ನಡೆ ನುಡಿಗಳಲ್ಲಿ ಸ್ವಚ್ಛತೆ ಇಲ್ಲದೆ ಬೋಧನೆ ಸಲ್ಲದು: ಸೇತುರಾಮ್‌

ಕಾಂತಾವರ: ಮುದ್ದಣ ಸಾಹಿತ್ಯೋತ್ಸವ, ದತ್ತಿನಿಧಿ ಪ್ರಶಸ್ತಿ ಪ್ರದಾನ

Team Udayavani, Feb 14, 2022, 5:45 AM IST

ನಡೆ ನುಡಿಗಳಲ್ಲಿ ಸ್ವಚ್ಛತೆ ಇಲ್ಲದೆ ಬೋಧನೆ ಸಲ್ಲದು: ಸೇತುರಾಮ್‌

ಮೂಡುಬಿದಿರೆ: ಅನ್ಯಾಯ, ಅನಾಚಾರ ನಡೆದಾಗ ಪ್ರತಿರೋಧಿಸಬಲ್ಲವರಾಗಬೇಕು. ನಮ್ಮ ನಡೆನುಡಿಗಳಲ್ಲಿ ಸ್ವಚ್ಛತೆ ಕಾಪಾಡಿಕೊಂಡಾಗ ಮಾತ್ರ ಆ ಆರ್ಹತೆ ಪ್ರಾಪ್ತಿಯಾಗುತ್ತದೆ. ವೈಯಕ್ತಿಕ ವಾಗಿ ಸ್ವಚ್ಛ ಬದುಕನ್ನು ರೂಢಿಸದೆ ಅನ್ಯರಿಗೆ ಬೋಧಿಸುವ ಚಪಲ ಸಲ್ಲದು ಎಂದು ರಂಗಕರ್ಮಿ, ಸಾಹಿತಿ ಎಸ್‌.ಎನ್‌. ಸೇತುರಾಮ್‌ ಅಭಿಪ್ರಾಯಪಟ್ಟರು.

ಕಾಂತಾವರ ಕನ್ನಡ ಸಂಘದ ಆಶ್ರಯದಲ್ಲಿ ಕನ್ನಡ ಭವನದಲ್ಲಿ ರವಿವಾರ ನಡೆದ ಮುದ್ದಣ ಸಾಹಿತ್ಯೋತ್ಸವ- 2022ರಲ್ಲಿ 43ನೇ ವರ್ಷದ ಮುದ್ದಣ ಕಾವ್ಯ ಪ್ರಶಸ್ತಿ ಮತ್ತು ಸಂಘದ ಇತರ ದತ್ತಿನಿಧಿಗಳ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕ.ಸಾ.ಪ. ರಾಜ್ಯ ಮಾಜಿ ಅಧ್ಯಕ್ಷ, ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಪಠೇಲ್‌ ಪುನರೂರು ವಾಸುದೇವ ರಾವ್‌ ಸ್ಮಾರಕ ದತ್ತಿಯ ಮುದ್ದಣ ಕಾವ್ಯ ಪ್ರಶಸ್ತಿ ವಿಜೇತ ಕವನ ಸಂಕಲನ ಬಿಡುಗಡೆಗೊಳಿಸಿ, ಚಿತ್ರದುರ್ಗದ ಡಾ| ತಾರಿಣಿ ಶುಭದಾಯಿನಿ ಅವರಿಗೆ “ಮುದ್ದಣ ಕಾವ್ಯ ಪ್ರಶಸ್ತಿ’ ಪ್ರದಾನ ಮಾಡಿದರು.

ಹಿರಿಯ ಪತ್ರಕರ್ತ ರವೀಂದ್ರ ಭಟ್‌ ಐನಕೈ ಅವರಿಗೆ ಪಾ.ವೆಂ. ಆಚಾರ್ಯ ಹೆಸರಿನ “ಪತ್ರಿಕಾ ಮಾಧ್ಯಮ ಪ್ರಶಸ್ತಿ’ ಮತ್ತು ಡಾ| ಬೇಲೂರು ರಘನಂದನ ಅವರಿಗೆ ರಂಗಕರ್ಮಿ ಶ್ರೀಪತಿ ಮಂಜನಬೈಲ್‌ ಅವರ “ರಂಗಸಮ್ಮಾನ್‌ ಪ್ರಶಸ್ತಿ’ ಯನ್ನು ಹರಿಕೃಷ್ಣ ಪುನರೂರು ಪ್ರದಾನಗೈದರು.

ಸಾಹಿತಿ ಕೆ.ಇ. ರಾಧಾಕೃಷ್ಣ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿ ಮಾತನಾಡಿದರು. ಡಾ| ತಾರಿಣಿ ಮತ್ತು ರವೀಂದ್ರ ಭಟ್‌ ಐನಕೈ ಅವರು ಪ್ರಶಸ್ತಿಯ ಮೊತ್ತವನ್ನು ಕನ್ನಡ ಸಂಘಕ್ಕೆ ದೇಣಿಗೆಯಾಗಿ ಮರಳಿಸಿದರೆ, ಡಾ| ಬೇಲೂರು ರಘುನಂದನ ಮೊತ್ತವನ್ನು ರಂಗಭೂಮಿಯಲ್ಲಿ ತಮ್ಮೊಂದಿಗೆ ದುಡಿಯುತ್ತಿರುವ ಐವರಿಗೆ ಹಂಚುವುದಾಗಿ ಪ್ರಕಟಿಸಿದರು.

ಕನ್ನಡ ಸಂಘದ ಕಾರ್ಯಾಧ್ಯಕ್ಷ ಡಾ| ನಾ. ಮೊಗಸಾಲೆ ಪ್ರಸ್ತಾವಿಸಿದರು. ಪ್ರ. ಕಾರ್ಯದರ್ಶಿ ಸದಾನಂದ ನಾರಾವಿ ಸ್ವಾಗತಿಸಿ, ಜತೆ ಕಾರ್ಯದರ್ಶಿ ಸತೀಶ್‌ ಕುಮಾರ್‌ ಕೆಮ್ಮಣ್ಣು ವಂದಿಸಿದರು. ಮಹಾವೀರ ಪಾಂಡಿ ನಿರೂಪಿಸಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.