ಹಿಮಾಲಯ ಯೋಗಿಗೆ ಬಾಂಬೆ ಷೇರುಮಾರುಕಟ್ಟೆ ರಹಸ್ಯ ಮಾಹಿತಿ ರವಾನೆ:ಚಿತ್ರಾ ನಿವಾಸದ ಮೇಲೆ IT ದಾಳಿ

ವಾಣಿಜ್ಯ ಯೋಜನೆ ಮತ್ತು ಆಡಳಿತ ಮಂಡಳಿಯ ಅಜೆಂಡಾಗಳ ರಹಸ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದಳು ಎಂದು ಸೆಬಿ ತಿಳಿಸಿದೆ.

Team Udayavani, Feb 17, 2022, 1:39 PM IST

ಹಿಮಾಲಯ ಯೋಗಿಗೆ ಬಾಂಬೆ ಷೇರುಮಾರುಕಟ್ಟೆ ರಹಸ್ಯ ಮಾಹಿತಿ ರವಾನೆ:ಚಿತ್ರಾ ನಿವಾಸದ ಮೇಲೆ IT ದಾಳಿ

ನವದೆಹಲಿ:ದೇಶದ ಅತೀ ದೊಡ್ಡ ಷೇರು ಮಾರುಕಟ್ಟೆಯ ರಹಸ್ಯ ಮಾಹಿತಿಯನ್ನು ಹಿಮಾಲಯದ ಯೋಗಿ ಜತೆ ಹಂಚಿಕೊಂಡಿದ್ದು ಹಾಗೂ ನಿರ್ಣಾಯಕ ನಿರ್ಧಾರಗಳ ಕುರಿತು ಸಲಹೆ ಪಡೆಯುತ್ತಿದ್ದ ಮಾಜಿ ಮುಖ್ಯಸ್ಥೆ, ಆರೋಪಿ ಚಿತ್ರಾ ರಾಮಕೃಷ್ಣನ್ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಗುರುವಾರ (ಫೆ.17) ದಾಳಿ ನಡೆಸಿದೆ.

ಇದನ್ನೂ ಓದಿ:ರಾಣಿ ಚೆನ್ನಮ್ಮ‌ಮೈದಾನದಲ್ಲಿ ಏನು‌ ಮಾಡಿದರು?: ಕಾಂಗ್ರೆಸ್‍ಗೆ ಸಿ.ಟಿ.ರವಿ ಪ್ರಶ್ನೆ

ಮುಂಬೈಯಲ್ಲಿ ವಾಸವಾಗಿರುವ ಚಿತ್ರಾ ರಾಮಕೃಷ್ಣನ್ 2013 ಮತ್ತು 2016ರ ನಡುವೆ ನ್ಯಾಷನಲ್ ಸ್ಟಾಕ್ ಎಕ್ಸ್ ಚೇಂಜ್ (ಷೇರುಮಾರುಕಟ್ಟೆ) ನ ಆಡಳಿತ ನಿರ್ದೇಶಕಿಯಾಗಿ ಮತ್ತು ಸಿಇಒ ಆಗಿ ಕಾರ್ಯನಿರ್ವಹಿಸಿದ್ದು, ಬಳಿಕ ವೈಯಕ್ತಿಕ ಕಾರಣಗಳನ್ನು ನೀಡಿ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ವರದಿ ತಿಳಿಸಿದೆ.

ಈ ಬಗ್ಗೆ ತನಿಖೆ ನಡೆಸಿದ್ದ ಸೆಬಿ(ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್ ಚೇಂಜ್ ಬೋರ್ಡ್ ಆಫ್ ಇಂಡಿಯಾ) ಎನ್ ಎಸ್ ಇ ಮಾಜಿ ಎಂಡಿ ಚಿತ್ರಾ ರಾಮಕೃಷ್ಣನ್ ಗೆ 3 ಕೋಟಿ , ನರೇನ್ ಮತ್ತು ಸುಬ್ರಮಣಿಯನ್ ಗೆ ತಲಾ 2 ಕೋಟಿ ರೂಪಾಯಿ ದಂಡ ವಿಧಿಸಿದ ನಂತರ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿರುವುದಾಗಿ ವರದಿ ವಿವರಿಸಿದೆ.

ಎನ್ ಎಸ್ ಇ ಮುಖ್ಯಸ್ಥೆಯಾಗಿದ್ದ ಚಿತ್ರಾ ರಾಮಕೃಷ್ಣನ್, ಹಿಮಾಲಯದಲ್ಲಿ ವಾಸವಾಗಿದ್ದ ಆಧ್ಯಾತ್ಮಿಕ ಗುರು, ಯೋಗಿ ಬಾಬಾಗೆ ಸ್ಟಾಕ್ ಎಕ್ಸ್ ಚೇಂಜ್ ನ ಹಣಕಾಸು, ವಾಣಿಜ್ಯ ಯೋಜನೆ ಮತ್ತು ಆಡಳಿತ ಮಂಡಳಿಯ ಅಜೆಂಡಾಗಳ ರಹಸ್ಯ ಮಾಹಿತಿಯನ್ನು ಹಂಚಿಕೊಳ್ಳುತ್ತಿದ್ದಳು ಎಂದು ಸೆಬಿ ತಿಳಿಸಿದೆ.

ಎನ್ ಎಸ್ ಇಯ ಹಣಕಾಸು ಮತ್ತು ವಹಿವಾಟಿನ ಯೋಜನೆಗಳ ಮಾಹಿತಿ ಹಂಚಿಕೆ ಊಹಿಸಲು ಸಾಧ್ಯವಾಗದಿದ್ದರೂ ಕೂಡಾ, ಇದೊಂದು ಷೇರುಮಾರುಕಟ್ಟೆಯ ತಳಹದಿಯನ್ನೇ ಅಲುಗಾಡಿಸಬಲ್ಲ ಕಾರ್ಯವಾಗಿದೆ ಎಂದು ಸೆಬಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಭಾರೀ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಬೃಹತ್ ಮೊತ್ತದ ದಂಡ ವಿಧಿಸಲಾಗಿದೆ ಎಂದು ತಿಳಿಸಿದೆ.

ಸಾವಿರಾರು ಕೋಟಿ ರೂಪಾಯಿಗಳ ವಹಿವಾಟು ನಡೆಯುತ್ತಿರುವ ಷೇರು ವಿನಿಮಯ ಕೇಂದ್ರವನ್ನು ಹಿಮಾಲಯದ ಗುರು ನಿಯಂತ್ರಿಸುತ್ತಿದ್ದು, ಚಿತ್ರಾ ರಾಮಕೃಷ್ಣನ್ ಆತನ ಕೈಗೊಂಬೆಯಾಗಿ ಕಾರ್ಯನಿರ್ವಹಿಸಿರುವುದಾಗಿ ಸೆಬಿ ಹೇಳಿದೆ.

ಹಿಮಾಲಯದ ಯೋಗಿಯ ಪ್ರಭಾವದಿಂದ ಚಿತ್ರ ರಾಮಕೃಷ್ಣನ್, ಷೇರುಪೇಟೆಯ ಬಗ್ಗೆ ಯಾವುದೇ ಅನುಭವ ಇಲ್ಲದ ವ್ಯಕ್ತಿಯನ್ನು(ಆನಂದ್ ಸುಬ್ರಮಣಿಯನ್) ಎನ್ ಎಸ್ ಇಯ ಸಲಹೆಗಾರನನ್ನಾಗಿ ನೇಮಕ ಮಾಡಿರುವುದಾಗಿ ಸೆಬಿ ತಿಳಿಸಿದೆ. ಷೇರು ವಿನಿಮಯ ಕೇಂದ್ರದ ಹಣಕಾಸು ಡೇಟಾ, ಡೆವಿಡೆಂಡ್, ಆರ್ಥಿಕ ಪ್ರಗತಿ ಸೇರಿದಂತೆ ಪ್ರತಿಯೊಂದು ರಹಸ್ಯ ಮಾಹಿತಿಯನ್ನು ಚಿತ್ರಾ ಯೋಗಿಗೆ ರವಾನಿಸುತ್ತಿದ್ದಳು ಎಂದು ಸೆಬಿ ಆರೋಪಿಸಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.