ಉತ್ತಮ ಆರೋಗ್ಯ ಕಾಪಾಡಿಕೊಳ್ಳಿ: ಮನಗೂಳಿ


Team Udayavani, Feb 22, 2022, 5:00 PM IST

27health

ಸಿಂದಗಿ: ಗ್ರಾಮೀಣ ಮತ್ತು ನಗರ ಜನತೆ ಆರೋಗ್ಯ ಜಾಗೃತಿಗೆ ಆರೋಗ್ಯ ತಪಾಸಾಣೆ ಶಿಬಿರಗಳು ಅತ್ಯಂತ ಪ್ರಯೋಜನಕಾರಿಯಾಗಿವೆ ಎಂದು ಮನಗೂಳಿ ಆಸ್ಪತ್ರೆಯ ವೈದ್ಯ ಡಾ| ಶಾಂತವೀರ ಮನಗೂಳಿ ಹೇಳಿದರು.

ಪಟ್ಟಣದ ಟಿಎಸ್‌ಪಿ ಮಂಡಳಿಯ ಆಯುರ್ವೇದಿಕ್‌ ಮೆಡಿಕಲ್‌ ಕಾಲೇಜು, ಮನಗೂಳಿ ಆಸ್ಪತ್ರೆ, ಎಂ.ಸಿ. ಮನಗೂಳಿ ಪ್ರತಿಷ್ಠಾನ ಹಾಗೂ ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಉಚಿತ ಹೃದಯ ರೋಗ, ನರರೋಗ, ಕ್ಯಾನ್ಸರ್‌, ಮೂತ್ರ ಪಿಂಡದ ಕಲ್ಲು ಕಾಯಿಲೆ ಸೇರಿದಂತೆ ಅನೇಕ ರೋಗಗಳ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಉಚಿತ ಆರೋಗ್ಯತ ಪಾಸಣಾ ಶಿಬಿರಗಳು ಬಡವರಿಗೆ, ಮಧ್ಯಮ ವರ್ಗದ ಜನತೆಗೆ ವರದಾನವಾಗಿವೆ. ಇಂದಿನ ಒತ್ತಡದ ಜೀವನದಲ್ಲಿ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸದಿರುವುದರಿಂದ ಅನೇಕ ರೋಗಗಳಿಗೆ ತುತ್ತಾಗುವಂತಾಗಿದೆ. ಕಾರಣ ಪ್ರತಿಯೋಬ್ಬರೂ ಮೊದಲು ಆರೋಗ್ಯವನ್ನು ಕಾಪಾಡಿಕೊಳ್ಳುವ ಜವಾಬ್ದಾರಿ ಹೊಂದಿರಬೇಕು. ಮುಂಬರುವ ದಿನಗಳಲ್ಲಿ ತಾಲೂಕಿನ ವಿವಿಧ ಕಡೆಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.

ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಹೃದಯರೋಗ ತತn ವೈದ್ಯ ಡಾ| ಹನುಮಂತಯ್ಯ ಮಾತನಾಡಿ, ಆರೋಗ್ಯದಿಂದ ಇದ್ದಲ್ಲಿ ನಾವೆಲ್ಲವನ್ನು ಸಾಧಿಸಬಹುದು. ಇಂದು ನಾವೆಲ್ಲ ಸೇವಿಸುವ ಆಹಾರ ಪದ್ದತಿ ಬದಲಾಗಿದೆ. ಅದರಲ್ಲಿಯೂ ನಾವು ಸೇವಿಸುವ ಆಹಾರ ಸತ್ವಯುತವಾಗಿಲ್ಲ. ಇದರಿಂದ ನಮ್ಮ ದೇಹಕ್ಕೆ ಯಾವುದೇ ರೀತಿಯ ಜೀವಸತ್ವ, ಪ್ರೋಟಿನ್‌ಗಳು ಸಿಗುತ್ತಿಲ್ಲ. ಇದರಿಂದ ದೇಹ ನಿತ್ಯ ಬದಲಾಗುತ್ತ ಸಾಗುತ್ತದೆ. ಆರೋಗ್ಯದ ವಿಚಾರದಲ್ಲಿ ನಾವು ಎಚ್ಚರವಹಿಸಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಮುಖ್ಯ ವಿಚಾರವಾಗಿದೆ ಎಂದು ಮಾಹಿತಿ ನೀಡಿದರು.

ಈ ಉಚಿತ ಆರೋಗ್ಯ ಶಿಬಿರದಲ್ಲಿ ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಸುಮಾರು 300ಕ್ಕೂ ಅಧಿಕ ಜನರಿಗೆ ವಿವಿಧ ರೋಗಗಳ ತಪಾಸಣೆ ಮಾಡಲಾಯಿತು. ಇವರಲ್ಲಿ 22 ರೋಗಿಗಳು ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯಲ್ಲಿ ವಿವಿಧ ಕಾಯಿಲೆಗೆ ಸಂಬಂಧಿಸಿದ ಉಚಿತ ಶಸ್ತ್ರಚಿಕಿತ್ಸೆ ಪಡೆಯಲಿದ್ದಾರೆ. ಶಿಬಿರದಲ್ಲಿ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಯುಳ್ಳವರು, ಇಸಿಜಿ, ಇಕೋ ಸ್ಕ್ಯಾನಿಂಗ್‌, ಮೂತ್ರ ವಿಸರ್ಜನೆಯಲ್ಲಿ ತೊಂದರೆ, ಮೂತ್ರ ವಿಸರ್ಜನೆ ವೇಳೆ ಉರಿ, ರಕ್ತ, ಬೆನ್ನು ನೋವು, ಕುತ್ತಿಗೆ ನೋವು, ಮೆದುಳಿನ ಗಡ್ಡಿ, ಸ್ತ್ರೀ ರೋಗ ಸಮಸ್ಯೆ, ಗರ್ಭಕೊಶದ ಉಚಿರ ಶಸ್ತ್ರ ಚಿಕಿತ್ಸೆ, ಕೀಲು ಮತ್ತು ಮೂಳೆ, ಕಿವಿ ಗಂಟಲು, ಥೈರಾಯ್ಡ್ ಶಸ್ತ್ರ ಚಿಕಿತ್ಸೆ ಸೇರಿದಂತೆ ಅನೇಕ ರೋಗಗಳಿಗೆ ಉಚಿತತಪಾಸಾಣೆ ಮಾಡಲಾಯಿತು.

ಶಿಬಿರದಲ್ಲಿ ಮನಗೂಳಿ ಆಸ್ಪತ್ರೆಯ ಡಾ| ಸಂಧ್ಯಾ ಮನಗೂಳಿ, ಬೆಂಗಳೂರಿನ ಸಪ್ತಗಿರಿ ಆಸ್ಪತ್ರೆಯ ಡಾ| ಅರವಿಂದ, ಡಾ|ಗುರುಪ್ರಸಾದ.ಜಿ., ಡಾ| ಟೀನಾ, ಡಾ| ಸಂಧ್ಯಾ, ಡಾ| ವಿಶ್ವನಾಥರೆಡ್ಡಿ ಮತ್ತು ಕುಮಾರ ಬಗಲಿ, ಪೀರಾ ಮಗರಬಿ, ಶ್ರೀಶೈಲ ಅಂಬಲಗಿ, ಬಸವರಾಜ, ಮೀನಾಕ್ಷಿ ನಾಯೊRàಡಿ, ಚನ್ನು ರಾಯಚೂರ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Vijayapura: ಗ್ರಾ.ಪಂ ಕಾಯಕ ಮಿತ್ರ ಸಿಬ್ಬಂದಿ ಮೇಲೆ ಗ್ರಾಪಂ ಉಪಾಧ್ಯಕ್ಷೆ ಚಪ್ಪಲಿಯಿಂದ ಹಲ್ಲೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವ ಪತ್ತೆ

Muddebihal: ಕೃಷ್ಣಾ ನದಿಪಾಲಾದ ಯುವತಿ: ಶವಕ್ಕಾಗಿ ಶೋಧ

Muddebihal: ಕೃಷ್ಣಾ ನದಿ ಪಾಲಾದ ಯುವತಿ: ಶವಕ್ಕಾಗಿ ಶೋಧ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Vijayapura: ಮುನಿರತ್ನ ಚನ್ನಾರೆಡ್ಡಿ ಪ್ರಕರಣಕ್ಕೆ ತಳುಕು ಬೇಡ: ಎಂ.ಬಿ.ಪಾಟೀಲ

Congress: Make 100 laws, I am Anjala: MLA Basan Gowda Patil Yatnal

Congress: ನೂರು ಕಾನೂನು ಮಾಡಿ,ನಾನು ಅಂಜಲ್ಲ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

Legislative Council ಚುನಾವಣೆ: ಗರಿಗೆದರಿದ ಚಟುವಟಿಕೆ

aatishi

Delhi CM;5 ಸಚಿವರೊಂದಿಗೆ ನಾಳೆ ಆತಿಷಿ ಪ್ರಮಾಣ ವಚನ ಸ್ವೀಕಾರ

kangana-2

Emergency ಚಿತ್ರ; 25ರೊಳಗೆ ಬಿಡುಗಡೆ ನಿರ್ಧರಿಸಿ: ಕೋರ್ಟ್‌

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

ಬಾಹ್ಯಾಕಾಶ ಕ್ಷೇತ್ರದಲ್ಲಿ ಪಾರಮ್ಯ ಸಾಧಿಸಲು ಭಾರತದ ದಿಟ್ಟಹೆಜ್ಜೆ

Pannu Singh

Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್‌ಗೆ ಪನ್ನು ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.