ದೋಟಿಹಾಳ: ವೈಭವದಿಂದ ನಡೆದ ಶ್ರೀ ಬನಶಂಕರಿದೇವಿಯ ರಥೋತ್ಸವ
Team Udayavani, Feb 21, 2022, 6:42 PM IST
ದೋಟಿಹಾಳ: ಗ್ರಾಮದ ಆದಿಶಕ್ತಿ ಶ್ರೀ ಬನಶಂಕರಿದೇವಿಯ ಪಲ್ಲಕಿ, ರಥೋತ್ಸವವು ಸಾಯಂಕಾಲ 6:00 ಗಂಟೆಗೆ ನೂರಾರು ಭಕ್ತರ ಹರ್ಷೋದ್ಘಾರ ನಡುವೆ ಜಾತ್ರೆ ನೆರವೇರಿತು.
ಜಾತ್ರೆಯ ಅಂಗವಾಗಿ ಸೋಮವಾರ ಬೆಳಗ್ಗೆ ದೇವಿಗೆ ವಿಷೇಶ ಪೂಜೆ, ಮಹಾಭಿಷೇಕ ಮತ್ತು ರಥದ ಮುಂದೆ ಹೋಮ ಪೂಜೆ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಪ್ರತಿವರ್ಷದಂತೆ ಭರತ ಹುಣ್ಣಿಮೆ ಆದ ಐದು ದಿನಗಳ ನಂತರದ “ಮಾಘ,ಬ, ಪಂಚಮಿ” ನಕ್ಷತ್ರದ ಶುಭಗಳಿಗೆಯಲ್ಲಿ ದೇವಿಯ ಪಲ್ಲಕಿ ಮತ್ತು ರಥೋತ್ಸವದೊಂದಿಗೆ ಜಾತ್ರೆ ಜರುಗಿತು. ಈ ಜಾತ್ರೆಯಲ್ಲಿ ಸುತ್ತ ಮುತ್ತಲಿನ ಕೇಸೂರು, ಮಾಟುರ, ಜಾಲಿಹಾಳ, ಕ್ಯಾದಗುಂಪಿ, ಗೋತಗಿ, ತೋನಸಿಹಾಳ, ಕಲಕೇರಿ, ಕಡೇಕೊಪ್ಪ ಮತ್ತು ಹೆಸರೂರು ಗ್ರಾಮಗಳ ಭಕ್ತರು ಸೇರಿ ಸುಮಾರು ಸಾವಿರಕ್ಕೂ ಹೆಚ್ಚು ಭಕ್ತರು ಪಾಲ್ಗೊಂಡಿದ್ದರು.
ಗ್ರಾಮದಲ್ಲಿ ದೇವಿಯ ಭಕ್ತರು ಬೆಳಗಿನ ಪವಿತ್ರ ಸ್ನಾನ ಮಾಡಿ ದೇವಸ್ಥಾನದವರಗೆ ಮಡಿ ಬಟ್ಟೆಯಲ್ಲೇ ಆಗಮಿಸಿ ಪೂಜೆ ಸಲ್ಲಿಸಿದರು. ಇನ್ನೂ ಕೆಲವು ಭಕ್ತರು ದೀರ್ಘದಂಡ ನಮಸ್ಕಾರಗಳೊಂದಿಗೆ ತಮ್ಮ ಭಕ್ತಿ ಸೇವೆ ಸಲ್ಲಿಸಿದರು. ದೇವಸ್ಥಾನದಲ್ಲಿ ದೇವಿಯ ದರ್ಶನಕ್ಕಾಗಿ ಭಕ್ತರು ಬೆಳಗಿನಿಂದಲೇ ಸಾಲುಗಟ್ಟಿ ನಿಂತಿರುವುದು ಕಂಡುಬಂತು.
ಭಕ್ತರಿಂದ ‘ಬನಶಂಕರಿ ನಿನ್ನ ಪಾದಕ ಶಂಭೂಕೋ, ಹತ್ತಿಗಿಡದ ಸತ್ಯಮ್ಮ ನಿನ್ನ ಪಾದಕ ಶಂಭೂಕೋ, ಆದಿ ಶಕ್ತಿ ಪರಮೇಶ್ವರಿ ನಿನ್ನ ಪಾದಕ ಶಂಭೂಕೋ’. ಎಂಬ ಘೋಷಣೆಗಳು ರಥೋತ್ಸವದ ಸಮಯದಲ್ಲಿ ಭಕ್ತಿಭಾವದಿಂದ ಮೊಳಗಿದವು.
ಸಾವಿರಾರೂ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ರಥೋತ್ಸವ ಸಮಯದಲ್ಲಿ ಮಾಜಿ ಶಾಸಕರಾದ ಹಸನಸಾಬ ದೋಟಿಹಾಳ, ಮಾಜಿ ಜಿಪಂ ಸದಸ್ಯರಾದ ಸದಸ್ಯ ಕೆ.ಮಹೇಶ, ಮಾಜಿ ತಾಪಂ ಸದಸ್ಯರಾದ ಮಹಾಂತೇಶ ಬಾದಾವಿ, ಯಂಕಪ್ಪ ಚವ್ಹಾಣ, ದೋಟಿಹಾಳ ಮತ್ತು ಕೇಸೂರ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಪಂ ಸದಸ್ಯರು, ಪಿಡಿಒಗಳು ಸೇರಿದ್ದಂತೆ ಇತರರ ರಾಜಕೀಯ ಮುಖಂಡರು, ದೇವಾಂಗ ಸಮಾಜದ ಹಿರಿಯರು, ಮುಖಂಡರು ಹಾಗೂ ಗ್ರಾಮದ ಮುಖಂಡರು, ಗ್ರಾಮಸ್ಥರು ಉಪಸ್ಥಿತಿರಿದ್ದರು.
ರಥೋತ್ಸವದ ಸಮಯದಲ್ಲಿ ಕುಷ್ಕಗಿ ಸಿಪಿಐ ನಿಂಗಪ್ಪ ರುದ್ರಗೊಳ ಮತ್ತು ಕ್ರೆöÊಂ ಪಿಎಸ್ಐ ಮಾನಪ್ಪ ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಸತತ ಮಳೆಗೆ ಕುಸಿದ ಮನೆ; ಮಣ್ಣಿನಲ್ಲಿ ಸಿಲುಕಿದ ವ್ಯಕ್ತಿ-ಗ್ರಾಮಸ್ಥರಿಂದ ರಕ್ಷಣೆ
CM ಸಿದ್ದರಾಮಯ್ಯನವರಿಗೆ ಗಂಗಾವತಿಯಲ್ಲಿ ಅದ್ದೂರಿಯ ಸ್ವಾಗತ
Koppala; ‘ಒಂದು ವರ್ಷ ಅವಕಾಶ ಕೊಡಿ’ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
ಕುಷ್ಟಗಿ: ಹೆಚ್ಚಿದ ಕಾರ್ಯಭಾರ-ಒತ್ತಡದಲ್ಲಿ ಪೊಲೀಸ್ ಸಿಬ್ಬಂದಿ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Sulya: ಅವಾಚ್ಯ ಮಾತು: ಮಹಿಳೆಯಿಂದ ಪೊಲೀಸರಿಗೆ ದೂರು
Udupi; ಗೀತಾರ್ಥ ಚಿಂತನೆ 57: ದುರ್ಯೋಧನನಲ್ಲಿ ಮಾನಸಿಕ ಸ್ಥೈರ್ಯ ಕುಸಿತ
Gwalior T20: ಬಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.