ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ ತುಂಬಿದ ಸಚಿವ ಭಗವಂತ್ ಖೂಬಾ
Team Udayavani, Mar 3, 2022, 3:34 PM IST
ನವದೆಹಲಿ\ಬೆಂಗಳೂರು: ಉಕ್ರೇನ್ ನಲ್ಲಿ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕೇಂದ್ರದ ರಾಜ್ಯ ರಾಸಾಯನಿಕ ಖಾತೆ ಸಚಿವ ಭಗವಂತ್ ಖೂಬಾ ನವದೆಹಲಿಯ ಐಜಿಐ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡು ವಿದ್ಯಾರ್ಥಿಗಳಿಗೆ ಮನೋಸ್ಥೈರ್ಯ ತುಂಬಿದರು.
ವಿಮಾನದಲ್ಲಿದ್ದ ವಿದ್ಯಾರ್ಥಿಗಳನ್ನು ಹೂಗುಚ್ಛ ನೀಡಿ ಬರಮಾಡಿಕೊಂಡ ಭಗವಂತ್ ಖೂಬಾ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಆಪರೇಷನ್ ಗಂಗಾ ಅಡಿಯಲ್ಲಿ ಸಾವಿರಾರು ನಾಗರಿಕರನ್ನು ದೇಶಕ್ಕೆ ಕರೆತರಲಾಗಿದೆ. ಸಂಕಷ್ಟದಲ್ಲಿರುವ ಭಾರತೀಯರನ್ನು ವೇಗವಾಗಿ ರಕ್ಷಿಸಲು ನಮ್ಮ ಸೇನೆ ಮತ್ತು ವಾಯುಪಡೆಯನ್ನೂ ನಿಯೋಜಿಸಲಾಗಿದೆ. ಭಾರತ ಸರ್ಕಾರವು ತನ್ನ ನಾಗರಿಕರ ಸುರಕ್ಷಿತ ವಾಪಸಾತಿಗೆ ಸಿಗುವ ಯಾವುದೇ ಅವಕಾಶವನ್ನು ಬಿಡುವುದಿಲ್ಲ. ಪ್ರಧಾನಿ ಮೋದಿಯವರು ಸಚಿವರಿಗೆ ಜವಾಬ್ದಾರಿ ನೀಡಿದ್ದು, ಎಲ್ಲಾ ಸಚಿವರು ತಮ್ಮ ತಮ್ಮ ಜವಾಬ್ದಾರಿಯನ್ನು ಶಿರಸಾವಹಿಸಿ ಪಾಲಿಸುತ್ತಿದ್ದಾರೆ. ಉಕ್ರೇನ್ನಿಂದ ಸುರಕ್ಷಿತವಾಗಿ ವಿದ್ಯಾರ್ಥಿಗಳನ್ನು ತಾಯ್ನಾಡಿಗೆ ಸ್ಥಳಾಂತರಿಸಲಾಗಿದೆ. ಯುದ್ಧ ಕಲಹದ ದೇಶದಿಂದ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿಸಿ ಮೋದಿಜಿ ಸಾಧ್ಯವಾಗಿಸಿದ್ದಾರೆ. ಯುವ ವಿದ್ಯಾರ್ಥಿಯೊಬ್ಬ ಈ ವೇಳೆ ವಿಮಾನದಲ್ಲಿ ತಾಯ್ನಾಡಿಗೆ ಸುರಕ್ಷಿತವಾಗಿ ಮರಳಿದ್ದಕ್ಕೆ ಸಂತೋಷದಿಂದ ಕಣ್ಣೀರು ಹಾಕಿದ್ದು, ಆ ಆನಂದಭಾಷ್ಪ ನನ್ನ ಕಣ್ಣುಗಳನ್ನು ಸಹ ತೇವವಾಗಿಸಿದವು ಎಂದು ಖೂಬಾ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲು
CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ
J&K ಸಂಸದ ಇಂಜಿನಿಯರ್ ರಶೀದ್ ಗೆ ಕೈಕೊಟ್ಟು ಎನ್ ಸಿ ಸೇರಿದ ಅಭ್ಯರ್ಥಿ!
Modi 100 days; ಮುಂದಿನ 1000 ವರ್ಷಗಳ ಅಭಿವೃದ್ಧಿಗೆ ತಳಹದಿ ಸಿದ್ಧಪಡಿಸಲಾಗುತ್ತಿದೆ
J-K ಉಗ್ರವಾದ ಯಾರೂ ಪುನರುಜ್ಜೀವನಗೊಳಿಸುವ ಧೈರ್ಯ ತೋರದಂತೆ ಸಮಾಧಿ: ಶಾ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.