ಸಿನಿಮಾ ನೋಡುವ ‘ಮನಸಾಗಿದೆ’: ನವ ನಾಯಕ ಅಭಯ್ ವಿಶ್ವಾಸದ ಮಾತು
Team Udayavani, Feb 25, 2022, 12:29 PM IST
ಬಹುತೇಕ ಹೊಸಪ್ರತಿಭೆಗಳೇ ಸೇರಿ ನಿರ್ಮಿಸಿರುವ “ಮನಸಾಗಿದೆ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಹಿಂದೆ ಶ್ರೀಕಿ ಅಭಿನಯದ “ಬರ್ತ್’ ಸಿನಿಮಾದಲ್ಲಿ ಬಾಲನಟನಾಗಿ ಅಭಿನಯಿಸಿದ್ದ ಅಭಯ್, “ಮನಸಾಗಿದೆ’ ಚಿತ್ರದ ಮೂಲಕ ಮೊದಲ ಬಾರಿಗೆ ನಾಯಕ ನಟನಾಗಿ ಬೆಳ್ಳಿತೆರೆಗೆ ಪರಿಚಯವಾಗು ತ್ತಿದ್ದಾರೆ.
ಈಗಾಗಲೇ ಬಿಡುಗಡೆಯಾಗಿರುವ “ಮನಸಾಗಿದೆ’ ಚಿತ್ರದ ಹಾಡುಗಳು ಮತ್ತು ಟ್ರೇಲರ್ ಒಂದಷ್ಟು ಗಮನ ಸೆಳೆದಿರುವುದ ರಿಂದ, ನೋಡುಗರಿ ಗೂ ಈ ಸಿನಿಮಾದ ಮೇಲೆ “ಮನಸಾಗಿದೆ’ ಎನ್ನುವ ಚಿತ್ರತಂಡ, ಥಿಯೇಟರ್ಗೆ ಬಂದು ಪ್ರೇಕ್ಷಕರು ಹೊಸ ಪ್ರತಿಭೆಗಳ ಪ್ರಯತ್ನಕ್ಕೆ ಬೆನ್ನು ತಟ್ಟುತ್ತಾರೆ ಎಂಬ ವಿಶ್ವಾಸದಲ್ಲಿದೆ.
ಇನ್ನು “ಮನಸಾಗಿದೆ’ ಚಿತ್ರದ ಬಗ್ಗೆ ಮಾತನಾಡುವ ನವ ನಾಯಕ ಅಭಯ್, “ಇದೊಂದು ಔಟ್ ಆ್ಯಂಡ್ ಔಟ್ ಲವ್ ಸ್ಟೋರಿ ಸಿನಿಮಾ. ಹಾಗಂತ ಎಲ್ಲ ಸಿನಿಮಾಗಳಲ್ಲಿ ಇರುವಂಥ ಮಾಮೂಲಿ ಲವ್ ಸ್ಟೋರಿ ಸಿನಿಮಾವಂತೂ ಖಂಡಿತಾ ಇದಲ್ಲ. ಇಲ್ಲಿಯವರೆಗೆ ಯಾವ ಸಿನಿಮಾದಲ್ಲೂ ಹೇಳಿರದ ರೀತಿಯಲ್ಲಿ, ಒಂದು ಹೊಸ ಲವ್ ಸ್ಟೋರಿಯನ್ನು, ಹೊಸ ರೀತಿಯಲ್ಲಿ ಈ ಸಿನಿಮಾದಲ್ಲಿ ಹೇಳಿದ್ದೇವೆ. ಇದು ಯೂಥ್ ಮತ್ತು ಫ್ಯಾಮಿಲಿ ಆಡಿಯನ್ಸ್ಗೆ ಇಷ್ಟವಾಗುವಂತಿದೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವಂಥ ವಿಷಯ ಸಿನಿಮಾದಲ್ಲಿದೆ’ ಎಂದು ಕಥಾಹಂದರದ ವಿಶೇಷತೆ ಎಳೆ ಬಿಚ್ಚಿಡುತ್ತಾರೆ.
ಇದನ್ನೂ ಓದಿ:‘ಓಲ್ಡ್ ಮಾಂಕ್’ ಕಿಕ್ ಸ್ಟಾರ್ಟ್!
“ತೇಜಸ್ ಕ್ರಿಯೇಶನ್ಸ್’ ಬ್ಯಾನರ್ನಲ್ಲಿ ಎಸ್. ಚಂದ್ರಶೇಖರ್ ನಿರ್ಮಿಸುತ್ತಿರುವ “ಮನಸಾಗಿದೆ’ ಚಿತ್ರದಲ್ಲಿ ಅಭಯ್ಗೆ ಮೇಘಶ್ರೀ, ಅಥಿರಾ ನಾಯಕಿಯಾಗಿ ತೆರೆಮೇಲೆ ಜೋಡಿಯಾಗಿದ್ದಾರೆ. ಉಳಿದಂತೆ ಸುರೇಶ್ ರೈ, ಭವ್ಯಶ್ರೀ ರೈ, ಸೂರಜ್, ತೇಜಸ್, ಅನೀಶ್, ಚಿದು ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಮನಸಾಗಿದೆ’ ಚಿತ್ರಕ್ಕೆ ಶ್ರೀನಿವಾಸ್ ಶಿಡ್ಲಘಟ್ಟ ನಿರ್ದೇಶನವಿದೆ. ಚಿತ್ರದ ಐದು ಹಾಡುಗಳಿಗೆ ಮಾನಸ ಹೊಳ್ಳ ಸಂಗೀತ ಸಂಯೋಜಿಸಿದ್ದಾರೆ. ಹಾಡುಗಳಿಗೆ ಕೆ. ಕಲ್ಯಾಣ್, ಡಾ. ವಿ ನಾಗೇಂದ್ರ ಪ್ರಸಾದ್, ಅರಸು ಅಂತಾರೆ, ಕವಿರಾಜ್, ಮಜಾ ಟಾಕೀಸ್ ರೆಮೋ ಸಾಹಿತ್ಯವಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Martin: ಇಂದು ಧ್ರುವ ಸರ್ಜಾ ಬರ್ತ್ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್ ಇವೆಂಟ್
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Royal; ಟಾಂಗ್ ಕೊಡಲು ವಿರಾಟ್ ರೆಡಿ: ದಿನಕರ್ ನಿರ್ದೇಶನದ ಸಿನಿಮಾ
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.