ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ನಟ ನಿಖಿಲ್ ಕುಮಾರಸ್ವಾಮಿ ಕಾಲ್ನಡಿಗೆ


Team Udayavani, Feb 28, 2022, 8:53 PM IST

ತಾಳಬೆಟ್ಟದಿಂದ ಮಹದೇಶ್ವರ ಬೆಟ್ಟದವರೆಗೆ ನಟ ನಿಖಿಲ್ ಕುಮಾರಸ್ವಾಮಿ ಕಾಲ್ನಡಿಗೆ

ಹನೂರು : ಸ್ಯಾಂಡಲ್‍ವುಡ್ ನಟ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಾಳಬೆಟ್ಟದಿಂದ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದವರೆಗೆ ಪಾದಯಾತ್ರೆ ಕೈಗೊಂಡರು.

ಸೋಮವಾರ ಸಂಜೆ 5 ಗಂಟೆ ವೇಳೆಗೆ ತಾಳಬೆಟ್ಟಕ್ಕೆ ಆಗಮಿಸುದ ನಿಖಿಲ್ ತಾತ್ಕಾಲಿಕ ಶೆಡ್‍ಗಳಲ್ಲಿ ಭಕ್ತಾದಿಗಳಿಗೆ ವಿತರಿಸುತ್ತಿದ್ದ ಪ್ರಸಾದವನ್ನು ಸ್ವೀಕರಿಸಿ ಪ್ರಸಾದ ಸವಿದರು. ಬಳಿಕ ತಾಳಬೆಟ್ಟದ ಪ್ರವೇಶ ದ್ವಾರದಲ್ಲಿ ಮಲೆ ಮಾದಪ್ಪನಿಗೆ ನಮಿಸಿ ಧೂಪಸೇವೆ ಸಮರ್ಪಿಸಿ ಪಾದಯಾತ್ರೆಗೆ ಚಾಲನೆ ನೀಡಿದರು. ಈ ವೇಳೆ ನಿಖಿಲ್‍ರ ಪಾದಯಾತ್ರೆಗೆ ಮಳವಳ್ಳಿ ಶಾಸಕ ಅನ್ನದಾನಿ, ಟಿ.ನರಸೀಪುರ ಶಾಸಕ ಅಶ್ವಿನ್ ಕುಮಾರ್, ವಿಧಾನ ಪರಿಷತ್ ಸದಸ್ಯ ಮಂಜೇಗೌಡ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಹಾಗೂ ಜೆಡಿಎಸ್ ಪಕ್ಷದ ಕಾರ್ಯಕರ್ತರು ಮತ್ತು ನಿಖಿಲ್ ಅಭಿಮಾನಿಗಳು ಪಾದಯಾತ್ರೆಯಲ್ಲಿ ಹೆಜ್ಜೆಹಾಕಿದರು.

ನಮ್ಮದು ಶಿವಭಕ್ತರ ಕುಟುಂಬ: ತಾಳಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ಅವರು ಕೈಗೊಂಡಿರುವ ಪಾದಯಾತ್ರೆಗೂ, ನನ್ನ ಪಾದಯಾತ್ರೆಗೂ ಯಾವುದೇ ಕನೆಕ್ಷನ್‍ಯಿಲ್ಲ. ಅವರು ಹೊಳೆನರಸೀಪುರದಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದಾರೆ, ನಾನು ಇಲ್ಲಿಂದ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದೇನೆ. ನನ್ನ ತಾತನವರು, ಅಜ್ಜಿಯವರು, ತಂದೆ-ತಾಯಿಯರು ಇಡೀ ಕುಟುಂಬ ಶಿವಭಕ್ತರ ಕುಟುಂಬ. ಕಳೆದ 3-4 ದಿನಗಳಿಂದ ಲಕ್ಷಾಂತರ ಭಕ್ತಾದಿಗಳು ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿರುವುನ್ನು ನೋಡಿ ನನಗೂ ಹೋಗಬೇಕು ಅಂತ ಮನಸ್ಸಿಗೆ ಬಂತು, ಆದುದರಿಂದ ತೆರಳುತ್ತಿದ್ದೇನೆ. ಅದನ್ನು ಹೊರತುಪಡಿಸಿ ಬೇರೆ ಏನೂ ಇಲ್ಲ, ನಮ್ಮ ಪಾದಯಾತ್ರೆ ಶಿವನ ಭಕ್ತಿಯಿಂದ ನಡೆಯುತ್ತಿದೆಯೇ ಹೊರತು ಮೇಕೆದಾಟು ಪಾದಯಾತ್ರೆಗೆ ಠಕ್ಕರ್ ಕೊಡಲೂ ಅಲ್ಲ ಎಂದು ಸ್ಪಷ್ಟಪಡಿಸಿದರು.

ಮೇಕೆದಾಟು ಯೋಜನೆ ದೇವೇಗೌಡರ ದೂರದೃಷ್ಠಿಯದ್ದು: ಮೇಕೆದಾಟು ಯೋಜನೆ ನಮ್ಮ ತಾತನವರಾದ ದೇವೇಗೌಡರ ಕಾಲದ್ದು, ಅವರು ನೀರಾವರಿ ಮಂತ್ರಿಯಾಗಿದ್ದಾಗ ದೂರದೃಷ್ಠಿಯಿಂದ ಯೋಜನೆ ರೂಪಿಸಿದ್ದರು. ಈ ಯೋಜನೆಗೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು 2018ರಲ್ಲಿ ಮಉಖ್ಯಮಂತ್ರಿಯಾಗಿದ್ದಾಗ ಟಿಪಿಆರ್ ಹಂತದವರೆಗೆ ಕೊಂಡೊಯ್ದರು. ಮೇಕೆದಾಟು ಹೋರಾಟ ಮುಂದಿನ ಒಂದು ವರ್ಷದಲ್ಲಿ ಚುನಾವಣೆಯಿದೆ ಎಂದು ಚುನಾವಣಾ ಪ್ರಚಾರಕ್ಕೆ ಸೀಮಿತವಾಗಿರಬಾರದು. ನಾಡು, ನೆಲ, ಜಲ ವಿಷಯದಲ್ಲಿ ಯಾವುದೇ ರಾಜಕೀಯ ಪಕ್ಷ ನಿಂತಲ್ಲಿ ಅದರ ಬೆಂಬಲಕ್ಕೆ ನಿಲ್ಲುತ್ತೇವೆ. ಅದರಲ್ಲಿ ಯಾವುದೇ ತಕರಾರಿಲ್ಲ ಎಂದು ತಿಳಿಸಿದರು.

ಇದನ್ನೂ ಓದಿ : ಹಿಟ್ನೆಹೆಬ್ಬಾಗಿಲು ಗ್ರಾ.ಪಂ.ನ ನೂತನ ಅಧ್ಯಕ್ಷರಾಗಿ ಛಾಯಾ ಮಹದೇವ್ ಅವಿರೋಧ ಆಯ್ಕೆ

ಹನೂರಿನಲ್ಲೂ ಅದ್ದೂರಿ ಸ್ವಾಗತ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಳ್ಳಲು ತೆರಳುತ್ತಿದ್ದ ನಿಖಿಲ್ ಅವರಿಗೆ ಹನೂರು ಪಟ್ಟಣದಲ್ಲಿಯೂ ಅದ್ದೂರಿ ಸ್ವಾಗತ ಕೋರಲಾಯಿತು. ನಿಖಿಲ್ ಹನೂರು ಪಟ್ಟಣಕ್ಕೆ ಆಗಮಿಸುತ್ತಿದ್ದಂತೆ ಮುಖ್ಯವೃತ್ತದಲ್ಲಿ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಜೈಕಾರಗಳನ್ನು ಮೊಳಗಿಸಿ ಪುಚ್ಪಮಾಲಿಕೆ ಹಾಕಿ ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಖಾಸಗಿ ಬಸ್ ನಿಲ್ದಾಣದವರೆಗೆ ನಡೆದುಬಂದು ಅಲ್ಲಿದ್ದ ಅಭಿಮಾನಿಗಳಿಗೆ ಕೈಬೀಸಿ ನಮಸ್ಕರಿಸಿದರು. ಈ ವೇಳೆ ಖಾಸಗಿ ಬದ್ ನಿಲ್ದಾಣದಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಪುಷ್ಪಮಾಲಿಕೆ ಹಾಕಿ ಅಭಿನಂಧಿಸಿದರು.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.