ಮನಕಲಕುವ ದೃಶ್ಯ: ಉಕ್ರೇನ್ ನಲ್ಲಿ ಸಿಲುಕಿದ್ದ 219 ಭಾರತೀಯರು ಮುಂಬಯಿಯತ್ತ
"ಜೀವನದಲ್ಲಿ ವಿಷಯಗಳು ಕಷ್ಟಕರವಾದಾಗ ಈ ದಿನವನ್ನು ನೆನಪಿಡಿ''
Team Udayavani, Feb 26, 2022, 3:27 PM IST
ಬುಕಾರೆಸ್ಟ್ : ಯುದ್ಧ ದಿಂದ ನಲುಗಿ ಹೋಗಿರುವ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಭಾರತೀಯರ ರಕ್ಷಣಾ ಕಾರ್ಯವನ್ನು ಸರಕಾರ ಆರಂಭಿಸಿದ್ದು, ಶನಿವಾರ 219 ಮಂದಿ ಭಾರತೀಯರನ್ನು ಉಕ್ರೇನ್ ನ ನೆರೆಯ ರಾಷ್ಟ್ರ ರೊಮೇನಿಯಾ ಮೂಲಕ ಏರ್ ಇಂಡಿಯಾ ವಿಶೇಷ ವಿಮಾನದ ಮೂಲಕ ಮುಂಬಯಿಯತ್ತ ಕರೆ ತರಲಾಗುತ್ತಿದೆ. ಶನಿವಾರ ರಾತ್ರಿ ೮ ಗಂಟೆಯ ವೇಳೆಗೆ ವಿಮಾನ ಮುಂಬಯಿಗೆ ಬಂದಿಳಿಯಲಿದೆ.
ವಿಮಾನ ನಿಲ್ದಾಣದಲ್ಲಿ ಭವಿಷ್ಯದ ಕನಸು ಕಟ್ಟಿ ಹೋಗಿದ್ದ ವೈದ್ಯಕೀಯ ವಿದ್ಯಾರ್ಥಿಗಳು ಕಣ್ಣೀರಿನಲ್ಲೇ , ಭವಿಷ್ಯದ ಚಿಂತನೆಯಲ್ಲಿ ವಿಮಾನವನ್ನೇರಿದ್ದು ಮನಕಲಕುವಂತಿತ್ತು.
“Remember this day whenever in life things become difficult”.
Must listen to this moving speech. India’s Ambassador @AmbShrivastava addresses rescued Indian Nationals before they take off to India. 219 Indian Nationals who were stranded in Ukraine will land in Mumbai tonight.?? pic.twitter.com/yjjNcwSPEL
— Aditya Raj Kaul (@AdityaRajKaul) February 26, 2022
ರೊಮೇನಿಯಾದ ಭಾರತೀಯ ರಾಯಭಾರಿ ರಾಹುಲ್ ಶ್ರೀವಾತ್ಸವ ವಿಮಾನದಲ್ಲಿದ್ದವರನ್ನುದ್ದೇಶಿಸಿ ಮಾತನಾಡಿ, ಭಾರತ ಸರಕಾರ ಪ್ರಜೆಗಳನ್ನು ರಕ್ಷಿಸಲು ಹಗಲಿರುಳು ಕೆಲಸ ಮಾಡುತ್ತಿದೆ. ಕೊನೆಯ ವ್ಯಕ್ತಿಯನ್ನು ರಕ್ಷಿಸುವ ವರೆಗೂ ಸರಕಾರ ಕೆಲಸ ನಿಲ್ಲಿಸುವುದಿಲ್ಲ ಎಂದರು.
ಇದನ್ನೂ ಓದಿ :ಉಕ್ರೇನ್ ವಿಚಾರದಲ್ಲಿ ಭಾರತದ ವಿದೇಶಾಂಗ ನೀತಿ ವಿಫಲ : ಕಾಂಗ್ರೆಸ್ ಟೀಕೆ
ನನ್ನ ಸಹೋದರ, ಸಹೋದರಿಯರೇ, “ಜೀವನದಲ್ಲಿ ವಿಷಯಗಳು ಕಷ್ಟಕರವಾದಾಗ ಫೆಬ್ರವರಿ ೨೬, ಈ ದಿನವನ್ನು ನೆನಪಿಡಿ.” ಎಂಬ ಮನಕಲಕುವ ಈ ಮಾತನ್ನು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Khalistani; ಭಾರತದ ವಿರುದ್ಧ ಅಮೆರಿಕ ಕೋರ್ಟ್ಗೆ ಪನ್ನು ದೂರು
Jammu and Kashmir:ಕಲಂ 370 ಪುನರ್ ಜಾರಿ-ಕಾಂಗ್ರೆಸ್, ಎನ್ ಸಿ ನಿಲುವಿಗೆ ಪಾಕ್ ಬೆಂಬಲ!
Legal Bid: ಯುರೋಪಿನಲ್ಲಿ 13,000 ಕೋಟಿ ರೂ. ಕಾನೂನು ಸಮರ ಗೆದ್ದ ಗೂಗಲ್!
Explode in Lebanon: ಪೇಜರ್ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು
Israel: ಹೆಜ್ಬುಲ್ಲಾ ಬಳಸಿದ್ದ ಪೇಜರ್ಸ್ ಒಳಗೆ ಸ್ಫೋಟಕ ಅಳವಡಿಸಿದ್ದ ಇಸ್ರೇಲ್ ನ ಮೊಸ್ಸಾದ್!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.