ಕೃಷ್ಣೆ ರಾಷ್ಟ್ರೀಯ ಯೋಜನೆಯಾಗಲಿ: ರೈತರ ಒತ್ತಾಯ


Team Udayavani, Mar 1, 2022, 5:28 PM IST

28farmers

ವಿಜಯಪುರ: ರಾಜ್ಯ ಸರ್ಕಾರ ಬರುವ ಬಜೆಟ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಈ ವೇಳೆ ಮಾತನಾಡಿದ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಆಲಮಟ್ಟಿಯ ಲಾಲ್‌ ಬಹಾದ್ದೂರ್‌ ಶಾಸ್ತ್ರಿ ಜಲಾಶಯದ ನೀರಿನ ಮಟ್ಟವನ್ನು 524.256 ಮೀ. ನೀರು ನಿಲ್ಲಿಸಲು ಶೀಘ್ರದಲ್ಲಿ ಗೇಟ್‌ ಅಳವಡಿಸಬೇಕು. ಇದರಿಂದ ಹಿನ್ನೀರಿನಲ್ಲಿ 22 ಹಳ್ಳಿಗಳು ಮುಳುಗಡೆಯಾಗಲಿವೆ. 1 .20 ಲಕ್ಷ ಎಕರೆ ಜಮೀನು ಮುಳುಗಡೆ ಆಗುತ್ತವೆ. ಸಂತ್ರಸ್ತ ಹಳ್ಳಿಗಳಿಗೆ ತುರ್ತಾಗಿ ಪುನರ್ವಸತಿ-ಪುನರ್‌ ನಿರ್ಮಾಣಕ್ಕೆ ಬೇಕಿರುವ 1 ಲಕ್ಷ ಕೋಟಿ ಹಣ ಬೇಕಾಗುತ್ತದೆ ಎಂದು ವಿವರಿಸಿದರು.

ರಾಜ್ಯ ಸರ್ಕಾರದಿಂದ ಈ ಮೊತ್ತದ ಹಣ ನೀಡಲು ಸಾಧ್ಯವಿಲ್ಲದ ಕಾರಣ ಕೂಡಲೇ ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಬೇಕು. ಇದಕ್ಕಾಗಿ ರಾಜ್ಯ ಸರ್ಕಾರ ಮಾ. 4ರಂದು ಮಂಡಿಸಲಿರುವ ಬಜೆಟ್‌ನಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡುವ ನಿರ್ಧಾರ ಪ್ರಕಟಿಸಬೇಕು ಎಂದು ಆಗ್ರಹಿಸಿದರು.

ಸಂಘಟನೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸದಾಶಿವ ಬರಟಗಿ ಮಾತನಾಡಿ, ರೈತರು ಜಮೀನುಗಳಿಗೆ ಹೋಗುವ ವಹಿವಾಟು ದಾರಿ ಸಮಸ್ಯೆ ಹಳ್ಳಿಗಳಲ್ಲಿ ತಾರಕಕ್ಕೇರಿದೆ. ಇದರಿಂದ ಕೃಷಿ ಚಟವಟಿಕೆ ನಡೆಸಲು ರೈತರ ಮಧ್ಯ ಹೊಡೆದಾಟ ನಡೆಯುತ್ತಿವೆ. ಸರ್ಕಾರ ಕೂಡಲೇ ದಾರಿ ಸಮಸ್ಯೆ ಇತ್ಯರ್ಥಕ್ಕೆ ಕಾನೂನು ತಿದ್ದುಪಡಿ ಮಾಡಿ ತಹಶೀಲ್ದಾರ್‌ಗಳಿಗೆ ಅಧಿಕಾರ ನೀಡಬೇಕು ಎಂದು ಆಗ್ರಹಿಸಿದರು.

ರೈತರು ಜಮೀನು ದಾರಿ ಸಮಸ್ಯೆ ಇತ್ಯರ್ಥಕ್ಕೆ ಆಗ್ರಹಿಸಿ ಕಳೆದ 7 ವರ್ಷಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ. ದಾರಿ ಸಮಸ್ಯೆ ಪರಿಹಾರವಾಗಿ ಕಾನೂನು ತಿದ್ದುಪಡಿಗೆ ಸರ್ಕಾರಕ್ಕೆ ಇರುವ ಸಮಸ್ಯೆಯಾದರೂ ಏನು ಎಂದು ಪ್ರಶ್ನಿಸಿರುವ ಅವರು, ಜನಪ್ರತಿನಿಧಿಗಳು ತಮಗೆ ಬೇಕಾದ ವಿಷಯಗಳಲ್ಲಿ ಕಾನೂನಿನ ತೊಡಕುಗಳು ಎಷ್ಟೇ ಇದ್ದರೂ ತಮ್ಮ ಅನುಕೂಲಕ್ಕೆ ತಕ್ಕಂತೆ ಕಾನೂನು ತಿದ್ದುಪಡಿ ಮಾಡಿಕೊಳ್ಳುತ್ತಾರೆ. ಆದರೆ ರೈತರು ಜಮೀನಿನ ದಾರಿ ಸಮಸ್ಯೆ ಇತ್ಯರ್ಥಕ್ಕೆ ಮಾತ್ರ ಕಾನೂನಿನ ನೆಪ ಹೇಳುತ್ತಿದ್ದಾರೆ. ಹೀಗಾಗಿ ಬರುವ ಬಜೆಟ್‌ನಲ್ಲಿ ಜಮೀನಿನ ದಾರಿ ಸಮಸ್ಯೆ ಕಾನೂನು ತಿದ್ದುಪಡಿಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಅಖಂಡ ಕರ್ನಾಟಕ ರೈತ ಸಂಘದ ಹೊನಕೇರಪ್ಪ ತೆಲಗಿ, ಬಸವರಾಜ ಜಂಗಮಶೆಟ್ಟಿ, ನಂದುಗೌಡ ಬಿರಾದಾರ, ಮಲ್ಲು ಕನ್ನೂರ, ಸಂಗಪ್ಪ ಕಾಗಿ, ಗುರು ಸಾನ್ನಿಂಗಿಗೋಳ, ಬಸವರಾಜ ಉಪ್ಪಾರ, ಅರ್ಜುನ ಹಾವಗೊಂಡ, ಸಿದ್ದಪ್ಪ ಕಲಬೀಳಗಿ, ಸಂಗಪ್ಪ ಮಂಡಗನೂರ, ಶೇಖಪ್ಪ ಕರಾಬಿ, ಅಶೋಕ ಕಟ್ಟಿ, ಮಾನಪ್ಪ ಬಡಿಗೇರ (ಕರನಾಳ) ಸೇರಿದಂತೆ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Producer K Manju Teams Up With Director Smile Sreenu

Sandalwood: ಸ್ಮೈಲ್‌ ಶ್ರೀನು ಚಿತ್ರಕ್ಕೆ ಕೆ.ಮಂಜು ಸಾಥ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.