ಮುಸ್ಕಾನ್ ಹೆಸರಲ್ಲಿ ನೂರಾರು ನಕಲಿ ಖಾತೆ!
Team Udayavani, Feb 18, 2022, 6:58 AM IST
ನವದೆಹಲಿ: ಕರ್ನಾಟಕದಲ್ಲಿ ಹೊತ್ತಿ ಉರಿಯುತ್ತಿರುವ ಹಿಜಾಬ್ ಪ್ರತಿಭಟನೆಗಳ ದಳ್ಳುರಿಗೆ ನೆರೆರಾಷ್ಟ್ರ ಪಾಕಿಸ್ತಾನ ತುಪ್ಪ ಸುರಿಯುತ್ತಿದೆ ಎಂಬ ಆತಂಕಕಾರಿ ಮಾಹಿತಿಯೊಂದನ್ನು ಗುಪ್ತಚರ ಇಲಾಖೆ ಹೊರಹಾಕಿದೆ.
ಹಿಜಾಬ್ ವಿವಾದ ಆರಂಭವಾದ ಹೊಸತರಲ್ಲಿ ಮಂಡ್ಯದ ಕಾಲೇಜೊಂದರಲ್ಲಿ “ಅಲ್ಲಾಹು ಅಕºರ್’ ಎಂದು ಘೋಷಣೆ ಕೂಗುವ ಮೂಲಕ ರಾಷ್ಟ್ರವ್ಯಾಪಿ ಸುದ್ದಿಯಾದ ಮುಸ್ಕಾನ್ ಖಾನ್ ಎಂಬ ವಿದ್ಯಾರ್ಥಿನಿಯ ಹೆಸರಿನಲ್ಲಿ ನೂರಾರು ನಕಲಿ ಟ್ವಿಟರ್ ಖಾತೆಗಳನ್ನು ಪಾಕಿಸ್ತಾನದಲ್ಲಿ ಸೃಷ್ಟಿಸಲಾಗಿದೆ. ಆ ಖಾತೆಗಳ ಮೂಲಕ ಸಮುದಾಯಗಳನ್ನು ಒಡೆಯುವ ದ್ವೇಷದ ಸಂದೇಶಗಳನ್ನು ಪಸರಿಸಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ಆಗ ಪಾಕಿಸ್ತಾನದಲ್ಲಿ, ಈಗ ಕರ್ನಾಟಕದಲ್ಲಿ! :
ಇಂಥದ್ದೊಂದು ನಕಲಿ ಟ್ವಿಟರ್ ಖಾತೆಯ ಜಾಡು ಪತ್ತೆ ಹಚ್ಚಿದಾಗ ಅದು ಕೆಲ ದಿನಗಳ ಹಿಂದೆ ಪಾಕಿಸ್ತಾನದಿಂದ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ ಅದು ಕರ್ನಾಟಕದಿಂದಲೇ ಕಾರ್ಯ ನಿರ್ವಹಿಸುತ್ತಿರುವುದು ತಿಳಿದುಬಂದಿದೆ. ಅಲ್ಲದೆ, ಈ ಖಾತೆ ಸೃಷ್ಟಿಯಾದ ಕೆಲವೇ ದಿನಗಳಲ್ಲಿ ಇದಕ್ಕೆ 5 ಸಾವಿರ ಫಾಲೋವರ್ಗಳು ಸೇರ್ಪಡೆಗೊಂಡಿದ್ದಾರೆ ಎಂದು ಹೇಳಲಾಗಿದೆ.
ಟ್ವೀಟ್ಗಳು ಡಿಲೀಟ್ :
ಮಸ್ಕಾನ್ ಹೆಸರಿನಲ್ಲಿರುವ ಮತ್ತೂಂದು ಟ್ವಿಟರ್ನ ನಕಲಿ ಖಾತೆಯಲ್ಲಿ, ಈ ಖಾತೆಯನ್ನು 2017ರ ಡಿಸೆಂಬರ್ನಿಂದಲೇ ಆರಂಭಿಸಲಾಗಿದೆ ಎಂದು ನಮೂದಿಸಲಾಗಿದೆ. ಈ ಖಾತೆಗೆ 37,000 ಫಾಲೋವರ್ಗಳು ಇದ್ದಾರೆ. ಕರ್ನಾಟಕದಲ್ಲಿ ಹಿಜಾಬ್ ವಿವಾದ ಭುಗಿಲೇಳುತ್ತಲೇ ಅದರಲ್ಲಿದ್ದ ಎಲ್ಲಾ ಟ್ವೀಟ್ಗಳನ್ನು ಡಿಲೀಟ್ ಮಾಡಲಾಗಿದೆ. ಇದು ಅನುಮಾನಗಳನ್ನು ಸೃಷ್ಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Air Force Chief: ವಾಯುಪಡೆಯ ನೂತನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ನೇಮಕ
Ayodhya: 8 ಕಾಲುಗಳ ಕರುವಿಗೆ ಜನ್ಮ ನೀಡಿದ ಎಮ್ಮೆ, ಇದೊಂದು ಪವಾಡ- ಸ್ಥಳೀಯರು
Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ
Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.