![1-mofdd](https://www.udayavani.com/wp-content/uploads/2024/07/1-mofdd-415x270.jpg)
ಹರ್ಷ ನಿವಾಸಕ್ಕೆ ನಳಿನ್ ಸೇರಿ ಬಿಜೆಪಿ ಪ್ರಮುಖ ನಾಯಕರ ಭೇಟಿ ; ಸಾಂತ್ವನ
ಕಾಣದ ಶಕ್ತಿಗಳನ್ನು ಮಟ್ಟ ಹಾಕುತ್ತೇವೆ, ಇನ್ಯಾರು ದುಷ್ಕೃತ್ಯಕ್ಕೆ ಕೈಹಾಕಬಾರದು,ಕುಟುಂಬದ ಜೊತೆ ನಾವಿದ್ದೇವೆ
Team Udayavani, Feb 23, 2022, 6:01 PM IST
![1-dsad](https://www.udayavani.com/wp-content/uploads/2022/02/1-dsad-1-620x355.jpg)
ಶಿವಮೊಗ್ಗ : ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಬಜರಂಗದಳ ಕಾರ್ಯಕರ್ತ ಹರ್ಷ ಸೀಗೆಹಟ್ಟಿಯ ನಿವಾಸಕ್ಕೆ ಬುಧವಾರ ಬಿಜೆಪಿಯ ಪ್ರಮುಖ ನಾಯಕರು ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ಸಚಿವ ಈಶ್ವರಪ್ಪ, ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಸೇರಿ ಕೆಲ ಶಾಸಕರು ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬಿದ್ದಾರೆ.
ಕಾಣದ ಶಕ್ತಿಗಳನ್ನು ಮಟ್ಟ ಹಾಕುತ್ತೇವೆ: ನಳೀನ್ ಕುಮಾರ್
ಹರ್ಷನ ಕುಟುಂಬಕ್ಕೆ ಧೈರ್ಯ ಹಾಗೂ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇವೆ.ಘಟನೆಯ ಸಂಪೂರ್ಣ ವರದಿ ಕೇಳಿದ್ದೇವೆ.ಈ ಘಟನೆ ಗೆ ಸಂಬಂಧಿಸಿದವರ ಬಂಧನ ಮಾಡಿದ್ದೇವೆ.ಇದರ ಹಿಂದಿರುವ ಕಾಣದ ಶಕ್ತಿಗಳನ್ನು ಮಟ್ಟ ಹಾಕುತ್ತೇನವೆ. ಸರಕಾರ ಮತ್ತೆ ಈ ರೀತಿಯ ಘಟನೆ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತದೆ. ಮೂರುವರೆ ವರ್ಷಗಳ ನಮ್ಮ ಅಡಳಿತದಲ್ಲಿ ಇದೊಂದು ನಡೆಯಬಾರದಿತ್ತು, ಮುಂದೆ ನಡೆಯದ ಹಾಗೇ ನೋಡಿಕೊಳ್ಳುತ್ತೇವೆ ಎಂದರು.
ಸಂಘಟನೆ ಗಳನ್ನು ಬ್ಯಾನ್ ಮಾಡಲು ಅದರದ್ದೇ ಆದಂತಹ ಮಾನದಂಡಗಳಿವೆ.ಒಂದು ಸಂಘಟನೆ ರಾಜಕೀಯ ಸಂಘಟನೆ ಎಂದು ಬಂದಿದೆ ಎಂದು ಕಟೀಲ್ ಹೇಳಿದರು.
ಕಗ್ಗೊಲೆ ಅಗುತ್ತೆ ಆಂತಾ ಕಲ್ಪನೆ ಇರ್ಲಿಲ್ಲ : ಸಚಿವ ಕೆ.ಎಸ್.ಈಶ್ವರಪ್ಪ
ಹರ್ಷ ಕಗ್ಗೊಲೆ ಅಗುತ್ತೆ ಆಂತಾ ಕಲ್ಪನೆ ಇರ್ಲಿಲ್ಲ.ಸರ್ಕಾರ ಯಾರು ಗೂಂಡಾಗಳಿದ್ದಾರೆ ಅವರ ಬಂಧನ ಮಾಡಿದೆ.ಇಡೀ ರಾಜ್ಯದ ಹಿಂದೂ ಸಮಾಜ ಹರ್ಷನ ಕೊಲೆಯನ್ನು ಖಂಡಿಸುತ್ತಿದೆ. ಕುಟುಂಬಕ್ಕೆ ಆಗಿರುವ ಅನ್ಯಾಯ ವನ್ನು ಬಿಡೋದಿಲ್ಲ ಅಂತಾ ಸಿಎಂ ಹೇಳಿದ್ದಾರೆ.
ಕುಟುಂಬಕ್ಕೆ ಏನೇನೂ ಪರಿಹಾರ ಕೊಡಬೇಕು ಅದನ್ನು ಕೊಡೋ ಭರವಸೆ ಸಿಎಂ ನೀಡಿದ್ದಾರೆ ಎಂದು ಸಚಿವ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಕುಟುಂಬದ ಜೊತೆ ನಾವಿದ್ದೇವೆ : ಸಚಿವ ಕೋಟ
ಮತಾಂಧ ಶಕ್ತಿಗಳು ಹರ್ಷ ಹತ್ಯೆ ಮಾಡಿವೆ.ಬೇರೆಯವರಿಗೆ ಹೀಗೆ ಆಗಬಾರದು.ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದೇವೆ, ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿ ಹತ್ಯೆ ಮಾಡಿದ್ದಾರೆ.ಸರ್ಕಾರ ಸಮಾಜಕ್ಕೆ ದೊಡ್ಡ ಸವಾಲು ಇದು.ಹಿಂದೆ ಯಾವ ಸಂಘಟನೆ ಇದ್ದರೂ ಜೈಲಿಗೆ ಕಳುಹಿಸುವ ಕ್ರಮ ಅಗುತ್ತದೆ.ಟೀ ಕುಡಿಯಲು ಹೋದ ಹುಡುಗನನ್ನ ಕೊಲೆ ಮಾಡಿದ್ದಾರೆ.ಅವರ ಕುಟುಂಬದ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದೆವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಇನ್ಯಾರು ದುಷ್ಕೃತ್ಯಕ್ಕೆ ಕೈಹಾಕಬಾರದು : ವಿಜಯೇಂದ್ರ
ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಈ ಘಟನೆ ನಡೆಯಬಾರದಿತ್ತು.ಸರ್ಕಾರ ಗಂಭೀರ ತೆಗೆದುಕೊಂಡಿದ್ದರಿಂದ ಅರೋಪಿತರ ಬಂಧನವಾಗಿದೆ.ಕಾಂಗ್ರೆಸ್ ಮುಖಂಡರ ನಡುವಳಿಕೆ ತಲೆತಗ್ಗಿಸುವಂತಹದ್ದು ಎಂದು ವಿಜಯೇಂದ್ರ ಹೇಳಿದರು.
ಯಾವ ರೀತಿ ಕ್ರಮ ಕೈಗೊಳ್ಳಬೇಕು ಅಂದ್ರೆ ಇನ್ಯಾರು ದುಷ್ಕೃತ್ಯಕ್ಕೆ ಕೈಹಾಕಬಾರದು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿಕೆ ನೀಡಿದರು.
ಟಾಪ್ ನ್ಯೂಸ್
![1-mofdd](https://www.udayavani.com/wp-content/uploads/2024/07/1-mofdd-415x270.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?](https://www.udayavani.com/wp-content/uploads/2024/07/HIV-150x90.jpg)
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
![Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್](https://www.udayavani.com/wp-content/uploads/2024/07/dinesh-gundu-rao-150x87.jpg)
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
MUST WATCH
ಹೊಸ ಸೇರ್ಪಡೆ
![1-mofdd](https://www.udayavani.com/wp-content/uploads/2024/07/1-mofdd-150x98.jpg)
NEET ವಿಚಾರ; ಯುವಕರ ಭವಿಷ್ಯದ ಜತೆ ಆಟವಾಡುವವರನ್ನು ನಾವು ಬಿಡುವುದಿಲ್ಲ ಎಂದ ಪ್ರಧಾನಿ
![SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್](https://www.udayavani.com/wp-content/uploads/2024/07/11-2-150x90.jpg)
SSMB29: ರಾಜಮೌಳಿ – ಮಹೇಶ್ ಬಾಬು ಚಿತ್ರದಲ್ಲಿ ವಿಲನ್ ಆಗಲಿದ್ದಾರೆ ಪೃಥ್ವಿರಾಜ್
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Mangaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.