ಅಹ್ಮದಾಬಾದ್‌ ಸ್ಫೋಟ ಪ್ರಕರಣ: ಗಲ್ಲು ಶಿಕ್ಷೆಗೆ ಒಳಗಾದವರಲ್ಲಿ ಇಬ್ಬರು ಮಂಗಳೂರಿನವರು


Team Udayavani, Feb 20, 2022, 7:22 AM IST

ಅಹ್ಮದಾಬಾದ್‌ ಸ್ಫೋಟ ಪ್ರಕರಣ: ಗಲ್ಲು ಶಿಕ್ಷೆಗೆ ಒಳಗಾದವರಲ್ಲಿ ಇಬ್ಬರು ಮಂಗಳೂರಿನವರು

ಮಂಗಳೂರು: ಅಹಮ್ಮದಾ ಬಾದ್‌ನಲ್ಲಿ 2008ರಲ್ಲಿ ಸಂಭವಿಸಿದ ಬಾಂಬ್‌ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಗಲ್ಲು ಶಿಕ್ಷೆಗೆ ಒಳಗಾಗಿರುವ 38 ಆರೋಪಿ ಗಳ ಪೈಕಿ ಮೂವರು ಕರ್ನಾಟಕ ದವರಾಗಿದ್ದು, ಇಬ್ಬರು ಮಂಗಳೂರಿನವರು.

ಮಂಗಳೂರಿನ ಪಾಂಡೇಶ್ವರ ಬಳಿಯ ಸುಭಾಸ್‌ನಗರದ ಸೈಯದ್‌ ಮೊಹಮದ್‌ ನೌಶಾದ್‌ (30), ಹಳೆಯಂಗಡಿಯ ಅಹ್ಮದ್‌ ಬಾವಾ ಅಬೂಬಕರ್‌ (38) ಹಾಗೂ ವಿಜಯಪುರದ ಮಹಮದ್‌ ಅದ್ನಾನ್‌ ಶಿಕ್ಷೆಗೊಳಗಾದವರು.

ಸೈಯದ್‌ನಿಗೆ ಜೀವನ ಪರ್ಯಂತ ಜೈಲು ಹಾಗೂ ಅಹ್ಮದ್‌ ಬಾವಾ ಮತ್ತು ಮಹಮದ್‌ಗೆ ವಿಶೇಷ ನ್ಯಾಯಾಲಯವು ಮರಣ ದಂಡನೆ ಶಿಕ್ಷೆ ವಿಧಿಸಿದೆ.

ಈ ಆರೋಪಿಗಳು ಉಡುಪಿಯಿಂದ ಸ್ಫೋಟಕ ಖರೀದಿಸಿ ಅದನ್ನು ಗುಜರಾತಿನ ಸೂರತ್‌ಗೆ ಕೊಂಡೊಯ್ದು ಅಲ್ಲಿ ಬಾಡಿಗೆ ಮನೆಯೊಂದರಲ್ಲಿದ್ದುಕೊಂಡು ಬಾಂಬ್‌ ತಯಾರಿಸಿದ್ದರು. ಬಳಿಕ ಇದನ್ನು ಸೂರತ್‌ ಮತ್ತು ಅಹ್ಮದಾಬಾದ್‌ನ ವಿವಿಧೆಡೆಗಳಲ್ಲಿ ಇರಿಸಿ ಅಲ್ಲಿಂದ ರೈಲು ಹತ್ತಿ ಪೂನಾ ಕಡೆಗೆ ಪ್ರಯಾಣಿಸಿದ್ದರು. ಅರ್ಧ ದಾರಿಗೆ ತಲುಪಿದಾಗ ಅಹ್ಮದಾಬಾದ್‌ನಲ್ಲಿ ಬಾಂಬ್‌ ಸ್ಫೋಟ ಆಗಿರುವ ಮಾಹಿತಿ ಲಭಿಸಿತ್ತು. ಸೂರತ್‌ನಲ್ಲಿರಿಸಿದ್ದ ಬಾಂಬ್‌ಗೆ ಸರ್ಕ್ಯೂಟ್ ಜೋಡಣೆ ಸರಿಯಾಗದೆ ಸ್ಫೋಟಿಸಿರಲಿಲ್ಲ.

ಕಾರಿನಿಂದ ಮಾಹಿತಿ ಲಭ್ಯ
ಬಾಂಬ್‌ ಸ್ಫೋಟದ ಸುದ್ದಿ ಟಿ.ವಿ.ಯಲ್ಲಿ ಪ್ರಸಾರವಾಗುತ್ತಿದ್ದಾಗ ಆರೋಪಿಗಳು ತ್ಯಜಿಸಿದ್ದ ಕಾರಿನಿಂದ ಮಾಹಿತಿ ಲಭಿಸಿತ್ತು. ಸೂರತ್‌ನಲ್ಲಿ ಈ ಆರೋಪಿಗಳು ತಂಗಿದ್ದ ಬಾಡಿಗೆ ಮನೆಯ ಮಾಲಕರು ಕಾರಿನ ಗುರುತು ಹಚ್ಚಿ, ತನ್ನ ಬಾಡಿಗೆ ಮನೆಯಲ್ಲಿ ಇದ್ದವರದ್ದು ಎಂದು ಗೊತ್ತಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆರೋಪಿಗಳು ಬಾಡಿಗೆ ಮನೆಗೆ ಬೀಗ ಹಾಕಿ ನಾಪತ್ತೆಯಾಗಿದ್ದರು. ಪೊಲೀಸರನ್ನು ಕರೆಸಿ ಬಾಗಿಲು ತೆಗೆಸಿದಾಗ ಬಾಂಬ್‌ ತಯಾರಿಕೆಯ ವಸ್ತುಗಳು ಲಭಿಸಿದ್ದವು. ಅಲ್ಲಿದ್ದ ಕಾರನ್ನು ಪರಿಶೀಲಿಸಿದಾಗ ಅದು ಮುಂಬಯಿಯಿಂದ ಕದ್ದು ತಂದ ಕಾರು ಎಂಬ ಮಾಹಿತಿ ಲಭಿಸಿತ್ತು.

ಉಳ್ಳಾಲದಲ್ಲಿ ಅಡಗಿದ್ದರು
ಇಸ್ಮಾಯಿಲ್‌ ಚೌಧುರಿ ಎಂಬಾತ ಕಾರನ್ನು ಕದ್ದು ತಂದಿದ್ದು, ಆತ ರಿಯಾಝ್ ಭಟ್ಕಳ್‌ನಿಗೆ ನೀಡಿದ್ದು ಗೊತ್ತಾಗಿತ್ತು. ರಿಯಾಜ್‌ ಮಂಗಳೂರಿನಲ್ಲಿ ಅಡಗಿದ್ದ ಮಾಹಿತಿಯೂ ಪೊಲೀಸರಿಗೆ ಸಿಕ್ಕಿತ್ತು.

ಮಹಾರಾಷ್ಟ್ರ ಪೊಲೀಸರು ಮಂಗಳೂರಿಗೆ ಬಂದು ಶೋಧ ನಡೆಸಿದಾಗ ಉಳ್ಳಾಲದಲ್ಲಿ ರಿಯಾಜ್‌ ಅಡಗಿರುವುದು ಗೊತ್ತಾಗಿತ್ತು.

2008ರ ಅ. 3ರ ಮುಂಜಾನೆ 2.45 ರಿಂದ 10 ಗಂಟೆ ತನಕ ಉಳ್ಳಾಲದ ಮುಕ್ಕಚ್ಚೇರಿ, ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಮತ್ತು ಬಳಿಕ ಪಾಂಡೇಶ್ವರದ ಸುಭಾಸ್‌ನಗರ ಹಾಗೂ ಇತರ ಕಡೆಗಳಲ್ಲಿ ಪೊಲೀಸರು ದಾಳಿ ನಡೆಸಿದ್ದರು. ಅಂದು ಮುಕ್ಕಚ್ಚೇರಿಯ ಮಹಮ್ಮದ್‌ ಅಲಿ, ಜಾವೇದ್‌ ಅಲಿ, ಸುಭಾಸ್‌ನಗರದ ನೌಶಾದ್‌ ಮತ್ತು ಹಳೆಯಂಡಿಯ ಅಹ್ಮದ್‌ ಬಾವಾನನ್ನು ಬಂಧಿಸಿದ್ದರು. ಅನಂತರದ ದಿನಗಳಲ್ಲಿ ಪಡುಬಿದ್ರೆಯ ಉಚ್ಚಿಲ ಮತ್ತು ಚಿಕ್ಕಮಗಳೂರಿನಲ್ಲಿ ಹಾಗೂ ಗುಜರಾತ್‌, ಮಹಾರಾಷ್ಟ್ರಗಳಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್ನೂ 6 ಮಂದಿಯನ್ನು ಬಂಧಿಸಿದ್ದರು.

ದಾಳಿ ಕಾರ್ಯಾಚರಣೆ ವೇಳೆ ಮಹ ಮ್ಮದ್‌ ಅಲಿ, ಆತನ ಪುತ್ರ ಜಾವೇದ್‌ ಅಲಿ, ನೌಶಾದ್‌ ಮತ್ತು ಅಹ್ಮದ್‌ ಬಾವಾ ಅವರಿಂದ 5 ಬಾಂಬ್‌, 11.39 ಲಕ್ಷ ರೂ. ನಗದು, ಗುಜರಾತ್‌ನ ನಕ್ಷೆ, 21 ಮೊಬೈಲ್‌ ಫೋನ್‌, ಸಿಮ್‌ ಕಾರ್ಡ್‌ ಗಳು, ಜೆಹಾದಿ ಸಾಹಿತ್ಯ, ಲ್ಯಾಪ್‌ಟಾಪ್‌, ಹಾರ್ಡ್‌ ಡಿಸ್ಕ್, 4 ಪಾಸ್‌ಪೋರ್ಟ್‌ ಇತ್ಯಾದಿಗಳನ್ನು ಪೊಲೀಸರು ವಶ ಪಡಿಸಿಕೊಡಿದ್ದರು.

2017ರ ಎಪ್ರಿಲ್‌ 12 ರಂದು ಸೈಯದ್‌ ಮೊಹಮದ್‌ ನೌಶಾದ್‌, ಅಹ್ಮದ್‌ ಬಾವಾ ಅಬೂಬಕರ್‌ ಮತ್ತು ಪಡುಬಿದ್ರೆಯ ಇನ್ನೋರ್ವ ಆರೋಪಿ ಸಹಿತ ಮೂವರಿಗೆ ಮಂಗಳೂರಿನ ನ್ಯಾಯಾಲಯವು ಕಠಿನ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು.

ಈ ಆರೋಪಿಗಳನ್ನು ಬಂಧಿಸಿದ ಸಂದರ್ಭ ಅವರು ಅಮಾಯಕರು ಎಂದು ಕೆಲವು ಮಂದಿ ಆಗ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದ ಇನ್ಸ್‌ಪೆಕ್ಟರ್‌ ವೆಂಕಟೇಶ ಪ್ರಸನ್ನ ಅವರ ವಿರುದ್ಧ ಆರೋಪ ಮಾಡಿ ರಾಷ್ಟ್ರಪತಿ ಮತ್ತು ಪ್ರಧಾನಿ ತನಕವೂ ದೂರು ನೀಡಲಾಗಿತ್ತು.

ಟಾಪ್ ನ್ಯೂಸ್

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

Sunita williams

Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Mangaluru: ಸೈಬರ್‌ ಕ್ರೈಂ ಅಧಿಕಾರಿ ಹೆಸರಿನಲ್ಲಿ ಬೆದರಿಸಿ 35 ಲ.ರೂ. ವಂಚನೆ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

028

IPL players: ಐಪಿಎಲ್‌ ಆಟಗಾರರಿಗೆ ಬಂಪರ್‌ ಸಂಭಾವನೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

085

Puttur: ಕಾಂಗ್ರೆಸ್‌ ಕಾರ್ಯಕರ್ತನದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 

1-ATM

ATM ದರೋಡೆಕೋರರ ಬೆನ್ನತ್ತಿ ರೋಚಕ ಕಾರ್ಯಾಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.