ ವಿರೋಧಿಯಾಗಿಯೇ ನಡೆದುಕೊಂಡಿದ್ದು, ನನ್ನನ್ನು ರೈತನಲ್ಲ ಎಂದು ಹೇಳುವ ಮೂಲಕ ಸಣ್ಣತನ ಪ್ರದರ್ಶನಕ್ಕೆ ಇಳಿದಿದ್ದಾರೆ. ಧರ್ಮಸ್ಥಳಕ್ಕೆ ಹೋಗಿ ಆಣೆಪ್ರಮಾಣ ಮಾಡುವ ಬದಲು ಸಾಗರದ ಮಾರಿಕಾಂಬಾ ದೇವಿ ಎದುರು ಜನರ ಎದುರು ತಾವು ಹಣ ಪಡೆದಿಲ್ಲ ಎಂದು ಪ್ರಮಾಣ ಮಾಡಲಿ. ಹಾಲಪ್ಪ ಅವರು ಸೋಲಿನ ಭೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ ಎಂದು ಹೇಳಿದರು.

ಗೋಷ್ಠಿಯಲ್ಲಿ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಅಧ್ಯಕ್ಷ ಕೆ.ಸಿದ್ದಪ್ಪ, ಪ್ರಮುಖರಾದ ಮಹ್ಮದ್ ಖಾಸಿಂ, ವೆಂಕಟೇಶ್, ವಸಂತ್ ಶೇಟ್, ಸುಭಾಷ್ ಎಲ್.ವಿ., ಪಾರ್ವತಿ ಬೇಸೂರು, ಇಂದೂಮತಿ, ದೀಪಾ ಕೆ. ಹಾಜರಿದ್ದರು.

ಟಾಪ್ ನ್ಯೂಸ್

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯ ಸಿಎಂ ಸ್ಥಾನದಲ್ಲಿದ್ದರೆ ತನಿಖೆ ಸರಿಯಾಗಿ ನಡೆಯದು: ಯದುವೀರ್

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Shimoga; ಮಂಗಳೂರಿಗೆ ಗೋಸಾಗಾಟ; ಬಜರಂಗದಳ ಕಾರ್ಯಕರ್ತರಿಂದ ದಾಳಿ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

Sagara: ಮಂಗಗಳ ಹಾವಳಿ; ಹಳ್ಳಿ ಮಹಿಳೆಯರ ಪ್ರತಿಭಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.