ಬಸ್ರೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ವಿಜಯದ ದಿನಾಚರಣೆ

ಪೋರ್ಚುಗೀಸರ ವಿರುದ್ಧ ವಿಜಯೋತ್ಸವಕ್ಕೆ 357 ವರ್ಷ

Team Udayavani, Feb 14, 2022, 5:50 AM IST

ಬಸ್ರೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ವಿಜಯದ ದಿನಾಚರಣೆ

ಬಸ್ರೂರು: ಛತ್ರಪತಿ ಶಿವಾಜಿ ಮಹಾರಾಜರು ಪೋರ್ಚುಗೀಸರ ವಿರುದ್ಧ ಪ್ರಥಮ ನೌಕಾಯಾನ ಕೈಗೊಂಡು, ಬಸ್ರೂರಿನಲ್ಲಿ ವಿಜಯ ಪತಾಕೆ ಹಾರಿಸಿದ ದಿನ 1665ರ ಫೆ. 13 ಆಗಿದ್ದು, ಅದರ ಸವಿನೆನಪಿಗಾಗಿ ಬಸೂÅರಿನ ಛತ್ರಪತಿ ಶಿವಾಜಿ ಅಭಿಮಾನಿ ಬಳಗದಿಂದ “ಬಸ್ರೂರು ಸ್ವಾತಂತ್ರ್ಯ ದಿನಾಚರಣೆ’ ಕಾರ್ಯಕ್ರಮ ರವಿವಾರ ಬಸ್ರೂರಿನ ಶ್ರೀ ದೇವಿ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಭಾರತೀಯ ಸಂತಸಭಾದ ಸಂಘಟನ ಪ್ರಧಾನ ಕಾರ್ಯದರ್ಶಿ ಡಾ| ಸಂದೀಪ್‌ ರಾಜ್‌ ಮಹದೇವ ರಾವ್‌ ಮಹಿಂದ್‌ ಪುಣೆ ಮಾತನಾಡಿದರು. 357 ವರ್ಷಗಳ ಹಿಂದೆ ಛತ್ರಪತಿ ಶಿವಾಜಿ ಮಹಾರಾಜರು ಬಸ್ರೂರಿಗೆ ಮಾತ್ರ ಸ್ವಾತಂತ್ರ್ಯ ದೊರಕಿಸಿಕೊಟ್ಟಿಲ್ಲ. ಭಾರತದಿಂದ ಪೋರ್ಚುಗೀಸರು ತೊಲಗಲು ಅದೇ ದಿನ ಅಡಿಗಲ್ಲನ್ನು ಹಾಕಿದ್ದರು. ಅಂಥವರ ನೆನಪಿನಲ್ಲಿ ಬಸ್ರೂರಿನಲ್ಲಿ 9 ವರ್ಷಗಳಿಂದ ಕಾರ್ಯಕ್ರಮ ನಡೆಯುತ್ತಿರುವುದು ಗಮನಾರ್ಹ. ಪ್ರಮುಖ ವ್ಯಾಪಾರ ಕೇಂದ್ರ, ಬಂದರು ಪ್ರದೇಶವಾಗಿದ್ದ ಈ ಊರಿಗೆ ಇತಿಹಾಸದಲ್ಲಿ ಹೆಚ್ಚು ಪ್ರಾಮುಖ್ಯ ಇದೆ ಎಂದರು.

ಭಾರತೀಯ ಇತಿಹಾಸ ಸಂಕಲನ ಸಮಿತಿಯ ಮಹಿಳಾ ಪ್ರಮುಖ್‌ ಡಾ| ಸೀಮಾ ಉಪಾಧ್ಯಾಯ ಮಾತನಾಡಿ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಶಿವಾಜಿ ಮಹಾರಾಷ್ಟ್ರಕ್ಕೆ ಸೀಮಿತರಾದವರಲ್ಲ. ದೇಶಕ್ಕೆ ಸ್ವಾತಂತ್ರ್ಯ ಕೊಡಿಸುವಲ್ಲಿ ಶ್ರಮಿಸಿದ ಮಹಾನ್‌ ವ್ಯಕ್ತಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಚೈತ್ರಾ ಕುಂದಾಪುರ, ಭಜರಂಗ ದಳ ತಾಲೂಕು ಸಂಚಾಲಕ ಸುಧೀರ್‌ ಮೇರ್ಡಿ ಮತ್ತಿತರರು ಭಾಗವಹಿಸಿದ್ದರು.

ಮೆರವಣಿಗೆ
ಇದಕ್ಕೆ ಮುನ್ನ ಬಸ್ರೂರಿನ ಮಂಡಿಕೇರಿ ಹೊಳೆಬಾಗಿಲಿನಿಂದ ಶ್ರೀ ದೇವಿ ದೇಗುಲದ ವರೆಗೆ ಸಾಂಪ್ರದಾಯಿಕ ಶೋಭಾಯಾತ್ರೆ ನಡೆಯಿತು. ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಉಮೇಶ್‌ ಆಚಾರ್ಯ ಬಸ್ರೂರು ಸ್ವಾಗತಿಸಿ, ಸಾರಿಕಾ ಕಾರ್ಯಕ್ರಮ ನಿರೂಪಿಸಿದರು. ರಾಕೇಶ್‌ ಜಿ. ಕೆಳಮನೆ ವಂದಿಸಿದರು.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe-See-Ambulance

Tender Open: ತುರ್ತು ಸೇವೆಗೆ ಬರಲಿದೆ ಮೂರು ಸೀ ಆ್ಯಂಬುಲೆನ್ಸ್‌

kunita-bhajane

Kaup: ಉಚ್ಚಿಲ ದಸರಾ: ಐತಿಹಾಸಿಕ ದಾಖಲೆ ಬರೆದ ಸಾಮೂಹಿಕ ಕುಣಿತ ಭಜನೆ

Comet

Comet of the Century: ಅಕ್ಟೋಬರ್‌ನಲ್ಲಿ ಧೂಮಕೇತುಗಳ ಮೆರವಣಿಗೆ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.