![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 19, 2022, 12:15 PM IST
ಮಂಗಳೂರು : ಊರಿಗೆ ಮನುಷ್ಯ ಅಲ್ಲ,ಮಸಣಕ್ಕೆ ಹೆಣ ಅಲ್ಲ ಎನ್ನುವ ಸ್ಥಿತಿಯಲ್ಲಿ ಕಾಂಗ್ರೆಸ್ ಇದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಶನಿವಾರ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಕಡತ ವಿಲೇವಾರಿ ಅಭಿಯಾನವನ್ನು ಉದ್ಘಾಟಿಸಿ ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆಯಲ್ಲಿ ಜನರ ಸಮಸ್ಯೆ ಬಗ್ಗೆ ಚರ್ಚಿಸುವ ಬದಲು ಧರಣಿ ನಡೆಸುತ್ತಿದ್ದಾರೆ. ಡಿಕೆಶಿ ಹಿಜಾಬ್ ಪರ ಇಲ್ಲ. ಸಿದ್ದರಾಮಯ್ಯ ಕೇಸರಿ ಪರ ಇಲ್ಲ. ಅವರಿಬ್ಬರ ತಿಕ್ಕಾಟದಲ್ಲಿ ಧರಣಿ ನಡೆಯುತ್ತಿದೆ ಎಂದರು.
ಈಶ್ವರಪ್ಪ ಹೇಳಿಕೆ ಅವರಿಗೆ ಕೇವಲ ನೆಪ. ಕಾಂಗ್ರೆಸ್ ಗೆ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಇಲ್ಲ. ಹಿಜಾಬ್ ವಿರುದ್ದ ಮಾತಾಡಿದರೆ ವೋಟ್ ಹೋಗುತ್ತದೆ ಎನ್ನುವ ಭಯ. ಅಧಿವೇಶನ ಕ್ಕೆ ಕೋಟ್ಯಂತರ ರೂ. ಖರ್ಚು ಇದೆ. ಅದು ಜನತೆಯ ತೆರಿಗೆ ಹಣ. ಕಾಂಗ್ರೆಸ್ ನವರು ಇಲ್ಲಿ ನಿದ್ದೆ ಮಾಡುವ ಮೂಲಕ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಹಿಜಾಬ್ ಬಗ್ಗೆ ಕಾಂಗ್ರೆಸ್ ತನ್ನ ನಿಲುವು ಸ್ಪಷ್ಟ ಪಡಿಸಲಿ ಎಂದು ಕಾಂಗ್ರೆಸ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.
ಕಡತ ವಿಲೇವಾರಿ ಅಭಿಯಾನ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್, ಶಾಸಕರು ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.