
ಬೆಳೆ ರಕ್ಷಣೆಗೆ ಹಾಕಿದ್ದ ತಂತಿಗೆ ಸಿಲುಕಿ ಒದ್ದಾಡಿದ ಚಿರತೆ : ಅರಣ್ಯ ಅಧಿಕಾರಿಗಳಿಂದ ರಕ್ಷಣೆ
Team Udayavani, Mar 2, 2022, 8:32 PM IST

ಶಿರಸಿ: ಜಾನ್ಮನೆ ವಲಯ ಅರಣ್ಯ ವ್ಯಾಪ್ತಿಯ ಶಿರಗುಣಿಯಲ್ಲಿ ಬೆಳೆ ರಕ್ಷಣೆಗೆ ಹಾಕಿದ್ದ ತಂತಿಗೆ ಸಿಲುಕಿದ ಚಿರತೆಯನ್ನು ಅರಣ್ಯ ಇಲಾಖೆಯ ಅಧಿಕಾರಿ, ಸಿಬಂದಿಗಳು ವೈದ್ಯರ ನೆರವಿನಿಂದ ರಕ್ಷಿಸಿ ಉಪಚರಿಸಿದ ಘಟನೆ ಬುಧವಾರ ನಡೆದಿದೆ.
ಬುಧವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಇಂಥದೊಂದು ಘಟನೆ ಅರಣ್ಯ ಅಧಿಕಾರಿಗಳ ಗಮನಕ್ಕೆ ಬಂದಿದ್ದು, ತಕ್ಷಣ ಶಿವಮೊಗ್ಗದ ವನ್ಯಜೀವಿ ವೈದ್ಯ ಡಾ. ವಿನಯ ಅವರಿಗೆ ಮಾಹಿತಿ ತಲುಪಿಸಲಾಯಿತು. ಅವರು ಶಿರಗುಣಿಗೆ ಬಂದ ಬಳಿಕ ಸುಮಾರು ಎರಡು ಗಂಟೆಗಳ ಕಾರ್ಯಾಚರಣೆ ನಡೆಸಿ ಚಿರತೆ ರಕ್ಷಿಸಲಾಗಿದೆ. ಡಿಎಫ್ಓ ಎಸ್.ಜಿ.ಹೆಗಡೆ, ಆರೆಪ್ಪೋ ಪವಿತ್ರ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.
ಸಂಜೆ ಕಂಚಿಕೈನಲ್ಲಿ ಚಿರತೆಗೆ ಉಪಚಾರ ಮಾಡಲಾಗಿದ್ದು, ಚಿಕಿತ್ಸಾ ಪರಿಣಾಮದ ಕಾಲಾವಧಿಯಲ್ಲಿ ಇಡಲಾಗಿದೆ. ಚೇತರಿಕೆ ಇದ್ದು, ಗುಣಮುಖ ಎನಿಸಿದರೆ ಅರಣ್ಯಕ್ಕೆ ಅಥವಾ ಶಿವಮೊಗ್ಗದ ಮೃಗಾಲಯಕ್ಕೆ ಬಿಡಲಾಗುತ್ತದೆ. ಯಾವುದಕ್ಕೂ ವೈದ್ಯರ ಸಲಹೆ ಪಡೆದು ಕ್ರಮ ಕೈಗೊಳ್ಳುವದಾಗಿ ಉದಯವಾಣಿಗೆ ಉಪಅರಣ್ಯಸಂರಕ್ಷಣಾಧಿಕಾರಿ ಎಸ್.ಜಿ.ಹೆಗಡೆ ತಿಳಸಿದ್ದಾರೆ.
ಇದನ್ನೂ ಓದಿ : ಕಂದಾಯ ಇಲಾಖೆಯಲ್ಲಿ ಬಾಕಿ ಉಳಿದಿರುವ ಕಡತಗಳಿಗೆ ಮುಕ್ತಿ : ಆರ್ ಅಶೋಕ್
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.