“ನಾನು ಪ್ರಾಕ್ಟಿಕಲ್ ಗರ್ಲ್..” ಮೇಘಶ್ರೀ ಹೇಳಿದ ಮನಸಿನ ಮಾತು
Team Udayavani, Feb 23, 2022, 12:29 PM IST
ನಟಿ ಮೇಘಶ್ರಿ ಈಗ ಹ್ಯಾಪಿ ಮೂಡ್ನಲ್ಲಿದ್ದಾರೆ. ಅದಕ್ಕೆ ಕಾರಣ ಈ ವಾರ ಬಿಡುಗಡೆಯಾಗುತ್ತಿರುವ ಅವರ “ಮನಸಾಗಿದೆ’ ಸಿನಿಮಾ.
ಹೌದು, “ಮನಸಾಗಿದೆ’ ಈ ವರ್ಷ ಬಿಡುಗಡೆಯಾಗುತ್ತಿರುವ ಮೇಘಶ್ರೀ ಅಭಿನಯದ ಮೊದಲ ಸಿನಿಮಾ. ಹಾಗಾಗಿ ಈ ಸಿನಿಮಾದ ಮೇಲೆ ಅವರಿಗೆ ಸಾಕಷ್ಟು ಕುತೂಹಲ, ನಿರೀಕ್ಷೆ ಎಲ್ಲವೂ ಇದೆ. ಇನ್ನು “ಮನಸಾಗಿದೆ’ ಚಿತ್ರದಲ್ಲಿ ಯುವನಟ ಅಭಯ್ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗುತ್ತಿದ್ದಾರೆ. ಚಿತ್ರದಲ್ಲಿ ನಾಯಕನಿಗೆ ಮೇಘಶ್ರೀ ಮತ್ತು ಅಥಿರಾ ಇಬ್ಬರು ನಾಯಕಿಯರಾಗಿ ಜೋಡಿಯಾಗಿದ್ದಾರೆ.
“ಮನಸಾಗಿದೆ’ ಚಿತ್ರದ ಬಗ್ಗೆ ಮಾತನಾಡುವ ಮೇಘಶ್ರೀ, “ನಿರ್ದೇಶಕರು, ನಿರ್ಮಾಪಕರು ಮತ್ತು ಇಡೀ ಟೀಮ್ ತುಂಬ ಪ್ಲಾನಿಂಗ್ ಆಗಿ ಈ ಸಿನಿಮಾವನ್ನು ಶುರು ಮಾಡಿದ್ದರು. ಅದರಂತೆ, ಅಂದುಕೊಂಡ ಸಮಯಕ್ಕೆ ಸರಿಯಾಗಿ “ಮನಸಾಗಿದೆ’ ಸಿನಿಮಾ ರಿಲೀಸ್ ಆಗುತ್ತಿದೆ. ಈ ಸಿನಿಮಾದಲ್ಲಿ ನಾನು ಕಾಲೇಜ್ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ. ಲವ್ಗಿಂತ ಲೈಫ್ನಲ್ಲಿ ಸೆಟಲ್ ಆಗೋದು ಮುಖ್ಯ, ಏನಾದ್ರೂ ಅಚೀವ್ ಮಾಡೋದು ಮುಖ್ಯ ಅಂಥ ಅಂದುಕೊಂಡಿರುವ ಕ್ಯಾರೆಕ್ಟರ್ ಪ್ಲೇ ಮಾಡಿದ್ದೇನೆ. ತುಂಬಾ ಪ್ರಾಕ್ಟಿಕಲ್ ಆಗಿ ಯೋಚಿಸುವ ಕಾಲೇಜ್ ಹುಡುಗಿ ಹೇಗಿರುತ್ತಾಳೆ ಅನ್ನೋದನ್ನ ನನ್ನ ಕ್ಯಾರೆಕ್ಟರ್ ನಲ್ಲಿ ನೋಡಬಹುದು’ ಎಂದು ತಮ್ಮ ಪಾತ್ರ ಪರಿಚಯ ಮಾಡಿಕೊಳ್ಳುತ್ತಾರೆ.
ಇದನ್ನೂ ಓದಿ:ಲಂಕಾ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ಸೂರ್ಯಕುಮಾರ್, ದೀಪಕ್ ಚಾಹರ್
“ಇಂದಿನ ಯೂಥ್ಸ್ಗೆ ಇಷ್ಟವಾಗುವಂಥ ಹೊಸಥರದ ಕಥೆ ಈ ಸಿನಿಮಾದಲ್ಲಿದೆ. ಈ ಸಿನಿಮಾದಲ್ಲಿ ಕೆಲಸ ಮಾಡಿದ್ದು, ನನಗೂ ತುಂಬ ಖುಷಿ ಕೊಟ್ಟಿದೆ. ಹೊಸ ಹೀರೋ ಅಭಯ್ ಸಿನಿಮಾದಲ್ಲಿ ತಮ್ಮ ಕ್ಯಾರೆಕ್ಟರ್ನ ತುಂಬ ಚೆನ್ನಾಗಿ ನಿರ್ವಹಿಸಿದ್ದಾರೆ. ಸಿನಿಮಾದ ಲೊಕೇಶನ್ಸ್, ಮೇಕಿಂಗ್, ಮ್ಯೂಸಿಕ್ ಎಲ್ಲವೂ ಆಡಿಯನ್ಸ್ಗೆ ಒಂದು ಹೊಸ ಅನುಭವ ಕೊಡುತ್ತದೆ. “ಮನಸಾಗಿದೆ’ ಸಿನಿಮಾದ ಮೇಲೆ ನನಗೂ ಸಾಕಷ್ಟು ನಿರೀಕ್ಷೆ ಇದೆ’ ಎಂಬುದು ಮೇಘಶ್ರೀ ಮಾತು.
ಈಗಾಗಲೇ ಬಿಡುಗಡೆಯಾಗಿರುವ “ಮನಸಾಗಿದೆ’ ಚಿತ್ರದ ಟ್ರೇಲರ್ ಮತ್ತು ಹಾಡುಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿರುವುದರಿಂದ, ಥಿಯೇಟರ್ನಲ್ಲೂ “ಮನಸಾಗಿದೆ’ ಪ್ರೇಕ್ಷಕರ ಮನಸ್ಸು ಗೆಲ್ಲಲಿದೆ ಎಂಬ ಭರವಸೆಯಲ್ಲಿದೆ ಚಿತ್ರತಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.