![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 19, 2022, 4:18 PM IST
ಕೋಲಾರ: ಒಂಬತ್ತನೇ ತರಗತಿ ಬಾಲಕಿಯ ಮೇಲೆ ಆಕೆಯ ಜನ್ಮದಿನದಂದೇ ನಾಲ್ವರು ಯುವಕರು ಸಾಮೂಹಿಕವಾಗಿ ಅತ್ಯಾಚಾರವೆಸಗಿರುವ ಘಟನೆ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ.
ಸಂತ್ರಸ್ತೆ ಬಾಲಕಿ ಒಂಬತ್ತನೆ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದು, ಬಂಗಾರಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಆರೋಪಿ ನಾಲ್ವರು ಯುವಕರನ್ನು ವಶಕ್ಕೆ ಪಡೆದಿರುವ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಆನಂದಕುಮಾರ್(25), ಕಾಂತರಾಜು(23), ಪ್ರವೀಣ್(21) ಮತ್ತು ವೇಣು (19) ಎಂದು ಗುರುತಿಸಲಾಗಿದೆ.
ಬಡ ಕುಟುಂಬದ ಬಾಲಕಿಗೆ ಶುಕ್ರವಾರ ಹುಟ್ಟಿದ ಹಬ್ಬವಾಗಿದ್ದು, ತಂದೆ ಹೊಸ ಬಟ್ಟೆ ಕೊಡಿಸಿಲ್ಲವೆಂಬ ಕೋಪದಲ್ಲಿ ಸಂಜೆ ಮನೆಯಿಂದ ಹೊರಗೆ ಬಂದಿದ್ದಳು. ಇದೇ ಸಂದರ್ಭದಲ್ಲಿ ಆಕೆಗೆ ಪರಿಚಯವಾಗಿದ್ದ ಯುವಕನೋರ್ವ ಹುಟ್ಟು ಹಬ್ಬಕ್ಕೆ ಕೊಡುಗೆ ನೀಡುವುದಾಗಿ ನಂಬಿಸಿ ಕರೆದೊಯ್ದಿದ್ದಾನೆ. ಈತನ ಜೊತೆಗೆ ಮೂವರು ಸ್ನೇಹಿತರು ಸೇರಿಕೊಂಡು ಕಾಮಸಮುದ್ರ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ.
ಅತ್ಯಾಚಾರದಿಂದ ತೀವ್ರವಾಗಿ ನಿತ್ರಾಣಗೊಂಡಿದ್ದ ಸಂತ್ರಸ್ತೆ ಬಾಲಕಿ ಗ್ರಾಮಕ್ಕೆ ಬಂದ ಮೇಲೆ ಪೋಷಕರಿಗೆ ತಿಳಿಸಿದ್ದಾರೆ. ಇದರಿಂದ ಗಾಬರಿಗೊಂಡ ಪೋಷಕರು ಆಕೆಯನ್ನು ಆಸ್ಪತ್ರೆಗೆ ಸೇರಿಸುವ ಪ್ರಯತ್ನದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ.
ಸಂತ್ರಸ್ತೆ ಬಾಲಕಿ ನೀಡಿದ ಮಾಹಿತಿ ಮೇಲೆಗೆ ಬಂಗಾರಪೇಟೆ ಮತ್ತು ಕಾಮಸಮುದ್ರ ಠಾಣೆ ಪೊಲೀಸರು ಆರೋಪಿತ ನಾಲ್ವರು ಯುವಕರನ್ನು ತ್ವರಿತವಾಗಿ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ.
ಪೊಲೀಸ್ ವರಿಷ್ಠಾಧಿಕಾರಿ ದೇವರಾಜ್ ಕಾಮಸಮುದ್ರ ಠಾಣೆಗೆ ಆಗಮಿಸಿ ಪೋಷಕರಿಗೆ ಧೈರ್ಯತುಂಬಿದ ನಂತರವಷ್ಟೇ ಪೋಷಕರು ಪ್ರಕರಣ ದಾಖಲಿಸಲು ಅನುಮತಿಸಿದ್ದಾರೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.