ಶೀಘ್ರ ಲೆಕ್ಕಪರಿಶೋಧನ ಮಾರ್ಗಸೂಚಿ: ಸಚಿವ ಎಸ್.ಟಿ. ಸೋಮಶೇಖರ್
Team Udayavani, Feb 15, 2022, 10:15 PM IST
ಬೆಂಗಳೂರು: ಸಹಕಾರ ಸಂಘಗಳ ಕ್ರಮಬದ್ಧ ಹಾಗೂ ಗುಣಮಟ್ಟದ ಲೆಕ್ಕಪರಿಶೋಧನೆಗೆ ಶೀಘ್ರದಲ್ಲೇ ಲೆಕ್ಕ ಪರಿಶೋಧನ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಭಾರತಿ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮುಂದಿನ ಅಧಿವೇಶನದಲ್ಲಿ ಈ ಸಂಬಂಧ ಮಸೂದೆ ತರಲಾಗುವುದು. ಎ. 1ರಿಂದ ಹೊಸ ಮಾರ್ಗಸೂಚಿಗಳನ್ನು ಜಾರಿಗೆ ತರಲಾಗುವುದು ಎಂದರು.
ಇಲಾಖೆಯ ಲೆಕ್ಕಪರಿಶೋಧಕರಿಂದಲೇ ಲೆಕ್ಕ ಪರಿಶೋಧನೆ ಮಾಡಿಸಲಾಗುತ್ತಿತ್ತು. ಖಾಸಗಿಯವರಿಗೆ ಅನುಮತಿ ಕೊಟ್ಟಿರಲಿಲ್ಲ. ಆದರೆ, ಇಲಾಖೆಯಲ್ಲಿ ಸಾಕಷ್ಟು ಲೆಕ್ಕಪರಿಶೋಧಕರ ಹುದ್ದೆಗಳು ಖಾಲಿ ಇರುವುದರಿಂದ ಕಾಲಮಿತಿಯಲ್ಲಿ ಲೆಕ್ಕಪರಿಶೋಧನೆಗಳು ನಡೆಯತ್ತಿರಲಿಲ್ಲ. ಹಾಗಾಗಿ, ಖಾಸಗಿಯವರಿಗೆ ಅನುಮತಿ ನೀಡಲಾಯಿತು. ಅದರಂತೆ 1,700 ಲೆಕ್ಕಪರಿಶೋಧಕರು ನೋಂದಾಯಿಸಿಕೊಂಡಿದ್ದಾರೆ.
ಖಾಸಗಿ ಲೆಕ್ಕಪರಿಶೋಧಕರು ಮಾಡುವ ಆಡಿಟ್ಗಳನ್ನು ಮರು ಲೆಕ್ಕಪರಿಶೋಧನೆಗೆ ಒಳಪಡಿಸಲಾಗುತ್ತದೆ. ಒಂದೊಮ್ಮೆ ತಪ್ಪು ಅಥವಾ ಅವ್ಯವಹಾರ ಕಂಡು ಬಂದರೆ ಅಂತಹ ಲೆಕ್ಕಪರಿಶೋಧಕರನ್ನು ನಿಷೇಧಿಸಲಾಗುತ್ತದೆ. ಈವರೆಗೆ 60 ಖಾಸಗಿ ಲೆಕ್ಕಪರಿಶೋಧಕರನ್ನು ಇಲಾಖೆಯಿಂದ ನಿಷೇಧಿಸಲಾಗಿದೆ. 11 ಸಹಕಾರ ಸಂಘಗಳ ಮರು ಲೆಕ್ಕಪರಿಶೋಧನೆ ನಡೆಯುತ್ತಿದೆ. ಖಾಲಿ ಇರುವ 402 ಲೆಕ್ಕಪರಿಶೋಧಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CCB Police: ಅಂಚೆ ಮೂಲಕ ತರಿಸಿದ್ದ 21 ಕೋಟಿ ರೂ. ಡ್ರಗ್ಸ್ ಜಪ್ತಿ!
Assembly Session: ಡಿ. 9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?
ಕಲೆಕ್ಷನ್ ಬಿಟ್ಟು ನನ್ನ ಬಗೆಗಿನ ತೀರ್ಪು ಓದಲಿ: ಪರಂಗೆ ಯತ್ನಾಳ್ ತಿರುಗೇಟು
MUDA CASE: 2 ಪುಟಗಳಲ್ಲಿ 41 ಪ್ರಶ್ನೆ ಮುಂದಿಟ್ಟ ಇ.ಡಿ.; ಅಯುಕ್ತರಿಗೆ ಪ್ರಶ್ನೆಗಳ ಸುರಿಮಳೆ
ಮುಡಾ ಕಚೇರಿಗೆ ಇ.ಡಿ. ದಾಳಿ: ಸರಕಾರ-ವಿಪಕ್ಷ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಚುನಾವಣೆ: ಆರೆಸ್ಸೆಸ್ನಿಂದ 60,000 ಸಭೆ ನಡೆಸಲು ನಿರ್ಧಾರ
New Policy: ಜೊಮ್ಯಾಟೋ, ಸ್ವಿಗ್ಗಿಫುಡ್ ಡೆಲಿವರಿ ಮಾಡುವರಿಗೆ ಸಾಮಾಜಿಕ ಭದ್ರತೆ ನೀತಿ?
Inteligence: ಉತ್ತರ ಕೊರಿಯಾದಿಂದ ರಷ್ಯಾಕ್ಕೆ 12,000 ಸೈನಿಕರು: ದಕ್ಷಿಣ ಕೊರಿಯಾ ಹೇಳಿಕೆ
Tragedy: ಬಿಹಾರದ 2 ಜಿಲ್ಲೆಗಳಲ್ಲಿ ಕಳ್ಳಭಟ್ಟಿ ದುರಂತ: ಒಟ್ಟು 35 ಮಂದಿ ಸಾವು
Maharashtra: ವಾಣಿಜ್ಯ ವಾಹನಗಳಿಗೂ ಇನ್ನು ಡೀಲರ್ಗಳಿಂದಲೇ ನೋಂದಣಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.