ಪ್ರೌಢಶಾಲೆಗಳು ನಿರಾತಂಕವಾಗಿ ಆರಂಭ : ಪೊಲೀಸರ ಬಿಗಿ ಭದ್ರತೆ


Team Udayavani, Feb 15, 2022, 2:34 PM IST

ಪ್ರೌಢಶಾಲೆಗಳು ನಿರಾತಂಕವಾಗಿ ಆರಂಭ : ಪೊಲೀಸರ ಬಿಗಿ ಭದ್ರತೆ

ಉಡುಪಿ: ಹಿಜಾಬ್‌-ಕೇಸರಿ ವಿವಾದದಿಂದ ರಜೆ ನೀಡಲಾಗಿದ್ದ ಪ್ರೌಢಶಾಲೆಗಳಲ್ಲಿ ಸೋಮವಾರದಿಂದ ಯಾವುದೇ ಸಮಸ್ಯೆ, ಗೊಂದಲಗಳಿಲ್ಲದೆ ಶೈಕ್ಷಣಿಕ ಚಟುವಟಿಕೆಗಳು ಶಾಂತವಾಗಿ ನಡೆದಿದೆ.

ಉಡುಪಿ ನಗರದ ಕೆಲವು ಪ್ರೌಢಶಾಲೆಗಳಲ್ಲಿ ಪೊಲೀಸ್‌ ಭದ್ರತೆ ನಿಯೋಜಿಸಲಾಗಿತ್ತು. ವಿದ್ಯಾರ್ಥಿಗಳು ಶಾಲೆಯ ಕ್ಯಾಂಪಸ್‌ ಒಳಗೆ ಹಿಜಾಬ್‌, ಬುರ್ಖಾ ಧರಿಸಿ ಬಂದಿದ್ದರೂ, ತರಗತಿ ಒಳಗೆ ಬುರ್ಖಾ ಹಾಗೂ ಹಿಜಾಬ್‌ ತೆಗೆದಿಟ್ಟು ಹೋಗಿದ್ದಾರೆ. ಸಮವಸ್ತ್ರ ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ಹಾಗೂ ಯಾವುದೇ ಅಹಿತಕರ ಘಟನೆ ನಡೆಯ ದಂತೆ ಜಿಲ್ಲಾಡಳಿತದಿಂದ ನಿಷೇಧಾಜ್ಞೆ ಜಾರಿ ಮಾಡಿರುವುದರಿಂದ ಪ್ರೌಢ ಶಾಲಾವರಣ ದಲ್ಲಿ ಸಾರ್ವಜನಿಕರು ಗುಂಪು ಸೇರಲು ಅವಕಾಶ ನೀಡಿರಲಿಲ್ಲ.

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಪೂರ್ವ ಸಿದ್ಧತಾ ಪರೀಕ್ಷೆ ನಡೆಯುತ್ತಿರುವುದರಿಂದ ವಿದ್ಯಾರ್ಥಿಗಳ ಎಂದಿನಂತೆ ಶಾಲೆ ಬಂದು ಪರೀಕ್ಷೆ ಬರೆದು ಹೋಗಿದ್ದಾರೆ. 9ನೇ ತರಗತಿ ವಿದ್ಯಾರ್ಥಿಗಳಿಗೆ ನಿತ್ಯದ ಶೈಕ್ಷಣಿಕ ಚಟುವಟಿಕೆ ನಡೆದಿದೆ.

ಶಾಲಾ ಕಾಲೇಜು ಆವರಣದಲ್ಲಿ ಧಾರ್ಮಿಕ ಸಂಕೇತದ ಧರಿಸು ಧರಿಸುವಂತಿಲ್ಲ ಎಂದು ಹೈಕೋರ್ಟ್‌ ಮಧ್ಯಾಂತರ ತೀರ್ಪು ನೀಡಿದ್ದರೂ ಕೆಲವು ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್‌ ಹಾಗೂ ಬುರ್ಖಾ ಧರಿಸಿ ಬಂದಿದ್ದರು. ಆದರೆ ಆ ವಿದ್ಯಾರ್ಥಿಗಳು ತರಗತಿ ಒಳಗೆ ಪ್ರವೇಶ ಮಾಡುವ ಸಂದರ್ಭದಲ್ಲಿ ಬುರ್ಖಾ, ಹಿಜಾಬ್‌ ತೆಗೆದು, ಶಾಲಾ ಸಮವಸ್ತ್ರದಲ್ಲಿ ಹೋಗಿದ್ದಾರೆ.
ಉಡುಪಿ ಸರಕಾರಿ ಬಾಲಕಿಯರ ಪ್ರೌಢ ಶಾಲೆಗೆ ಪ್ರಭಾರ ಡಿಡಿಪಿಐ ಗೋವಿಂಡ ಮಡಿವಾಳ ಅವರು ಭೇಟಿ ನೀಡಿ, ಅಲ್ಲಿನ ಪರಿಸ್ಥಿತಿಗಳನ್ನು ಅವಲೋಕಿಸಿದರು. ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲನೆ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಹಿಜಾಬ್ ವಿವಾದದ ಬಗ್ಗೆ ಚರ್ಚಿಸಲು ಹಿರಿಯ ನಾಯಕರ ಸಭೆ ಕರೆದ ಸಿದ್ದರಾಮಯ್ಯ

ಎಸ್‌ಡಿಎಂಸಿ ಸಭೆ
ಬಹುತೇಕ ಪ್ರೌಢಶಾಲೆಗಳಲ್ಲಿ ಸೋಮವಾರ ಎಸ್‌ಡಿಎಂಸಿ ಸದಸ್ಯರ ಸಭೆ ನಡೆಸಲಾಗಿದೆ. ಸಭೆಯಲ್ಲಿ ಸಮವಸ್ತ್ರ ಕಟ್ಟುನಿಟ್ಟಾಗಿ ಪಾಲಿಸುವ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಂಡಿದ್ದಾರೆ. ಅಲ್ಲದೆ, ಹೈಕೋರ್ಟ್‌ ನೀಡಿರುವ ಮಧ್ಯಾಂತರ ತೀರ್ಪು, ಮುಂದೆ ಬರೆಲಿರುವ ಅಂತಿಮ ತೀರ್ಪನ್ನು ಪಾಲಿಸುವ ಬಗ್ಗೆ ನಿರ್ಧರಿಸಿದ್ದಾರೆ.

ಬಿಗಿ ಪೊಲೀಸ್‌ ಭದ್ರತೆ
ಪ್ರೌಢಶಾಲೆಗಳಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದು ಎಂಬ ಸದುದ್ದೇಶದಿಂದ ಪೊಲೀಸ್‌ ಇಲಾಖೆಯಿಂದ ಬಿಗಿ ಪೊಲೀಸ್‌ ಭದ್ರತೆ ಒದಗಿಸಲಾಗಿತ್ತು. ಪೊಲೀಸ್‌ ಸಿಬಂದಿ ಬೆಳಗ್ಗೆಯಿಂದ ಸಂಜೆಯವರೆಗೂ ಶಾಲೆಯ ಆವರಣದಲ್ಲೇ ಇದ್ದು, ಸಮವಸ್ತ್ರ ನಿಯಮ ಪಾಲನೆ ಮತ್ತು ನಿಯಮ ಉಲ್ಲಂಘನೆ ಆಗದೇ ಇರುವ ಬಗ್ಗೆ ನಿಗಾ ವಹಿಸಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.