ಯಾರದೇ ಕೊಲೆಯಾದರೂ ಕಠಿಣ ಶಿಕ್ಷೆಯಾಗಬೇಕು: ಸಿದ್ದರಾಮಯ್ಯ
Team Udayavani, Feb 21, 2022, 11:25 AM IST
ಬೆಂಗಳೂರು: ನಾವು ಅಹಿಂಸೆಯಲ್ಲಿ ನಂಬಿಕೆ ಇಟ್ಟಿರುವವರು. ಯಾರದ್ದೇ ಕೊಲೆಯಾದರೂ ಕಠಿಣ ಶಿಕ್ಷೆಯಾಗಬೇಕು. ಕೊಲೆ ಖಂಡಿಸುತ್ತೇವೆ. ಹರ್ಷ ಎನ್ನುವ ಯುವಕನ ಕೊಲೆಯಾಗಿದೆ. ತಪ್ಪಿತಸ್ತರು ಯಾರೇ ಇರಲಿ, ಯಾವುದೇ ಸಂಘಟನೆ ಇದ್ದರೂ ಕಠಿಣ ಕ್ರಮ ತೆಗೆದುಕೊಳ್ಳಲಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರು ಅದೇ ಜಿಲ್ಲೆಯವರು. ಸರ್ಕಾರ ಜವಾಬ್ದಾರರಲ್ವಾ? ಗೃಹ ಸಚಿವರು, ಈಶ್ವರಪ್ಪ ಜವಾಬ್ದಾರರಲ್ಲವೇ? ಇಂತಹ ವಿಚಾರದಲ್ಲಿ ಕಾಂಗ್ರೆಸ್ ಅಂತ ಹೇಳಬಾರದು ಎಂದರು.
ಮೊದಲು ಬಂಧಿಸಿ, ತಪ್ಪಿತಸ್ತರು ಯಾರು ಅಂತ ಮೊದಲು ಪತ್ತೆ ಮಾಡಲಿ. ಕಾಂಗ್ರೆಸ್, ಎಸ್ ಡಿಪಿಐ ಎಂದು ಹೇಳಬಾರದು, ಯಾರೇ ಆದರೂ ಪತ್ತೆ ಹಚ್ಚು ಶಿಕ್ಷೆ ನೀಡಲಿ ಎಂದರು.
ಅಧಿವೇಶನ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ರಾಷ್ಟ್ರ ಧ್ವಜಕ್ಕೆ ಅಪಮಾನ ಆಗಿದೆ. ಹೇಗಿದ್ರೂ ಧರಣಿ ಮಾಡುತ್ತಾರೆಂದು ಅವರಿಗೆ ಗೊತ್ತಿದೆ. ಬಿಟ್ ಕಾಯಿನ್, ಬೇರೆ ಬೇರೆ ವಿಚಾರ ಚರ್ಚೆ ಮಾಡಬಹುದಿತ್ತು. ಇಡೀ ಭಾರತ ದೇಶದ ಗೌರವದ ಸಂಕೇತ. ಅದಕ್ಕೆ ಅವಮಾನ ಮಾಡಿದಾಗ ಸುಮ್ಮನೆ ಕೂರಲಾಗದು ಎಂದರು.
ಜೆಡಿಎಸ್ ಪ್ರತಿಭಟನೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅವರು ಅಸೆಂಬ್ಲಿಗೆ ಸರಿಯಾಗಿ ಬರಲ್ಲ. ಅವರು ಮಾಡಲಿ, ನಮ್ಮ ತಕರಾರಿಲ್ಲ. ಅವರಿಗೆ ಅವಕಾಶ ತಪ್ಪಿಸಬೇಕೆಂದು ನಾವು ಪ್ರತಿಭಟನೆ ಮಾಡಿಲ್ಲ. ನಾವು ಅಧಿಕೃತ ವಿರೋಧ ಪಕ್ಷ, ನಾವು ಚರ್ಚೆ ಮಾಡುತ್ತಿದ್ದೆವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.