![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Feb 25, 2022, 3:20 PM IST
ಶಿವಮೊಗ್ಗ: ಇತ್ತೀಚೆಗೆ ಹತ್ಯೆಯಾದ ಹಿಂದೂ ಕಾರ್ಯಕರ್ತ ಹರ್ಷ ಮನೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಭೇಟಿ ನೀಡಿ, ಹರ್ಷ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಹರ್ಷ ಕೊಲೆ ಆರೋಪಿಗಳನ್ನು ಎನ್ ಕೌಂಟರ್ ಮಾಡಿ. ಇವರನ್ನ ಸಾಯಿಸಿ, ಕೋಕಾ ಕಾಯ್ದೆ ಹಾಕಿ. ನಮ್ಮ ಸಹನೆ ಮೀರಿ ಹೋಗಿದೆ, ವರ್ಷದೊಳಗೆ ತೀರ್ಪು ಬರಬೇಕು, ಹತ್ತು ವರ್ಷ ಕಾಯಲಾಗದು ಎಂದರು.
ಕಾಂಗ್ರೆಸ್ ಇರುವುದೇ ಮುಸ್ಲಿಮರಿಗಾಗಿ, ಸಿದ್ದರಾಮ್ಮಯ್ಯ ಮುಖ್ಯಮಂತ್ರಿಯಾಗಿದ್ದಾಗ 250 ಪಿಎಫ್ಐ ಕಾರ್ಯಕರ್ತರ ಕೇಸ್ ವಾಪಸ್ ಪಡೆದಿದ್ದರು. ಸಿದ್ದರಾಮಯ್ಯನವರೇ ನಿಮ್ಮದು ಇದೇ ದೇಶ, ಅವರು ನಿಮ್ಮನ್ನೂ ಬಿಡುವುದಿಲ್ಲ, ಸಿದ್ದು ನಿಮ್ಮ ಹೆಸರಲ್ಲೇ ರಾಮ ಇದ್ದಾನೆ, ಅವರು ನಿಮ್ಮನ್ನು ಬಿಡುವುದಿಲ್ಲ ಎಂದರು.
ಹರ್ಷ ಸ್ವಂತದ, ಸ್ವಾರ್ಥದ ಹಿನ್ನೆಲೆ ಕೊಲೆಯಾಗಿಲ್ಲ, ಹಣ, ಹುಡುಗಿ, ಜಮೀನು ವಿಚಾರದಲ್ಲಿ ಹರ್ಷ ಕೊಲೆಯಾಗಿಲ್ಲ. ಅವನು ಹಿಂದೂ ಕಾರ್ಯಕರ್ತ, ಹಿಂದುತ್ವದ ಹಿನ್ನೆಲೆಯಲ್ಲಿ ಕೊಲೆಯಾಗಿದೆ, ಅವನ ಸಾವು ವ್ಯರ್ಥವಾಗಬಾರದು. ಬೇರೆ ಪ್ರಕರಣದ ರೀತಿ 302 ಕೇಸ್ ಹಾಕಿ ಕೈ ತೊಳೆದುಕೊಳ್ಳಬಾರದು ಎಂದು ಮುತಾಲಿಕ್ ಆಗ್ರಹಿಸಿದರು.
ಇದನ್ನೂ ಓದಿ:ಉಳ್ಳಾಲದಲ್ಲಿ ಹಿಜಾಬ್ ವಿವಾದ: ವಿದ್ಯಾರ್ಥಿಗಳಿಂದ ಪ್ರತಿಭಟನೆ
ರಾಕ್ಷಸಿ ಸ್ವರೂಪದಲ್ಲಿ ಹರ್ಷನ ಕೊಲೆಯಾಗಿದೆ, ತರಬೇತಿ ಪಡದೆವರೇ ಕೊಲೆ ಮಾಡಿದ್ದಾರೆ. ಅವರ ಮಧ್ಯೆ ದ್ವೇಷ ಇತ್ತು ಎಂದು ಹೇಳಿ ಕೇಸ್ ಮುಚ್ಚಿಹಾಕಲು ಬಿಡುವುದಿಲ್ಲ. ಅವರ ಹಿಂದೆ ಇಸ್ಲಾಮಿಕ್ ಶಕ್ತಿಯೂ ಇದೆ, ಅವರನ್ನೂ ಬಂಧಿಸಬೇಕು ಎಂದರು.
ಡಿಜೆ ಹಳ್ಳಿ-ಕೆಜೆ ಹಳ್ಳಿಯಲ್ಲಿ ಪೊಲೀಸ್ ಸ್ಟೇಷನ್, ಮನೆ ಸುಟ್ಟರೂ ಜಮೀನು ಪಡೆದು ಹೊರಗಿದ್ದಾರೆ. ರುದ್ರೇಶ್, ರಾಜು, ಕುಟ್ಟಪ್ಪ ಕೊಂದವರೂ ಜಾಮೀನು ಪಡೆದು ಹೊರಗಡೆ ಓಡಾಡುತ್ತಿದ್ದಾರೆ. ಇದೇ ಮಾದರಿಯಲ್ಲಿ ಜಾಮೀನು ನೀಡುವ ಸೆಕ್ಷನ್ ಹಾಕಿದರೆ ಹಿಂದೂ ಸಮಾಜ ಬಿಡುವುದಿಲ್ಲ. ಎಸ್ ಡಿಪಿಐ, ಪಿಎಫ್ಐ, ಎಸ್ಎಫ್ಐ ಯಾರೇ ಆದರೂ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅವರು ಸಂವಿಧಾನ, ಕೋರ್ಟ್ ಗೆ ಬೆಲೆ ನೀಡುವಂತೆ ಮಾಡಿ ಎಂದು ಹೇಳಿದರು.
ನಮಗೆ ಕಣ್ಣೀರು ಹಾಕಲು ಅವಕಾಶವಿಲ್ಲವೇ, ನಮ್ಮ ಕೈಯಲ್ಲಿ ಮಚ್ವು, ಲಾಂಗ್ ಇರಲಿಲ್ಲ. ಶವಯಾತ್ರೆಯಲ್ಲಿ ಭಾಗಿಯಾದ ಕಾರ್ಯಕರ್ತರ ಮೇಲೆ ಕೇಸ್ ಹಾಕಬಾರದು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದರು.
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.