![rain 21](https://www.udayavani.com/wp-content/uploads/2024/07/rain-21-415x263.jpg)
ಚರ್ಚ್ಗಳ ಧ್ವಂಸ: ಕ್ರೈಸ್ತರ ವೇದಿಕೆ ಪ್ರತಿಭಟನೆ
Team Udayavani, Feb 25, 2022, 3:25 PM IST
![19protest](https://www.udayavani.com/wp-content/uploads/2022/02/19protest-2-620x298.jpg)
ಬೀದರ: ರಾಜ್ಯದ ವಿವಿಧೆಡೆ ಚರ್ಚ್ ಹಾಗೂ ಯೇಸು ಪ್ರತಿಮೆ ಧ್ವಂಸಗೊಳಿಸಿರುವುದನ್ನು ಖಂಡಿಸಿ ನಗರದಲ್ಲಿ ಗುರುವಾರ ಕರ್ನಾಟಕ ಕ್ರೈಸ್ತರ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ಮೂಲಕ ತೆರಳಿ ರಾಜ್ಯಪಾಲರಿಗೆ ಬರೆದ ಮನವಿ ಪತ್ರ ಸಲ್ಲಿಸಿದರು. ಕೆಂಗೇರಿ ಮತ್ತು ಗೋಕುಂಟೆ ಗ್ರಾಮದಲ್ಲಿ ಚರ್ಚ್, ಯೇಸು ಪ್ರತಿಮೆ ಧ್ವಂಸ ಹೀನ ಕೃತ್ಯವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೆಲವು ಸಮಾಜ ಘಾತುಕ ವ್ಯಕ್ತಿ ಹಾಗೂ ಸಂಘಟನೆಗಳು ಬಡ ಕ್ರೈಸ್ತರು, ಪ್ರಾರ್ಥನೆ ಮಂದಿರಗಳ ಮೇಲೆ ದಾಳಿ ಮಾಡುತ್ತ ತೊಂದರೆ ಕೊಡುತ್ತಿರುವುದು ಅಪರಾಧ. ಈ ದಾಳಿಗಳು ಹಲವು ವರ್ಷಗಳಿಂದ ನಡೆಯುತ್ತಿದ್ದರೂ ಸರ್ಕಾರ, ಅಧಿಕಾರಿಗಳು ಮೂಕ ಪ್ರೇಕ್ಷಕರಾಗಿದ್ದಾರೆ. ಕೆಲ ಸಮಾಜ ಘಾತುಕ ವ್ಯಕ್ತಿ ಹಾಗೂ ಸಂಘಟನೆಗಳು ಇದಕ್ಕೆ ಒತ್ತಾಯದ ಮತಾಂತರ ಬಣ್ಣ ಹಚ್ಚಿ ಅಮಾಯಕ ದೈವ ಸೇವಕರು ಹಾಗೂ ಕ್ರೈಸ್ತ ದೇವಾಲಯಗಳ ಮೇಲೆ ಹಲ್ಲೆ ಹಾಗೂ ದಾಳಿ ಮಾಡುತ್ತಿದ್ದಾರೆ ಎಂದು ದೂರಲಾಗಿದೆ.
ರಾಜ್ಯದಲ್ಲಿ ಅನಧಿಕೃತ ದೇವಾಲಯಗಳೆಂದು ಅನೇಕ ಚರ್ಚ್ ನೆಲಸಮ ಮಾಡಲಾಗಿದೆ ಮತ್ತು ಆಸ್ತಿ ಮೊಟಕುಗೊಳಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಬೆಂಗಳೂರಿನ ಕೆಂಗೇರಿಯ ಕ್ರೈಸ್ತ ದೇವಾಲಯಗಳ ಹಕ್ಕುಪತ್ರ ಇದ್ದರೂ ಯಾವುದೇ ನೋಟಿಸ್ ಹಾಗೂ ಸೂಚನೆ ನೀಡದೇ ಅಧಿಕಾರಿಗಳು, ಪೊಲೀಸರು ಸೇರಿ ದೇವಾಲಯಗಳು ನೆಲಸಮಗೊಳಿಸಿದ್ದಾರೆ. ಗೋಕುಂಟೆ ಗ್ರಾಮದಲ್ಲಿ ರಕ್ಷಣಾಗಿರಿಯಲ್ಲಿ ಕ್ರೈಸ್ತರ ಪ್ರತಿಮೆ ಸರ್ಕಾರದಿಂದ ಧ್ವಂಸಗೊಳಿಸಿರುವುದು ಖಂಡನೀಯ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಬೇಕು. ಅಲ್ಪಸಂಖ್ಯಾತರ ಕ್ರೈಸ್ತರ ಹಾಗೂ ದೇವಾಲಯಗಳಿಗೆ ರಕ್ಷಣೆ ನೀಡಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ ವೇದಿಕೆ ರಾಜ್ಯಾಧ್ಯಕ್ಷ ಭಾಸ್ಕರಬಾಬು ಪಾತರಪಳ್ಳಿ, ಜಿಲ್ಲಾಧ್ಯಕ್ಷ ರಾಜೇಶ ಜ್ಯೋತಿ, ವಿಭಾಗ ಉಸ್ತುವಾರಿ ಪ್ರಕಾಶ ಕೋಟೆ, ಸ್ಯಾಮಸನ್ ಹಿಪ್ಪಳಗಾಂವ, ಸುಧಾಕರ ಢೋಣೆ, ಸುನೀಲ ಹಿರೇಮನಿ, ಮಾಣಿಕ ಕೌಠಾ, ರೇ. ರಾಜಕುಮಾರ ಬರ್ಮಾ, ಸಾಲೋಮನ ಟಿ, ದತ್ತು ಸೋನಿ, ಲೋಕೇಶ ಕನಕ, ಸುಂದರರಾಜ ಫಿರಂಗೆ, ದಶರಥ ಮಿಸೆ ಇತರರಿದ್ದರು.
ಟಾಪ್ ನ್ಯೂಸ್
![rain 21](https://www.udayavani.com/wp-content/uploads/2024/07/rain-21-415x263.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು](https://www.udayavani.com/wp-content/uploads/2024/07/suspended-150x83.jpg)
Bidar; ಲೈಂಗಿಕ ಕಿರುಕುಳ ಪ್ರಕರಣ: ಇಬ್ಬರು ಶಿಕ್ಷಕರ ಅಮಾನತ್ತು
![rape](https://www.udayavani.com/wp-content/uploads/2024/07/rape-150x100.jpg)
Bidar; 9 ನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಶಿಕ್ಷಕನ ಬಂಧನ
![Chaluvarayaswamy](https://www.udayavani.com/wp-content/uploads/2024/06/Chaluvarayaswamy-150x84.jpg)
Farmers; ಬೆಳೆ ವಿಮೆ ‘ಷರತ್ತು’ ಬದಲಾವಣೆ: ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ
![Swamijis should talk to High command about CM change: Chaluvarayaswamy](https://www.udayavani.com/wp-content/uploads/2024/06/chaluvata-150x83.jpg)
CM ಬದಲಾವಣೆ ಬಗ್ಗೆ ಸ್ವಾಮೀಜಿಗಳು ಬೇಕಾದರೆ ವರಿಷ್ಠರ ಜತೆ ಮಾತನಾಡಲಿ: ಚಲುವರಾಯಸ್ವಾಮಿ
![Bidar; I was defeated for our selfishness says Bhagwanth Khuba](https://www.udayavani.com/wp-content/uploads/2024/06/khuba-150x83.jpg)
Bidar; ನಮ್ಮವರ ಸ್ವಾರ್ಥಕ್ಕಾಗಿ ನನಗೆ ಸೋಲಾಯಿತು…: ಭಗವಂತ ಖೂಬಾ ಬೇಸರ
MUST WATCH
ಹೊಸ ಸೇರ್ಪಡೆ
![rain 21](https://www.udayavani.com/wp-content/uploads/2024/07/rain-21-150x95.jpg)
Heavy Rain; ಉತ್ತರ ಕನ್ನಡ ಜಿಲ್ಲೆಯ 5 ತಾಲೂಕುಗಳಲ್ಲಿ ಜುಲೈ 8 ರಂದು ಪಿಯುಸಿವರೆಗೆ ರಜೆ
![Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ](https://www.udayavani.com/wp-content/uploads/2024/07/Bha-150x73.jpg)
Bhatkal ಮುಂದುವರಿದ ವರುಣನ ಆರ್ಭಟ; ತಗ್ಗು ಪ್ರದೇಶಗಳು ಜಲಾವೃತ
![1-wqwewewq](https://www.udayavani.com/wp-content/uploads/2024/07/1-wqwewewq-150x106.jpg)
T20 ಸರಣಿ ಸಮಬಲ: ಜಿಂಬಾಬ್ವೆ ವಿರುದ್ಧ 100 ರನ್ ಗಳ ಅಮೋಘ ಜಯ ಸಾಧಿಸಿದ ಭಾರತ
![renukaacharya](https://www.udayavani.com/wp-content/uploads/2024/07/renukaacharya-150x100.jpg)
Lok Sabha Elections; ಪಕ್ಷ ವಿರೋಧಿ ಚಟುವಟಿಕೆ ನಡೆಸಿಯೇ ಇಲ್ಲ: ರೇಣುಕಾಚಾರ್ಯ
![BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!](https://www.udayavani.com/wp-content/uploads/2024/07/BSNL-150x84.jpg)
BSNL ಟವರ್ ಸಮಸ್ಯೆ: ಕೇಂದ್ರ ಸಚಿವರ ಜೊತೆ ಚರ್ಚೆ ಮಾಡಿದ ಸಂಸದ ಕಾಗೇರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.