ಪ.ಜಾತಿ, ಪಂಗಡ ಅಭಿವೃದ್ಧಿಗೆ ಅನುದಾನ ನೀಡಲು ತಾರತಮ್ಯ


Team Udayavani, Feb 27, 2022, 4:10 PM IST

ಪ.ಜಾತಿ, ಪಂಗಡ ಅಭಿವೃದ್ಧಿಗೆ ಅನುದಾನ ನೀಡಲು ತಾರತಮ್ಯ

ಕುಣಿಗಲ್‌: ಪ.ಜಾತಿ, ಪಂಗಡದ ಸಮುದಾಯಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು ಅನುದಾನ ನೀಡುವಲ್ಲಿ ಬಿಜೆಪಿ ಸರ್ಕಾರ ತಾರತಮ್ಯಮಾಡುತ್ತಿದ್ದು, ಈ ಸಂಬಂಧ ಸದನದಲ್ಲಿ ಕಾಂಗ್ರೆಸ್‌ಪ್ರಶ್ನೆ ಮಾಡಲಿದೆ ಎಂದು ಶಾಸಕ ಡಾ. ಎಚ್‌.ಡಿ. ರಂಗನಾಥ್‌ ತಿಳಿಸಿದರು.

ಪಟ್ಟಣದ ಸಿದ್ದಾರ್ಥ ಕಾಲೋನಿಯಲ್ಲಿ ಲೋಕೋಪಯೋಗಿ ಇಲಾಖೆ ಹಮ್ಮಿಕೊಂಡಿದ್ದ ಎಸ್‌ಸಿಪಿ, ಟಿಎಸ್‌ಪಿ ಅನುದಾನದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಇದ್ದ ಅವಧಿಯಲ್ಲಿ ಸರ್ಕಾರ ವಾರ್ಷಿಕ ಅನುದಾನದಲ್ಲಿ ಶೇ 24.1 ಮೊತ್ತವನ್ನು (ಎಸ್‌ಸಿಪಿ, ಟಿಎಸ್‌ಸಿ) ಪರಿಶಿಷ್ಟ ಫಲಾನುಭವಿಗಳಿಗೆ ಮೀಸಲಿಡುವ ಹಾಗೂ ವೆಚ್ಚ ಮಾಡಲು ಕಡ್ಡಾಯಗೊಳಿಸಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಹಾಗೂ ಬುಡಕಟ್ಟು ಉಪಯೋಜನೆ ಅಧಿನಿಯಮವನ್ನು 2013ರಲ್ಲಿಜಾರಿಗೆ ತಂದು 25 ಸಾವಿರ ಕೋಟಿ ರೂ. ಹಣ ಮೀಸಲಿಟ್ಟಿತ್ತು ಎಂದರು.

ಎಸ್ಸಿ, ಎಸ್ಟಿ ಸಮುದಾಯಗಳಿಗೆ ಅಗತ್ಯಕ್ಕೆ ಅನುಗುಣ ವಾಗಿ ಸಾಕಷ್ಟು ಅನುದಾನವನ್ನು ನೀಡಿತ್ತು. ಆ ಸಮುದಾಯಗಳ ಕಾಲೋನಿಗಳಲ್ಲಿ ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಲಭ್ಯಗಳು ಕಲ್ಪಿಸಿತ್ತು. ಬಿಜೆಪಿ ಸರ್ಕಾರ ಬಂದ ಮೇಲೆ ತನ್ನ ವಾರ್ಷಿಕ ಬಜೆಟ್‌ನಲ್ಲಿ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಕಡಿತಗೊಳಿಸಿ ಪ.ಜಾತಿ, ಪಂಗಡದ ಸಮುದಾಯಗಳಿಗೆ ಅನ್ಯಾಯ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೋರಾಟದ ಎಚ್ಚರಿಕೆ: ಮಾರ್ಚ್‌ ತಿಂಗಳಲ್ಲಿ ನಡೆಯುವ ರಾಜ್ಯ ಸರ್ಕಾರದ ಆಯವ್ಯಯದಲ್ಲಿ ಪ.ಜಾತಿ, ಪಂಗಡಗಳ ಸಮುದಾಯಗಳ ಅಭಿವೃದ್ಧಿಗೆ 30 ಸಾವಿರ ಕೋಟಿ ರೂ. ಅನುದಾನ ಮೀಸಲಿಟ್ಟು ಆ ಸಮುದಾಯಗಳು ವಾಸಿಸುವ ಕಾಲೋನಿಗೆ ಅಗತ್ಯವಿರುವ ಅಭಿವೃದ್ಧಿ ಕಾಮಗಾರಿ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಸದನದೊಳಗೆಹಾಗೂ ಹೊರಗೆ ಕಾಂಗ್ರೆಸ್‌ ಪಕ್ಷ ಹೋರಾಟ ನಡೆಸಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕಾಮಗಾರಿಗೆ ಚಾಲನೆ: ತಾಲೂಕಿನ ರಾಗಿಹಳ್ಳಿ, ಬಸವನ ಮತ್ತಿಕೆರೆ, ನಾಗನಹಳ್ಳಿ ತಾಂಡ್ಯ, ಕಿಚ್ಚಾ ವಾಡಿ,ಹೆಗ್ಗಡತಿಹಳ್ಳಿ, ಚನ್ನತಿಮ್ಮನಪಾಳ್ಯ, ರಂಗಮ್ಮನ ಪಾಳ್ಯ,ಸೀಗೇಪಾಳ್ಯ, ಅಮೃತೂರು, ಅಣ್ಣಯ್ಯನ ಪಾಳ್ಯ,ಈಡಿಗರ ಪಾಳ್ಯ, ಪಲ್ಲೇರಾಯನಹಳ್ಳಿ, ರಾಜಪ್ಪನ ದೊಡ್ಡಿ, ಮುದ್ದಹನುಮನಪಾಳ್ಯ ಹಾಗೂ ಕುಣಿಗಲ್‌ಟೌನ್‌ ಸಿದ್ದಾರ್ಥ ಕಾಲೋನಿ, ಮಲ್ಲಾ ಘಟ್ಟ ದಲ್ಲಿ 2.19 ಕೋಟಿ ರೂ. ವೆಚ್ಚದ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ ನೀಡಲಾಯಿತು.

ಪುರಸಭಾ ಅಧ್ಯಕ್ಷ ರಂಗಸ್ವಾಮಿ, ಸದಸ್ಯ ಬಿ.ಎನ್‌. ಅರುಣ್‌ಕುಮಾರ್‌, ಮಲ್ಲಿ  ಪಾಳ್ಯ ಶ್ರೀನಿವಾಸ್‌, ದೇವರಾಜ್‌, ಲೋಕೋಪಯೋಗಿ ಇಲಾಖೆ ಎಇಇ ಗುರುಸಿದ್ದಪ್ಪ, ಎಇ ಗಿರಿ ಗೌಡ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಿ.ಎಲ್‌. ರಂಗಣ್ಣಗೌಡ, ಪ್ರಚಾರ ಸಮಿತಿ ಅಧ್ಯಕ್ಷ ಬೇಗೂರು ನಾರಾಯಣ್‌, ದಲಿತ ಮುಖಂಡ ವರದರಾಜು, ಚಲುವರಾಜು ಹಾಗೂ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

bjp-congress

BJP 4,340 ಕೋಟಿ ಆದಾಯ: 50% ವೆಚ್ಚ ; ಕಾಂಗ್ರೆಸ್‌ಗೆ 1,225 ಕೋಟಿ ರೂ.

supreem

Supreme Court; ಮಸೀದಿಯಡಿ ಮಂದಿರ ಹುಡುಕುವ ಅರ್ಜಿ ಸಾಕು,ನಿಲ್ಲಿಸಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಕಾರು ಪಲ್ಟಿ ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

Kunigal: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ.. ಮಹಿಳೆ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಾಯ

20

B.Y.Vijayendra: ನನಗೆ ನನ್ನ ತಂದೆಯೇ ರಾಜಕೀಯ ಗುರು; ಬಿ.ವೈ.ವಿಜಯೇಂದ್ರ 

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

Madhya Pradesh; ಎ.1ರಿಂದ ಕಡಿಮೆ ಅಲ್ಕೋಹಾಲ್‌ ಇರುವ ಬಾರ್‌ ಶುರು

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

ಸಿಎಸ್‌ಟಿ – ಮಂಗಳೂರು ಎಕ್ಸ್‌ಪ್ರೆಸ್‌ ರೈಲಲ್ಲಿ ಕಳವು ಪ್ರಕರಣ ಮತ್ತೆ ಕಾಪುವಿಗೆ ವರ್ಗಾವಣೆ

1-v-a

ಲಂಬವಾಗಿ ಟೇಕಾಫ್ ಆಗುವ ಏರ್‌ ಆ್ಯಂಬುಲೆನ್ಸ್‌ ಶೀಘ್ರ ಭಾರತದಲ್ಲಿ ಲಭ್ಯ

1-ioo

Ukraine ಯುದ್ಧ ಸ್ಥಗಿತಕ್ಕೆ ಇಂದು ರಷ್ಯಾ-ಅಮೆರಿಕ ಸಭೆ: ಏನಿದು ಮಾತುಕತೆ?

1-vk

BCCI ಕಟ್ಟಪ್ಪಣೆಯಿಂದ ಸಂದಿಗ್ಧ; ತನ್ನಿಷ್ಟದ ಆಹಾರಕ್ಕೆ ಕೊಹ್ಲಿ ಹೊಸ ಮಾರ್ಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.