ತುಂಬಿದ ಚರಂಡಿ; ದಿಢೀರ್ ಹೆದ್ದಾರಿ ಬಂದ್-ಆಕ್ರೋಶ
Team Udayavani, Feb 25, 2022, 5:49 PM IST
ಮುದಗಲ್ಲ: ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವ ವಾರ್ಡ್ ನಂ.7ರ ನಿವಾಸಿಗಳು ಚರಂಡಿ ಸ್ವತ್ಛಗೊಳಿಸದ್ದರಿಂದ ಸೊಳ್ಳೆಕಾಟಕ್ಕೆ ಬೇಸತ್ತು ರಾಯಚೂರು-ಬೆಳಗಾವಿ ರಾಜ್ಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟಿಸಿ ಪುರಸಭೆ ಮುಖ್ಯಾಧಿಕಾರಿ ಹಾಗೂ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಾರ್ಡ್ ನಂ.7 ಹನುಮಂತ ದೇವರ ಗುಡಿ ಮುಂಭಾಗದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಹಿನ್ನೆಲೆಯಲ್ಲಿ ನಿರ್ಮಿಸಿದ ಚರಂಡಿಗೆ ಸಂಪರ್ಕ ಕಲ್ಪಿಸದೇ ಹಳೇ ಚರಂಡಿಯಲ್ಲಿ ಪುರಸಭೆ ಮುಂದಿರುವ ಮೂತ್ರಾಲಯ ಹಾಗೂ ಶೌಚಾಲಯ ನೀರು ಹರಿದು ಹಳೇ ಚರಂಡಿಯಲ್ಲಿ ಕಳೆದ ನಾಲ್ಕಾರು ತಿಂಗಳಿಂದ ಅದರಲ್ಲಿಯೇ ಸಂಗ್ರಹವಾಗಿದೆ. ಇದು ಅಲ್ಲಿನ ನಿವಾಸಿಗೆ ತೊಂದರೆಯಾಗಿದೆ. ಹೀಗಾಗಿ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ನಿತ್ಯ ನರಕಯಾತನೆ ಅನುಭವಿಸುವಂತಾಗಿದೆ ಎಂದು ಆಕ್ರೋಶಗೊಂಡು ಏಕಾಏಕಿ ಒಂದು ಗಂಟೆ ಕಾಲ ಹೆದ್ದಾರಿ ಬಂದ್ ಮಾಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪಿಎಸೈ ಡಾಕೇಶ ಹಾಗೂ ಸಿಬ್ಬಂದಿ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸುವಲ್ಲಿ ಯಶಸ್ವಿಯಾದರು. ಅಷ್ಟಾದರೂ ಮುಖ್ಯಾಧಿಕಾರಿಗಳ ಅನುಪಸ್ಥಿತಿಯಲ್ಲಿ ನೈರ್ಮಲ್ಯ ನಿರೀಕ್ಷಕಿ ಆರೀಫುನ್ನಿಸಾಬ ಆಗಮಿಸಿ ಒಂದು ಗಂಟೆಯಲ್ಲಿಯೇ ಸಮಸ್ಯೆ ಪರಿಹರಿಸುವುದಾಗಿ ಭರವಸೆ ನೀಡಿ ಹಳೇ ಚರಂಡಿ ಮುಚ್ಚಿಸಿ ಜನರ ಸಮಸ್ಯೆಗೆ ಸ್ಪಂದಿಸಿದರು.
ಈ ವೇಳೆ ಭೀಮಣ್ಣ ಉಪ್ಪಾರ, ಲಿಂಗಪ್ಪ ಉಪ್ಪಾರ, ರಾಮು ಉಪ್ಪಾರ, ಶಂಕರ, ರಾಮಣ್ಣ ಉಪ್ಪಾರ, ಅಮೀನ ನದಾಫ್, ಆನಂದ ಮಡಿವಾಳ, ಶರಣು ಹೂಗಾರ, ಹೇಮಂತ ಪಾಟೀಲ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ
Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.