ಅಕ್ರಮ ಶೆಡ್ ನಿರ್ಮಾಣ ಪ್ರಯತ್ನಕ್ಕೆ ತಹಶೀಲ್ದಾರ್‌ರಿಂದ ತಡೆ


Team Udayavani, Feb 26, 2022, 7:13 PM IST

ಅಕ್ರಮ ಶೆಡ್ ನಿರ್ಮಾಣ ಪ್ರಯತ್ನಕ್ಕೆ ತಹಶೀಲ್ದಾರ್‌ರಿಂದ ತಡೆ

ಸಾಗರ: ತಾಲೂಕಿನ ತ್ಯಾಗರ್ತಿ ಸಮೀಪದ ನಾಡಕಲಸಿ ಗ್ರಾಮದ ಸರ್ವೆ ನಂ. 133 ಮತ್ತು 134ರ ಸರ್ಕಾರಿ ಭೂಮಿ ಗೋಮಾಳ ಅತಿಕ್ರಮಣ ಮಾಡಿ ಮರಗಿಡಗಳನ್ನು ಕಡಿದು ಶೆಡ್ ನಿರ್ಮಾಣ ಮಾಡಲು ಆಗಮಿಸಿದ ಸಾಗರ ಪೇಟೆ ನಿವಾಸಿಗಳನ್ನು ನಾಡಕಲಸಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ವಿರೋಧಿಸಿ ಕಂದಾಯ ಇಲಾಖೆ ಅಧಿಕಾರಿಗಳ ನೆರವಿನಿಂದ ಶೆಡ್ ತೆರವುಗೊಳಿಸಿ ವಾಪಸ್ ಕಳಿಸಿದ ಘಟನೆ ಶನಿವಾರ ನಡೆದಿದೆ.

ಸಾಗರ ಪೇಟೆ ನಿವಾಸಿಗಳಾದ ಲಲಿತಮ್ಮ ಹೆಸರಿನಲ್ಲಿ 25 ವರ್ಷದ ಹಿಂದೆ ನಾಡಕಲಸಿ ಗ್ರಾಮದ ಸರ್ವೆ ನಂ 133 ರಲ್ಲಿ ನಾಲ್ಕು ಎಕರೆ ೩೮ ಗುಂಟೆ ಜಮೀನು ಬಗರ್ ಹುಕುಂನಲ್ಲಿ ಮಂಜೂರಾತಿ ಆಗಿತ್ತು ಎನ್ನಲಾಗಿದೆ. ಸಾಗುವಳಿ ಮಾಡದೆ ಇರುವ ದಟ್ಟ ಅರಣ್ಯ ಮರಗಿಡಗಳು ಇರುವ ಪ್ರದೇಶದಲ್ಲಿ ಗ್ರಾಮಸ್ಥರ ತೀವ್ರ ವಿರೋಧದಿಂದ ಉಪ ವಿಭಾಗಾಧಿಕಾರಿಗಳು ಮಂಜೂರಾತಿ ರದ್ದುಗೊಳಿಸಿ ಸರ್ಕಾರಿ ಕಾಯ್ದಿರಿಸಿದ ಭೂಮಿ ಎಂದು ಬೋರ್ಡ್ ಹಾಕಲಾಗಿತ್ತು. ಆದರೆ

ಶನಿವಾರ ಏಕಾಏಕಿ ಜನರ ಗುಂಪು ಕಟ್ಟಿಕೊಂಡು ಮರಗಳನ್ನು ಕಡಿಯಲು ತಯಾರಿ ನಡೆಸಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿ ಕಂದಾಯ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದರು.

ಸ್ಥಳಕ್ಕೆ ಆಗಮಿಸಿದ ಕಂದಾಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಗ್ರಾಮಸ್ಥರ ಸಮ್ಮುಖದಲ್ಲಿ ಶೆಡ್ ತೆರವುಗೊಳಿಸಿ ಅತಿಕ್ರಮ ಸಾಗುವಳಿ ಮಾಡುತ್ತಿರುವವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ

ಸಂದರ್ಭದಲ್ಲಿ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಲೋಕನಾಥ್ ಬಿಳಿಸಿರಿ ಮಾತನಾಡಿ, ಹಿಂದಿನ ಅಧಿಕಾರಿಗಳ ಸಮ್ಮುಖದಲ್ಲಿ ಆಗಿರುವ ತೀರ್ಮಾನದಂತೆ ಇದನ್ನು ಕಾಯ್ದಿರಿಸಿದ ಜಾಗ ಎಂದು ಸೂಚನಾ ಫಲಕ ಹಾಕಲಾಗಿದೆ. ಸ್ಮಶಾನಕ್ಕಾಗಿ ಕಾಯ್ದಿರಿಸಿದ ಜಾಗ ಇದಾಗಿದ್ದು ಇವರು ಬೇರೆ ಊರಿನಿಂದ ಗೂಂಡಾಗಳನ್ನು ಕರೆತಂದು ಅತಿಕ್ರಮ ಸಾಗುವಳಿ ಮಾಡಲು ಹುನ್ನಾರ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ಅತಿಕ್ರಮ ಸಾಗುವಳಿ ಮಾಡಲು ಬಿಡುವುದಿಲ್ಲ ಎಂದು ಹೇಳಿದರು

ತಹಶೀಲ್ದಾರ್ ಚಂದ್ರಶೇಖರ್ ನಾಯ್ಕ್ ಮಾತನಾಡಿ, ನಾಡಕಲಸಿ ಗ್ರಾಮದ ಸರ್ವೆ ನಂ ೧೩೩ರಲ್ಲಿ ಯಾವುದೇ ಸಾಗುವಳಿ ಇಲ್ಲ ಯಾರು ಒತ್ತುವರಿ ಮಾಡಿಕೊಂಡು ಸಾಗುವಳಿ ಮಾಡಲು ಪ್ರಯತ್ನಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ತಾಲೂಕಿನಲ್ಲಿ ಬಗರ್ ಹುಕುಂ ಹೆಸರಿನಲ್ಲಿ ಹೊಸ ಒತ್ತುವರಿ ಆಗುತ್ತಿದೆ. ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದರು

ಸಂದರ್ಭದಲ್ಲಿ ಭೂನ್ಯಾಯ ಮಂಡಳಿ ಸದಸ್ಯ ದೇವೇಂದ್ರಪ್ಪ ಎಲಕುಂದ್ಲಿ, ನಾಡಕಲಸಿ ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ ಬೊಮ್ಮತ್ತಿ,ಬಾಲಸುಂದರಗೌಡ, ನರೇಂದ್ರ ಮಳಲಿಕೊಪ್ಪ, ನಾರಾಯಣ, ಗ್ರಾಮ ಲೆಕ್ಕಿಗ ಪ್ರಕಾಶ್ ಸಿಂಗ್, ಅರಣ್ಯ ಇಲಾಖೆ ಅಧಿಕಾರಿ ಅಣ್ಣಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.