ನಗರ ವ್ಯಾಪ್ತಿ ಚತುಷ್ಪಥ ರಸ್ತೆಗೆ ಗ್ರೀನ್‌ ಸಿಗ್ನಲ್‌!


Team Udayavani, Feb 25, 2022, 5:43 PM IST

21road

ಮಸ್ಕಿ: ಬಹುನಿರೀಕ್ಷಿತ ಮಸ್ಕಿ ಸಿಟಿ ವ್ಯಾಪ್ತಿಯ ರಸ್ತೆ ಅಗಲೀಕರಣ, ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಕೊನೆಗೂ ಹಸಿರು ನಿಶಾನೆ ದೊರೆತಿದೆ. ಬಹುಕೋಟಿ ಮೊತ್ತದ ಈ ಯೋಜನೆಗೆ ಕೇಂದ್ರದಿಂದ ಹಣಕಾಸಿನ ನೆರವು ದಕ್ಕಿದ್ದು ಕೆಲವೇ ದಿನಗಳಲ್ಲಿ ಕಾಮಗಾರಿ ಆರಂಭದ ನಿರೀಕ್ಷೆ ಗರಿಗೆದರಿವೆ!.

ಪಟ್ಟಣದ ಜನತೆಯ ಬಹುದಿನಗಳ ಬೇಡಿಕೆಯಾಗಿರುವ ಮಸ್ಕಿಯಿಂದ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಪಟ್ಟಣ ವ್ಯಾಪ್ತಿಯೊಳಗೆ ನಾಲ್ಕು ಪಥದ ರಸ್ತೆಯನ್ನಾಗಿಸುವ ಕನಸು ಈಗ ಸಾಕಾರಗೊಳ್ಳುವತ್ತ ಸಾಗಿದೆ. ಮಸ್ಕಿ ತಾಲೂಕು ಕೇಂದ್ರವಾದ ಬಳಿ ಪಟ್ಟಣ ದಿನದಿಂದ ದಿನಕ್ಕೆ ವೇಗವಾಗಿ ಬೆಳೆಯುತ್ತಿದೆ. ಪಟ್ಟಣದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ತೀವ್ರ ಇಕ್ಕಟ್ಟಾಗಿದ್ದರಿಂದ ಪಾರ್ಕಿಂಗ್‌ ಗೆ ಸ್ಥಳವಕಾಶವಿರಲಿ, ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಸಮಸ್ಯೆ ಯಾಗುತ್ತಿದೆ.

ತೀವ್ರ ಇಕ್ಕಟ್ಟು ಪರಿಸ್ಥಿತಿ ಕಾರಣ ನಿರಂತರ ಟ್ರಾಫಿಕ್‌ ಹೆಚ್ಚುತ್ತಿತ್ತು. ಹೀಗಾಗಿ ಇಲ್ಲಿನ ರಸ್ತೆ ಅಗಲೀಕರಣಗೊಳಿಸಿ ಚತುಷ್ಪಥದ ರಸ್ತೆ ಯನ್ನಾಗಿಸುವುದಕ್ಕಾಗಿ ಕೊಪ್ಪಳ ಸಂಸದ ಕರಡಿ ಸಂಗಣ್ಣ ಕರಡಿ ಕೇಂದ್ರ-ರಾಜ್ಯ ಸರ್ಕಾರದ ಮೇಲೆ ನಿರಂತರ ಒತ್ತಡ ಹಾಕಿದ್ದರು. ಇದರ ಪರಿಣಾಮವಾಗಿ ಈಗ ರಸ್ತೆ ಅಗಲೀಕರಣದ ಭಾಗ್ಯ ಒಲಿದಿದೆ.

ಪಟ್ಟಣದ ಅಶೋಕ ವೃತ್ತದಿಂದ ಬಸವೇಶ್ವರ ವೃತ್ತದವರೆಗಿನ 2.85 ಕಿ.ಮೀ ರಸ್ತೆಯನ್ನು ರಸ್ತೆ ವಿಭಜಕ, ಒಳ ಚರಂಡಿ, ಪಾದಚಾರಿ ರಸ್ತೆ ಹಾಗೂ ರಸ್ತೆ ಬದಿಯಲ್ಲಿ ಹೈಮಾಸ್ಟ್‌ ಬೀದಿ ದೀಪಗಳ ಅಳವಡಿಸುವ ಯೋಜನೆ ಇದಾಗಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹುನಗುಂದ ವಿಭಾಗದ ಅಧಿಕಾರಿಗಳು ಕಾಮಗಾರಿಗೆ ತಗುಲುವ ವೆಚ್ಚದ ಕುರಿತು ಅಂದಾಜು ಯೋಜನೆ ತಯಾರಿಸಿ ಕೇಂದ್ರಕ್ಕೆ ಸಲ್ಲಿಸಿದ್ದರು. ಈಗ ಕೇಂದ್ರ ಸರ್ಕಾರ 14 ಕೋಟಿ ವೆಚ್ಚದ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಒಪ್ಪಿಗೆ ನೀಡಿ ಆರ್ಥಿಕ ಇಲಾಖೆಗೆ ಶಿಫಾರಸು ಮಾಡಿದೆ.

ಮಸ್ಕಿ ಪಟ್ಟಣದಲ್ಲಿ ಹಾದು ಹೋಗುವ ರಸ್ತೆ ಚತುಷ್ಪಥ ರಸ್ತೆಯನ್ನಾಗಿಸುವುದಕ್ಕಾಗಿ ಆರ್ಥಿಕ ಇಲಾಖೆಯಿಂದ ಅನುಮೋದನೆ ಪಡೆಯುವ ಸಲುವಾಗಿ ಯೋಜನೆಯ ಹೆದ್ದಾರಿ ಪ್ರಾಧಿಕಾರದ ಹುನಗುಂದ ವಿಭಾಗದ ಹಿರಿಯ ಅಧಿಕಾರಿಗಳು ಕಳೆದೊಂದು ವಾರದಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. 15 ದಿನಗಳ ಒಳಗಾಗಿ ಆರ್ಥಿಕ ಇಲಾಖೆಯಿಂದ ಅನುಮತಿ ಪಡೆದು ತಿಂಗಳೊಳಗಾಗಿ ಕಾಮಗಾರಿ ಟೆಂಡರ್‌ ಕರೆಯಲಾಗುವುದು ಎಂದು ಅಧಿಕಾರಿಗಳ ಮೂಲದಿಂದ ತಿಳಿದು ಬಂದಿದೆ.

ಪಟ್ಟಣದ 2.85 ಕಿ.ಮೀ ಚತುಷ್ಪಥ ರಸ್ತೆ ನಿರ್ಮಾಣಕ್ಕೆ ಚರಂಡಿ, ಪುಟ್‌ಪಾತ್‌ ಸೇರಿ ಒಟ್ಟು 26 ಮೀ. ರಸ್ತೆ ಅಗಲೀಕರಣವಾಗಲಿದೆ. 26 ಮೀ. ಒಳಗೆ ಬರುವ ವಿದ್ಯುತ್‌ ಕಂಬ ಹಾಗೂ ಕುಡಿವ ನೀರಿನ ಪೈಪ್‌ಲೈನ್‌ ಸ್ಥಳಾಂತರಿಸುವ ಸಂಬಂಧ ಹೆದ್ದಾರಿ ಪ್ರಾಧಿಕಾರದಿಂದ ಜೆಸ್ಕಾಂ ಹಾಗೂ ಪುರಸಭೆಗೆ ಹೆದ್ದಾರಿ ಪತ್ರಗಳು ಬಂದಿವೆ. ಪಟ್ಟಣದ ರಸ್ತೆಯ ಆಧುನೀಕರಣ ಬರುವ ದಿನಗಳಲ್ಲಿ ಮತ್ತಷ್ಟು ವೇಗ ಪಡೆದುಕೊಳ್ಳಲಿದೆ.

ಚತುಷ್ಪಥ ಕಾಮಗಾರಿಗೆ ಕೇಂದ್ರ ಸರ್ಕಾರ ಹಣಕಾಸಿನ ನೆರವು ನೀಡಲು ಒಪ್ಪಿಗೆ ನೀಡಿದೆ. ಹೀಗಾಗಿ 15 ದಿನಗಳ ಒಳಗಾಗಿ ಟೆಂಡರ್‌ ಪ್ರಕ್ರಿಯೆ ಆರಂಭವಾಗುತ್ತದೆ. -ವಿಜಯಕುಮಾರ್‌ ಪಾಟೀಲ್‌, ಹೆದ್ದಾರಿ ಪ್ರಾಧಿಕಾರ, ಹುನಗುಂದ

ಕೇಂದ್ರ ಸರ್ಕಾರ ಇದೀಗ ಪಟ್ಟಣದಲ್ಲಿ ನಾಲ್ಕು ಪಥದ ರಸ್ತೆ ಹಾಗೂ ವಿಭಜಕ ನಿರ್ಮಾಣದ ಅಂದಾಜು ಪಟ್ಟಿಗೆ ಒಪ್ಪಿಗೆ ಸೂಚಿಸಿದೆ. ಯೋಜನೆ ಅನುಷ್ಠಾನಕ್ಕಾಗಿ ಕೇಂದ್ರ ಸಚಿವರ ಮೇಲೆ ಸತತ ಒತ್ತಡ ಹಾಕಿ ಆಡಳಿತಾತ್ಮಕ ಒಪ್ಪಿಗೆ ಪಡೆಯಲಾಗಿದೆ. ಇದೀಗ ಹಣಕಾಸು ಸಚಿವರನ್ನು ಭೇಟೆಯಾಗಿ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ಆದಷ್ಟು ಬೇಗ ದೊರೆಯುತ್ತದೆ. -ಸಂಗಣ್ಣ ಕರಡಿ, ಸಂಸದ, ಕೊಪ್ಪಳ ಕ್ಷೇತ್ರ

-ಮಲ್ಲಿಕಾರ್ಜುನ ಚಿಲ್ಕರಾಗಿ

ಟಾಪ್ ನ್ಯೂಸ್

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Yala Kunni Movie Review

Yala Kunni Review: ಜಾಲಿ ಜಾಲಿ… ಎಲ್ಲಾ ಜಾಲಿ!

United States: ಜಗತ್ತಿನ ಅಣ್ಣ ಗೊರೂರು: ನಮ್ಮೂರೇ ನಮಗೇ ಶಾಶ್ವತ

United States: ಜಗತ್ತಿನ ಅಣ್ಣ ಗೊರೂರು: ನಮ್ಮೂರೇ ನಮಗೇ ಶಾಶ್ವತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

INDvsNZ: ಭಾರತಕ್ಕೆ ಬೃಹತ್‌ ಗುರಿ ನೀಡಿದ ಕಿವೀಸ್; ಸ್ಪಿನ್‌ ಜಾಲದಲ್ಲಿ ಗೆಲ್ಲುತ್ತಾ ಭಾರತ

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್

Lady don: ದೆಹಲಿಯ ಬರ್ಗರ್ ಕಿಂಗ್ ಕೊಲೆ ಪ್ರಕರಣದಲ್ಲಿ ಬೇಕಾಗಿದ್ದ ಲೇಡಿ ಡಾನ್ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

jagadish shettar

Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ

8-bng

Bengaluru: 1.5 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು

Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.