ಕಣಜಿ ಮುಖ್ಯಗುರು ಮೇಲೆ ಕ್ರಮಕ್ಕೆ ಆಗ್ರಹ
Team Udayavani, Feb 25, 2022, 12:01 PM IST
ಭಾಲ್ಕಿ: ಕಣಜಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಂಗ್ರಾಮಪ್ಪ ಖಂಡಾಳೆಯವರ ಮೇಲೆ ಶಿಸ್ತುಕ್ರಮ ಜರುಗಿಸಿ ಕೂಡಲೇ ಅವರನ್ನು ವರ್ಗಾವಣೆ ಮಾಡುವಂತೆ ಸರ್ಕಾರಿ ಪ್ರೌಢಶಾಲೆ ಕಣಜಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಮಾರುತಿ ಕಂಟೆ ಆಗ್ರಹಿಸಿದ್ದಾರೆ.
ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮನವಿ ಸಲ್ಲಿಸಿದ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು, ಕಣಜಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಸಂಗ್ರಾಮಪ್ಪ ಖಂಡಾಳೆ ಸುಮಾರು ಮೂರು ವರ್ಷಗಳಿಂದ ಶಾಲೆ ಅಭಿವೃದ್ಧಿಯಲ್ಲಿ ಕುಂಠಿತರಾಗಿದ್ದಾರೆ.
ಶೈಕ್ಷಣಿಕವಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಮತ್ತು ಫಲತಾಂಶದಲ್ಲಿಯೂ ಕಳಪೆಮಟ್ಟ ಪ್ರದರ್ಶಿಸಿದ್ದಾರೆ. ಇವರು ಸರ್ಕಾರಿ ನಿಯಮ ಗಾಳಿಗೆ ತೂರಿ, ಮೇಲುಸ್ತುವಾರಿ ಸಮಿತಿಯವರನ್ನು ಕೇಳದೇ ಹಣಕಾಸಿನ ವ್ಯವಹಾರ ಮಾಡಿ, ಶಾಲೆ ಅಭಿವೃದ್ಧಿ ಕುಂಠಿತಗೊಳ್ಳುವಲ್ಲಿ ಜವಾಬ್ದಾರಿಯಾಗಿದ್ದಾರೆ ಎಂದು ಆರೋಪಿಸಿ ತಕ್ಷಣವೇ ಇವರ ಮೇಲೆ ಸೂಕ್ತ ತನಿಖೆ ನಡೆಸಿ, ಶಿಸ್ತುಕ್ರಮ ಜರುಗಿಸಿ ಅವರನ್ನು ಪ್ರೌಢಶಾಲೆಯಿಂದ ವರ್ಗಾವಣೆ ಮಾಡುವಂತೆ ಒತ್ತಾಯಿಸಿದರು. ಈ ವೇಳೆ ಪ್ರಮುಖರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar ನಗರದಲ್ಲಿ ಜಿಲ್ಲಾ ಜೆಡಿಎಸ್ ವತಿಯಿಂದ ಪ್ರತಿಭಟನಾ ರ್ಯಾಲಿ
Bidar: ನಿವೇಶನಗಳ ವಾಪಸ್ ಕೊಟ್ರೂ ಸಿದ್ದರಾಮಯ್ಯ ಕುಟುಂಬಕ್ಕೆ ಕಂಟಕ ತಪ್ಪಲ್ಲ: ಶಾಸಕ ಬೆಲ್ದಾಳೆ
Police; ಹೃದಯಾಘಾತದಿಂದ ಕರ್ತವ್ಯನಿರತ 28 ವರ್ಷದ ಪೊಲೀಸ್ ಪೇದೆ ಸಾ*ವು
UK ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ ರಾಜ್ಯದ ಅದಿಶ್ ರಜಿನಿಶ್ ವಾಲಿ
Bidar; ಮಹಿಳಾ ಪಿಎಸ್ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.