ಸ್ಮಾರ್ಟ್‌ ನಗರದಲ್ಲಿ ಸ್ಮಾರ್ಟ್‌ ‘ಸೈಕಲ್‌ ಟ್ರ್ಯಾಕ್’ ! ಸೈಕಲ್‌ ಸ್ನೇಹಿ ಮಂಗಳೂರು


Team Udayavani, Feb 22, 2022, 12:20 PM IST

ಸ್ಮಾರ್ಟ್‌ ನಗರದಲ್ಲಿ ಸ್ಮಾರ್ಟ್‌ “ಸೈಕಲ್‌ ಟ್ರ್ಯಾಕ್ ‘! ಸೈಕಲ್‌ ಸ್ನೇಹಿ ಮಂಗಳೂರು

ಎಂ.ಜಿ.ರಸ್ತೆ : ನಗರದ ಪ್ರಮುಖ ರಸ್ತೆಗಳಲ್ಲಿನ ವಾಹನದ ಭರಾಟೆಯಲ್ಲಿ ಸೈಕಲ್‌ ಬಳಸುವವರಿಗೆ ಜಾಗವಿಲ್ಲದ ಪರಿಸ್ಥಿತಿಯಿದೆ. ಈ ಹಿನ್ನೆಲೆಯಲ್ಲಿ ನಗರದ ಎರಡು ಕಡೆಗಳಲ್ಲಿ ಪ್ರತ್ಯೇಕ ಸುಸಜ್ಜಿತ ಸೈಕಲ್‌ ಟ್ರ್ಯಾಕ್ ನಿರ್ಮಾಣಕ್ಕೆ ಸರ್ವ ಸಿದ್ಧತೆ ನಡೆಸಲಾಗುತ್ತಿದೆ.

ಸ್ಮಾರ್ಟ್‌ಸಿಟಿ ಯೋಜನೆಯಲ್ಲಿ ಡೈರಕ್ಟರೇಟ್‌ ಆಫ್‌ ಅರ್ಬನ್‌ ಲ್ಯಾಂಡ್‌ ಟ್ರಾನ್ಸ್‌ಪೊàರ್ಟ್‌ ವತಿಯಿಂದ ಮಂಗಳೂರಿನಲ್ಲಿ ಸೈಕಲ್‌ ಟ್ರ್ಯಾಕ್ ನಿರ್ಮಾಣವಾಗಲಿದೆ. ನಗರದ ಓಣಿಗಳು ಮತ್ತು ರಸ್ತೆ ಬದಿಗಳಲ್ಲಿ ಟ್ರ್ಯಾಕ್ ಸಾಗಲಿದೆ. ಬೋಳಾರ ಬೋಟ್‌ ರಿಪೇರಿ ಯಾರ್ಡ್‌ನಿಂದ ಟಿಎಂಎ ಪೈ ಕನ್ವೆನ್ಶನ್‌ ಸಭಾಂಗಣದವರೆಗೆ ಹಾಗೂ ಮಾರ್ನಮಿಕಟ್ಟೆಯಿಂದ ಮತ್ತೂಂದು ಸೈಕಲ್‌ ಟ್ರ್ಯಾಕ್ನಿರ್ಮಾಣವಾಗಲಿದೆ.

ಸದ್ಯ ಈ ಎಲ್ಲ ಭಾಗಗಳಲ್ಲಿ ಒಳಚರಂಡಿ, ರಸ್ತೆ ಕಾಮಗಾರಿ ಹಾಗೂ ಗೈಲ್‌ ಗ್ಯಾಸ್‌ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಅದಾದ ಕೂಡಲೇ ಸೈಕಲ್‌ ಟ್ರ್ಯಾಕ್ ನಿರ್ಮಾಣ ಆರಂಭವಾಗಲಿದೆ. ಮೂಲಗಳ ಪ್ರಕಾರ ಮಾರ್ಚ್‌ನ ಬಳಿಕ ಸೈಕಲ್‌ ಟ್ರ್ಯಾಕ್ ಯೋಜನೆ ಅನುಷ್ಠಾನಕ್ಕೆ ಬರುವ ನಿರೀಕ್ಷೆಯಿದೆ.

ನಗರದಲ್ಲಿ ಸೈಕಲ್‌ ಟ್ರ್ಯಾಕ್ ನಿರ್ಮಾಣಕ್ಕೆ ಕೆಂಪು, ಹಳದಿ ಎಂಬ 2 ಪ್ರತ್ಯೇಕ ಪಥದ ಯೋಚನೆಯಿದೆ. ಕೆಂಪು ಪಥ ಸುಮಾರು 8 ಕಿ.ಮೀ. ಇರಲಿದ್ದು, ಇದು ನಗರದ ಓಣಿ ರಸ್ತೆಗಳಲ್ಲಿ ಸಾಗಲಿದೆ. ಹಳದಿ ಪಥ ಸುಮಾರು 4 ಕಿ.ಮೀ. ಇರಲಿದೆ. ಇದು ರಸ್ತೆ ಬದಿಯಲ್ಲಿ ಸಾಗಲಿದೆ.

ಇದನ್ನೂ ಓದಿ : ಡೆಹ್ರಾಡೂನ್: ಮದುವೆ ಸಂಭ್ರಮದಿಂದ ವಾಪಸ್ ಆಗುತ್ತಿದ್ದ ವಾಹನ ಕಂದಕಕ್ಕೆ ಉರುಳಿ 11 ಮಂದಿ ಸಾವು

ವಿದ್ಯಾರ್ಥಿ ಸ್ನೇಹಿ ಯೋಜನೆ
ಸ್ಮಾರ್ಟ್‌ಸಿಟಿ ಯೋಜನೆಯ ಮುಖೇನ ನಿರ್ಮಾಣವಾಗುತ್ತಿರುವ ಸೈಕಲ್‌ ಟ್ರ್ಯಾಕ್‌ ವಿದ್ಯಾರ್ಥಿ ಸ್ನೇಹಿ ಪಥ ಪರಿಕಲ್ಪನೆಯಲ್ಲಿ ರೂಪಿಸಲಾಗುತ್ತದೆ. ನಗರ ಶೈಕ್ಷಣಿಕ ರಂಗದಲ್ಲಿ ಹೆಸರುಗಳಿಸಿದ್ದು, ಇಲ್ಲಿ ಬಹುತೇಕ ಕಾಲೇಜು ಗಳಿವೆ. ರಾಜ್ಯ, ಹೊರ ರಾಜ್ಯ, ವಿದೇಶಿ ವಿದ್ಯಾರ್ಥಿ ಗಳು ಇಲ್ಲಿ ಕಲಿಯುತ್ತಿದ್ದಾರೆ. ಹೀಗಾಗಿ ಕಾಲೇಜು ವಿದ್ಯಾರ್ಥಿಗಳನ್ನು ಸೆಳೆಯುವ ನಿಟ್ಟಿನಲ್ಲಿ ಸೈಕಲ್‌ ಪಥ ಯೋಜನೆಗೆ ಆದ್ಯತೆ ನೀಡಲಾಗಿದೆ.

ಸೈಕಲ್‌ ಸ್ನೇಹಿ ಮಂಗಳೂರು
ಮಂಗಳೂರು ನಗರವನ್ನು ಸೈಕಲ್‌ ಸ್ನೇಹಿಯಾಗಿಸುವ ಉದ್ದೇಶದಿಂದ ಸೈಕಲ್‌ ಪಾಥ್‌ ನಿರ್ಮಾಣ ಕಾರ್ಯಕ್ಕೆ ಮುಂದಾಗಿ ದ್ದೇವೆ. ಈಗಾಗಲೇ ಇದರ ಬಗ್ಗೆ ಎಲ್ಲ ಸಿದ್ಧತೆ ನಡೆಸಲಾಗಿದೆ. ಸ್ಮಾರ್ಟ್‌ಸಿಟಿ ಯೋಜನೆ ಆಗುತ್ತಿರುವ ನಗರದಲ್ಲಿ ಸೈಕಲ್‌ ಪಾಥ್‌ ಮೂಲಕ ಮತ್ತಷ್ಟು ಹೊಸತನ ನೀಡುವ ಆಶಯವಿದೆ. ಕೆಲವೇ ದಿನಗಳಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗುವುದು.
-ಡಿ. ವೇದವ್ಯಾಸ ಕಾಮತ್‌, ಶಾಸಕರು, ಮಂಗಳೂರು ದಕ್ಷಿಣ

ಉದ್ದೇಶಿತ ಸೈಕಲ್‌ ಟ್ರ್ಯಾಕ್ ರೂಟ್‌
– ಬೋಳಾರ ಬೋಟ್‌ ರಿಪೇರ್‌ ಯಾರ್ಡ್‌-ಕಾಸಿಯ ಸ್ಕೂಲ್‌-ಮಣಿಪಾಲ್‌ ಸ್ಕೂಲ್‌- ರೈಲು ನಿಲ್ದಾಣ-ಪುರಭವನ-ಸೆಂಟ್ರಲ್‌ ಮಾರುಕಟ್ಟೆ-ರಥಬೀದಿ ಹೂವಿನ ಮಾರುಕಟ್ಟೆ -ಬಿಇಎಂ ಶಾಲೆ-ಕೆನರಾ ಶಾಲೆ-ಶಾರದಾ ವಿದ್ಯಾಲಯ-ಕೆನರಾ ಕಾಲೇಜು -ಎಸ್‌ಡಿಎಂ ಕಾಲೇಜು-ಟಿಎಂಎ ಪೈ ಕನ್ವೆಂಷನ್ ಸೆಂಟರ್‌-ಶ್ರೀ ದೇವಿ ಕಾಲೇಜು

– ಮಾರ್ನಮಿಕಟ್ಟೆ ರೈಲ್ವೇ ಓವರ್‌ ಬ್ರಿಡ್ಜ್- ಸೈಂಟ್‌ ಜೋಸೆಫ್‌ ಕಾಲೇಜು-ರೋಶನಿ ನಿಲಯ-ಹೈಲ್ಯಾಂಡ್‌ ಕಾಫಿ ವರ್ಕ್‌-ತೆರಿಗೆ ಕಚೇರಿ.

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

17-mng-dasara

Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ

15-nalin

Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್‌ ಆರೋಪ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

Kinnigoli ಪಟ್ಟಣ ಪಂಚಾಯತ್‌ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.