ನಂತೂರು ಫ್ಲೈ ಓವರ್ ; ಚಿಗುರಿದ ಅನುಷ್ಠಾನದ ಆಶಾವಾದ!
Team Udayavani, Mar 2, 2022, 12:01 PM IST
ನಂತೂರು : ಬಹುನಿರೀಕ್ಷಿತ ನಂತೂರು ಫ್ಲೈಓವರ್ ನಿರ್ಮಾಣಕ್ಕೆ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಅವರು ಸೋಮ ವಾರ ಮಂಗಳೂರಿನ ಕಾರ್ಯಕ್ರ ಮದ ವೇದಿಕೆಯಲ್ಲಿಯೇ ಅನುಮತಿ ನೀಡಿರುವ ಹಿನ್ನೆ ಲೆಯಲ್ಲಿ ನಗರದ ಬಹು ಕಾಲದ ನಿರೀಕ್ಷೆ ಅನುಷ್ಠಾನದ ಆಶಾವಾದ ಮೂಡಿಸಿದೆ.
ನಂತೂರು ವೃತ್ತ ರಾಷ್ಟ್ರೀಯ ಹೆದ್ದಾರಿ 66, ರಾಷ್ಟ್ರೀಯ ಹೆದ್ದಾರಿ 75 ಹಾಗೂ ರಾಷ್ಟ್ರೀಯ ಹೆದ್ದಾರಿ 169 ಸಂಪರ್ಕ ಹೊಂದಿರುವ ಪ್ರಮುಖ ವೃತ್ತ. ಸಂಚಾರ ದಟ್ಟಣೆಯ ಸ್ಥಿತಿ ಹಾಗೂ ಸಾರ್ವಜನಿಕರ ಬೇಡಿಕೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿ ಅಂಡರ್ಪಾಸ್ ನಿರ್ಮಾಣ ಪ್ರಸ್ತಾವನೆ ಹಲವು ವರ್ಷಗಳ ಹಿಂದೆ ಸಿದ್ದಪಡಿಸಿತ್ತು. ಪಾದುವ ಶಾಲೆಯ ಬಳಿಯಿಂದ ತಾರೆತೋಟ ಬಳಿಯ ಸಂದೇಶ ಲಲಿತಾ ಕಲಾ ವಿದ್ಯಾಲಯದ ಸಮೀಪ ದವರೆಗೆ ಅಂಡರ್ಪಾಸ್ ನಿರ್ಮಾಣಕ್ಕೆ ನಿರ್ಧರಿಸಲಾಯಿತು. ಆದರೆ, ಬಳಿಕ ಇದ ರಲ್ಲಿ ಕೆಲವು ಬದಲಾವಣೆಗಳಾಗಿ ಕೊನೆಗೆ ಫ್ಲೈಓವರ್ ಪ್ರಸ್ತಾವನೆ ರೂಪಿಸಲಾಗಿತ್ತು.
ಕೆಪಿಟಿ ಫ್ಲೈಓವರ್ ಶೀಘ್ರ ಆರಂಭ ನಿರೀಕ್ಷೆ
ರಾಷ್ಟ್ರೀಯ ಹೆದ್ದಾರಿ 66ರ ಮಂಗಳೂರಿನ ಕೆಪಿಟಿ ಜಂಕ್ಷನ್ ಬಳಿ ನೂತನವಾಗಿ ಫ್ಲೈಓವರ್ ನಿರ್ಮಾಣಕ್ಕೆ ಸಚಿವ ನಿತಿನ್ ಗಡ್ಕರಿ ಅವರು ಶಿಲಾನ್ಯಾಸ ನಡೆಸಿರುವ ಹಿನ್ನೆಲೆಯಲ್ಲಿ ಕೆಲವೇ ದಿನದಲ್ಲಿ ಇಲ್ಲಿ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ. ಅಂದಾಜು 34.60 ಕೋ.ರೂ. ವೆಚ್ಚದಲ್ಲಿ ಈ ಯೋಜನೆ ನಗರ ವ್ಯಾಪ್ತಿಯಲ್ಲಿ ಜಾರಿಯಾಗಲಿದೆ. ಕೆಪಿಟಿ ಪ್ರದೇಶದಲ್ಲಿ ವಾಹನ ದಟ್ಟಣೆ ಅಧಿಕವಿರುವ ಕಾರಣ ಸಂಚಾರ ಸಮಸ್ಯೆ ಎದುರಾಗುತ್ತಿದೆ. ಇಲ್ಲಿ ಹೆದ್ದಾರಿಗೆ ಮಂಗಳೂರು ಏರ್ಪೊರ್ಟ್ ರಸ್ತೆಯಿಂದ ನಗರ ಪ್ರವೇಶ ರಸ್ತೆಯ ಸಂಪರ್ಕದಿಂದಾಗಿ ವಾಹನ ದಟ್ಟಣೆ ನಿತ್ಯ ಅಧಿಕವಾಗುತ್ತಿದೆ. ಹೀಗಾಗಿ ಪರ್ಯಾಯ ರಸ್ತೆ ವ್ಯವಸ್ಥೆಯ ಬಗ್ಗೆ ಸ್ಥಳೀಯವಾಗಿ ಆಗ್ರಹ ವ್ಯಕ್ತವಾಗಿತ್ತು. ಇದರಂತೆ ಇದೀಗ ಫ್ಲೈಓವರ್ ನಿರ್ಮಾಣಕ್ಕೆ ಪ್ರಾಧಿಕಾರವು ನಿರ್ಧರಿಸಿದೆ.
ಸ್ಥಳದಲ್ಲೇ ಅನುಮೋದನೆ
ನಂತೂರಿನಲ್ಲಿ ರಾ. ಹೆದ್ದಾರಿ 66ರಲ್ಲಿ ಫ್ಲೈಓವರ್ ನಿರ್ಮಾಣ ಯೋಜನೆಗೆ ಸ್ಥಳ ದಲ್ಲಿಯೇ ಅನುಮೋದನೆ ನೀಡ ಲಾಗಿದೆ.-ನಿತಿನ್ ಗಡ್ಕರಿ,
ಕೇಂದ್ರ ಭೂಸಾರಿಗೆ- ಹೆದ್ದಾರಿ ಖಾತೆ ಸಚಿವರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Thumbe: ಅಗೆದಲ್ಲಿ ಕಡೆಗೂ ಡಾಮರು
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Surrender Arms: ಶಸ್ತ್ರಾಸ್ತ್ರ ತ್ಯಜಿಸಿ ಕೂಡಲೇ ಶರಣಾಗಿ… ನಕ್ಸಲರಿಗೆ ಅಮಿತ್ ಶಾ ಮನವಿ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.