ಸದನದ ಗೌರವ ಎತ್ತಿ ಹಿಡಿಯುವುದು ಎಲ್ಲ ಸದಸ್ಯರ ಕರ್ತವ್ಯ


Team Udayavani, Feb 17, 2022, 6:00 AM IST

ಸದನದ ಗೌರವ ಎತ್ತಿ ಹಿಡಿಯುವುದು ಎಲ್ಲ ಸದಸ್ಯರ ಕರ್ತವ್ಯ

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಾಟ ವಿಚಾರ ವಿಧಾನಮಂಡಲದ ಉಭಯ ಸದನಗಳಲ್ಲೂ ಬುಧವಾರ ಭಾರೀ ಗದ್ದಲ ಸೃಷ್ಟಿಸಿತು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಕೆ.ಎಸ್‌.ಈಶ್ವರಪ್ಪ ಅವರು ಮುಂದೊಂದು ದಿನ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸಬಹುದು ಎಂದು ಹೇಳಿದ್ದಾರೆ ಎನ್ನಲಾದ ಮಾಧ್ಯಮ ಹೇಳಿಕೆಯೇ ಇಷ್ಟೆಲ್ಲ ವಿವಾದಕ್ಕೆ ಕಾರಣವಾಗಿದೆ.

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಎಂದಿರುವ ಈಶ್ವರಪ್ಪ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು, ಅವರನ್ನು ಸಂಪುಟದಿಂದ ಕೈಬಿಡಬೇಕು ಎಂಬುದು ಕಾಂಗ್ರೆಸ್‌ ಆಗ್ರಹ. ಆದರೆ ಆಡಳಿತ ಪಕ್ಷ ಬಿಜೆಪಿ, ಈಶ್ವರಪ್ಪ ಮಾಧ್ಯಮಗಳ ಜತೆಗಿನ ಮಾತಿನ ಭರದಲ್ಲಿ ಮುಂದೊಂದು ದಿನ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸಿದರೂ ಹಾರಿಸಬಹುದು ಎಂದಿದ್ದಾರಷ್ಟೇ. ಈಗಲೇ ಹಾರಿಸುತ್ತೇವೆ ಎಂದಿಲ್ಲ. ಹಾಗೆಯೇ ರಾಷ್ಟ್ರಧ್ವಜಕ್ಕೆ ತನ್ನದೇ ಆದ ಗೌರವವಿದೆ. ಇದರ ವಿರುದ್ಧ ಮಾತನಾಡುವುದೂ ತರವಲ್ಲ ಎಂದೂ ಹೇಳಿದ್ದಾರೆ. ಹಾಗಾಗಿ ಅವರು ದೇಶದ್ರೋಹ ಎಸಗುವಂಥ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸಮರ್ಥಿಸಿಕೊಂಡಿದೆ.

ಈ ಎಲ್ಲ ಸಂಗತಿಗಳ ನಡುವೆ ಬುಧವಾರ ಸದನದ ಗೌರವಕ್ಕೆ ಚ್ಯುತಿಯಾಗುವಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ಸದಸ್ಯರು ನಡೆದುಕೊಂಡಿದ್ದಾರೆ. ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಡುವೆ ಏಕವಚನದಲ್ಲೇ ವಾಕ್ಸಮರ ನಡೆದಿದೆ. ಒಂದು ಹಂತದಲ್ಲಿ ಇವರೀರ್ವರ ನಡುವಿನ ಸಮರ ಕೈ ಕೈ ಮಿಲಾಯಿಸುವ ಹಂತಕ್ಕೆ ಮುಟ್ಟಿತ್ತು. ಸಂಸದೀಯ ಭಾಷೆಯಲ್ಲಿ  ಸೂಕ್ತವಲ್ಲದ ಪದಗಳ ಬಳಕೆಯಾಗಿರುವುದು ಖಂಡಿತಾ ಅಕ್ಷಮ್ಯ.

ಈಗಾಗಲೇ ಜನರು ರಾಜಕಾರಣಿಗಳ ಮೇಲೆ ನಿಧಾನಗತಿಯಲ್ಲಿ ಗೌರವ ಕಳೆದುಕೊಳ್ಳುತ್ತಿದ್ದಾರೆ. ಸದನದಲ್ಲಿನ ಇಂಥ ವರ್ತನೆಗಳಿಂದ ರಾಜಕಾರಣಿಗಳ ಮೇಲಿನ ಅವರ ನಂಬಿಕೆ ಮತ್ತಷ್ಟು ಕುಸಿಯಬಹುದು. ಅಲ್ಲದೆ ವಿಧಾನಸಭೆ ಇರುವುದು ರಾಜ್ಯದ ಅಭಿವೃದ್ಧಿ, ಸಮಸ್ಯೆಗಳ ಕುರಿತಂತೆ ಚರ್ಚೆ ನಡೆಸುವುದಕ್ಕೆ ಮಾತ್ರ. ಇಲ್ಲಿ ವೈಯಕ್ತಿಕ ನಿಂದನೆ ಅಸಹನೀಯ. ಅಷ್ಟೇ ಅಲ್ಲ ಏಕವಚನಕ್ಕಿಂತಲೂ ಮೇಲಾಗಿ ಸದನದ ಒಳಗೇ ಕೀಳು ಪದ ಬಳಕೆ ಮಾಡುವುದು ನಾಗರಿಕ ಸಮಾಜ ಒಪ್ಪುವಂಥದ್ದಲ್ಲ.

ಈಗ ಉದ್ಭವವಾಗಿರುವ ರಾಷ್ಟ್ರಧ್ವಜದ ವಿಚಾರವೂ ಅಷ್ಟೇ. ನಿಜಕ್ಕೂ ಸಚಿವರ ಕಡೆಯಿಂದ ತಪ್ಪಾಗಿದೆ ಎನ್ನುವುದಾದರೆ ಸದನದಲ್ಲಿ ಈ ಬಗ್ಗೆಯೇ ಗಂಭೀರ ಚರ್ಚೆಯಾಗಲಿ. ಅಲ್ಲದೆ ಕಾನೂನು ಮಾರ್ಗದಲ್ಲಿ ಮುಂದಿನ ಹೆಜ್ಜೆ ಇಡಲು ಅವಕಾಶ ಇದೆ. ಅದನ್ನು ಬಿಟ್ಟು  ಸದನದ ಗೌರವಕ್ಕೆ ಚ್ಯುತಿ ಬರುವಂತೆ ವರ್ತಿಸುವುದು ತರವಲ್ಲ. ಕೆಂಪುಕೋಟೆ ಮೇಲೆ ರಾಷ್ಟ್ರಧ್ವಜವನ್ನು ಹೊರತುಪಡಿಸಿ ಬೇರಾವುದೇ ಧ್ವಜವನ್ನು ಹಾರಿಸುವುದನ್ನು ಯೋಚಿಸುವುದೂ ಕೂಡ ತಪ್ಪಾಗುತ್ತದೆ. ಇಂಥ ಹೇಳಿಕೆಗಳು ಎಲ್ಲಿಂದ ಬಂದರೂ ಅದು ಅಕ್ಷಮ್ಯವೇ.

ಹಾಗೆಯೇ ಸದನದಲ್ಲಿ ರಾಷ್ಟ್ರಧ್ವಜ ಇರಿಸಿಕೊಂಡು ಪ್ರತಿಭಟನೆ ನಡೆಸುವ ಕ್ರಮದ ಬಗ್ಗೆಯೂ ಸಾಕಷ್ಟು ತಕರಾರುಗಳಿವೆ. ಜನಪ್ರತಿನಿಧಿಗಳು ತಮ್ಮ ಮೂಲ ಉದ್ದೇಶವನ್ನು ಮರೆತು ಬೀದಿ ನಾಟಕದ ಮಾದರಿಯಲ್ಲಿ  ವರ್ತಿಸುವುದನ್ನು ಜನರು ಖಂಡಿತಾ ಕ್ಷಮಿಸಲಾರರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ವಿದ್ಯಾರ್ಹತೆಗೆ ದೇಶವ್ಯಾಪಿ ಮಾನ್ಯತೆ, ಹೈಕೋರ್ಟ್‌ ತೀರ್ಪು ನ್ಯಾಯೋಚಿತ

13-editorial

Temperature: ಸಂಪಾದಕೀಯ-ತಾಪಮಾನ ಹೆಚ್ಚಳದ ಆತಂಕ: ಮುಂಜಾಗ್ರತೆಯೇ ಮದ್ದು

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

ಉಚಿತಗಳ ಆಮಿಷಗಳಿಗೆ ಕಡಿವಾಣ: ಚು.ಆಯೋಗ ಬದ್ಧತೆ ತೋರಲಿ

vidhana-Soudha

Editorial: ಪ್ರಾಥಮಿಕ ಶಾಲಾ ಶಿಕ್ಷಕರ ಪಠ್ಯೇತರ ಹೊರೆ ಇಳಿಸಿ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

ಮಹಿಳಾ ಆರೋಪಿಗಳ ಬಂಧನ ವೇಳೆ ವಿವೇಚನೆ ಅತ್ಯವಶ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.