23 ಸಾವಿರ ರೈತರ ಮಕ್ಕಳಿಗೆ ಸಿಎಂ ವಿದ್ಯಾನಿಧಿ…ಏನಿದು ಯೋಜನೆ?

ರೈತರ ಮಕ್ಕಳು ಈ ಶಿಷ್ಯ ವೇತನ ಪಡೆಯಲು ದೊಡ್ಡ ಷರತ್ತುಗಳೇನೂ ಇಲ್ಲ.

Team Udayavani, Feb 12, 2022, 4:49 PM IST

23 ಸಾವಿರ ರೈತರ ಮಕ್ಕಳಿಗೆ ಸಿಎಂ ವಿದ್ಯಾನಿಧಿ…ಏನಿದು ಯೋಜನೆ?

ಬಾಗಲಕೋಟೆ: ರೈತರ ಮಕ್ಕಳು ರೈತರಾಗದೇ ಅವರೂ ಉನ್ನತ ಶಿಕ್ಷಣ ಪಡೆಯಲಿ ಎಂಬ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ, ಜಿಲ್ಲೆಯಲ್ಲಿ ಬಹುತೇಕ ಯಶಸ್ವಿಯಾಗಿದೆ. ಹೌದು, ಈ ಯೋಜನೆಯಡಿ ಜಿಲ್ಲೆಯ 9 ತಾಲೂಕು ವ್ಯಾಪ್ತಿಯಲ್ಲಿ 23,690 ಜನ ರೈತ ಮಕ್ಕಳಿಗೆ ತಲುಪಿದೆ. ಅಷ್ಟೂ ಮಕ್ಕಳ ಪಾಲಕ ರೈತರ ಖಾತೆಗೆ ರಾಜ್ಯ ಸರ್ಕಾರ ಬರೋಬ್ಬರಿ 5.849 ಕೋಟಿ ಶಿಷ್ಯ ವೇತನ ಹಣವನ್ನು ಪಾವತಿಸಲಾಗಿದೆ.

ಏನಿದು ಯೋಜನೆ?: ರೈತರ ಮಕ್ಕಳು ಬಹುತೇಕ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವರೆಗೆ ಮಾತ್ರ ಶಿಕ್ಷಣ ಪಡೆದು, ಮುಂದೆ ಒಕ್ಕಲುತನದ ಜವಾಬ್ದಾರಿವೊಡ್ಡುವುದು ಸಾಮಾನ್ಯ. ಆರ್ಥಿಕ ಸಮಸ್ಯೆ, ಕಲಿಕೆಗೆ ಪ್ರೋತ್ಸಾಹ ಇಲ್ಲದೇ ರೈತರ ಮಕ್ಕಳು ರೈತರೇ ಆಗುವುದು ಬಹುತೇಕ ಪರಂಪರೆ. ಇದನ್ನು ಗಮನಿಸಿದ ಸರ್ಕಾರ, ರೈತರ ಮಕ್ಕಳೂ ಉನ್ನತ ಶಿಕ್ಷಣ ಕಲಿಯಲಿ ಎಂಬ ಸದುದ್ದೇಶದಿಂದ ಹೊಸ ಯೋಜನೆ ರೂಪಿಸಿ ಜಾರಿಗೊಳಿಸಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೊಸದಾಗಿ ಜಾರಿಗೊಳಿಸಿದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆಗೆ ವಿಶೇಷ ಆಸಕ್ತಿ ಹಾಗೂ ಒತ್ತು ಕೂಡ ನೀಡಿದ್ದಾರೆ. ಈ ಯೋಜನೆಯಡಿ 2021-22ನೇ ಸಾಲಿನಲ್ಲಿ ಜಿಲ್ಲೆಯ 23,690 ಜನ ವಿದ್ಯಾರ್ಥಿಗಳಿಗೆ ತಲುಪಬೇಕಿದ್ದ 5.849 ಕೋಟಿ ಅನುದಾನ ಒದಗಿಸಿದ್ದು, ಅದು ರೈತರ ಖಾತೆಗೆ ನೇರವಾಗಿ ಜಮೆ ಕೂಡ ಆಗಿದೆ.

ಮೊದಲನೆಯ ಹಂತದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಕಲ್ಪಿಸಲಾಗಿದೆ. ಈ ಶಿಷ್ಯ ವೇತನ 8ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೂ ಕೂಡ ತಲಾ 2 ಸಾವಿರದಂತೆ ದೊರೆಯಲಿದೆ.

ಷರತ್ತು ಏನು: ರೈತರ ಮಕ್ಕಳು ಈ ಶಿಷ್ಯ ವೇತನ ಪಡೆಯಲು ದೊಡ್ಡ ಷರತ್ತುಗಳೇನೂ ಇಲ್ಲ. ವಿದ್ಯಾರ್ಥಿಗಳ ತಂದೆ-ತಾಯಿ ಹೆಸರಿನಲ್ಲಿ ಭೂಮಿ ಹೊಂದಿರಬೇಕು. ತಂದೆ ಅಥವಾ ತಾಯಿ ರೈತರ ಗುರುತಿನ ಸಂಖ್ಯೆ (ಎಫ್‌ ಐಡಿ) ಹೊಂದಿದ್ದರೆ ಸಾಕು. ಈ ಎರಡು ಷರತ್ತು ಬಿಟ್ಟರೆ, ಯೋಜನೆಯ ಲಾಭ ಪಡೆಯಲು ಬೇರೇನೂ ಷರತ್ತು ಸರ್ಕಾರ ಹಾಕಿಲ್ಲ. ಹೀಗಾಗಿ ಭೂಮಿ ಮತ್ತು ಗುರುತಿನ ಚೀಟಿ ಹೊಂದಿದ ಬಹುತೇಕ ರೈತರ ಮಕ್ಕಳಿಗೆ ಈ
ಯೋಜನೆಯ ಲಾಭ ದೊರೆಯುತ್ತದೆ. ರಾಜ್ಯ ಸರ್ಕಾರ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹಿಸಲು ವಿವಿಧ ಹಂತದ ಶಿಷ್ಯ ವೇತನ ನೀಡುತ್ತಿದೆ. ಪಿಯುಸಿ, ಐಟಿಐ, ಡಿಪ್ಲೋಮಾದ ವಿದ್ಯಾರ್ಥಿಗಳಿಗೆ ತಲಾ 2500 ಹಾಗೂ ವಿದ್ಯಾರ್ಥಿನಿಯರಿಗೆ 3 ಸಾವಿರ, ಬಿಎ, ಬಿಎಸ್ಸಿ, ಬಿ.ಕಾಂ ಇನ್ನಿತರೆ ಪದವಿ ವಿದ್ಯಾರ್ಥಿಗಳಿಗೆ ತಲಾ 5 ಸಾವಿರ, ವಿದ್ಯಾರ್ಥಿನಿಯರಿಗೆ ತಲಾ 5500, ಎಲ್‌ಎಲ್‌ಬಿ, ಪ್ಯಾರಾ ಮೆಡಿಕಲ್‌, ಬಿ.ಫಾ ರ್ಮ್, ನರ್ಸಿಂಗ್‌ ಇನ್ನಿತರೆ ವೃತ್ತಿಪರ ಕೋಸ್‌ಗಳ ವಿದ್ಯಾರ್ಥಿಗಳಿಗೆ ತಲಾ 7500, ವಿದ್ಯಾರ್ಥಿನಿಯರಿಗೆ ತಲಾ 8 ಸಾವಿರ, ಎಂಬಿಬಿಎಸ್‌, ಬಿ.ಇ, ಬಿ.ಟೆಕ್‌ ಮತ್ತು ಎಲ್ಲ ಸ್ನಾತಕೋತ್ತರ ಕೋರ್ಸ್‌ ಗಳ ವಿದ್ಯಾರ್ಥಿಗಳಿಗೆ ತಲಾ 10 ಸಾವಿರ, ವಿದ್ಯಾರ್ಥಿನಿಯರಿಗೆ ತಲಾ 11 ಸಾವಿರ ಶಿಷ್ಯ ವೇತನ ನೀಡಲಾಗುತ್ತದೆ.

ಯಾವ ತಾಲೂಕಿಗೆ ಎಷ್ಟು ವಿದ್ಯಾರ್ಥಿಗಳು?:
ಹೊಸದಾಗಿ ರಚನೆಗೊಂಡ ಇಳಕಲ್ಲ (ಹುನಗುಂದ), ಗುಳೇದಗುಡ್ಡ (ಬಾದಾಮಿ), ರಬಕವಿ-ಬನಹಟ್ಟಿ (ಜಮಖಂಡಿ) ತಾಲೂಕುಗಳೂ ಸೇರಿ ಒಟ್ಟು 6 (ಹಳೆಯ ತಾಲೂಕಿನಡಿ ವಿವರ ನೀಡಲಾಗಿದೆ) ತಾಲೂಕಿನ ವಿದ್ಯಾರ್ಥಿಗಳೂ ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಅದರಲ್ಲಿ ಬಾದಾಮಿ-3364 ವಿದ್ಯಾರ್ಥಿಗಳು (ರೂ.79,77,000), ಬಾಗಲಕೋಟೆ-4019 ವಿದ್ಯಾರ್ಥಿಗಳು (ರೂ.1,01,36,500), ಹುನಗುಂದ-3767 ವಿದ್ಯಾರ್ಥಿಗಳು (ರೂ.91,85,500), ಬೀಳಗಿ-1937 (ರೂ.47,14,500), ಜಮಖಂಡಿ-6766 (ರೂ.1,72,07,500) ಹಾಗೂ ಮುಧೋಳ-3837 (ರೂ.92,48,000) ಸೇರಿ ಒಟ್ಟು 23,690 ವಿದ್ಯಾರ್ಥಿಗಳಿಗೆ ಒಟ್ಟು 5,84,69,000 ರೂ. ವಿದ್ಯಾರ್ಥಿಗಳು ಶಿಷ್ಯವೇತನ ಪಡೆದಿದ್ದಾರೆ.

ಮುಖ್ಯಮಂತ್ರಿ ವಿದ್ಯಾನಿಧಿ
ಯೋಜನೆಯಡಿ ರೈತ ಮಕ್ಕಳ ಶಿಷ್ಯ ವೇತನ ಯೋಜನೆಯಡಿ ಜಿಲ್ಲೆಯ 23690 ವಿದ್ಯಾರ್ಥಿಗಳಿಗೆ 5.849 ಕೋಟಿ ಜಮೆ ಆಗಿದೆ. ಮೊದಲ ಹಂತದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಕಲ್ಪಿಸಲಾಗಿದೆ. 8ರಿಂದ 10ನೇ ತರಗತಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಕೂಡ ತಲಾ ರೂ. 2 ಸಾವಿರ ಶಿಷ್ಯ ವೇತನ ದೊರೆಯಲಿದೆ. ಜಿಲ್ಲೆಯ ವಿದ್ಯಾರ್ಥಿಗಳು ಇದರ ಲಾಭ ಪಡೆಯಬೇಕು.
ಡಾ|ಚೇತನಾ ಪಾಟೀಲ,
ಜಂಟಿ ಕೃಷಿ ನಿರ್ದೇಶಕಿ, ಕೃಷಿ ಇಲಾಖೆ

ಶ್ರೀಶೈಲ ಕೆ. ಬಿರಾದಾರ

ಟಾಪ್ ನ್ಯೂಸ್

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

Mudhol: ಸಮಸ್ಯೆ ಆಲಿಸಲು ಬಂದ ಅಧಿಕಾರಿಗಳ ದರ್ಪದ ನಡೆಗೆ ಗ್ರಾಮಸ್ಥರ ಆಕ್ರೋಶ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

ಗ್ರಾಹಕರ ಸಂತೃಪ್ತಿಯೇ ಸಹಕಾರಿ ಯಶಸ್ಸಿನ ಜೀವಾಳ: ಚಿದಾನಂದ ಗಾಳಿ

2-mudhola

ತಿಮ್ಮಾಪುರ ಮಾತಿಗೆ ಯತ್ನಾಳ‌ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ

3-rabakavi

Rabkavi Banhatti: ತೇರಿನ ಮೇಲಿನಿಂದ ಬಿದ್ದ ವ್ಯಕ್ತಿ ಸ್ಥಳದಲ್ಲೇ ಸಾವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.