ಬಾಂಬ್‌, ಶೆಲ್‌ ದಾಳಿ ನಡುವೆಯೂ ನಿಲ್ಲದ ನಡಿಗೆ


Team Udayavani, Mar 4, 2022, 7:30 AM IST

ಬಾಂಬ್‌, ಶೆಲ್‌ ದಾಳಿ ನಡುವೆಯೂ ನಿಲ್ಲದ ನಡಿಗೆ

ಸಾಂದರ್ಭಿಕ ಚಿತ್ರ

ಉಕ್ರೇನ್‌ವಿವಿಧ ನಗರಗಳಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತವರಿಗೆ ಕರೆತರುವ ನಿಟ್ಟಿನಲ್ಲಿ ಸರಕಾರ ತುರ್ತು ಕ್ರಮಗಳನ್ನು ಕೈಗೊಂಡಿದೆ. ಗುರುವಾರ ನೂರಾರು ವಿದ್ಯಾರ್ಥಿಗಳು ರಾಜ್ಯಕ್ಕೆ ಆಗಮಿಸಿ, ಪೋಷಕರ ಮಡಿಲು ಸೇರಿದ್ದಾರೆ. ಯುದ್ಧಪೀಡಿತ ನೆಲದಲ್ಲಿ ಪ್ರತೀಕ್ಷಣ ಆತಂಕದಲ್ಲೇ ದಿನದೂಡುತ್ತಿರುವ ರಾಜ್ಯದ ವಿದ್ಯಾರ್ಥಿಗಳು ನೆರವಿಗಾಗಿ ಕಾಯುತ್ತಿದ್ದಾರೆ. ಸುರಕ್ಷಿತ ತಾಣ ತಲುಪಲು ಕಿಲೋಮೀಟರ್‌ಗಟ್ಟಲೆ ನಡೆದು ಹೈರಾಣಾಗಿದ್ದಾರೆ.

12 ಕಿ.ಮೀ. ಓಡಿ ಹಾಸ್ಟೆಲ್‌ ಸೇರಿದ ಭಾರತೀಯ ವಿದ್ಯಾರ್ಥಿಗಳು! :

ಬೆಂಗಳೂರು: ಉಕ್ರೇನ್‌ ಮತ್ತು ರಷ್ಯಾ ಯುದ್ಧ ನಡೆಯು ತ್ತಿರುವ ಖಾರ್ಕಿವ್‌ನಿಂದ ಕೇವಲ ಮೂರು ಕಿ.ಮೀ. ದೂರದ ಪಿಸೋ ಚಿನ್‌ ಪ್ರದೇಶದಲ್ಲಿ ಹಾಸ್ಟೆಲ್‌ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ. ಆದರೆ ಇಲ್ಲಿ ಯಾವ ರೀತಿಯ ಸುರಕ್ಷತೆಯೂ ಇಲ್ಲ ಎಂದು ಉಕ್ರೇನ್‌ನಲ್ಲಿರುವ ಚಿಕ್ಕ ಬಳ್ಳಾಪುರದ ವಿದ್ಯಾರ್ಥಿನಿ ಹರ್ಷಿತಾ ಆತಂಕ ವ್ಯಕ್ತಪಡಿಸಿದ್ದಾರೆ.

ಐದು ದಿನಗಳ ಕಾಲ ಬಂಕರ್‌ನಲ್ಲಿದ್ದ ಹರ್ಷಿತಾ ಅವರು ಪಿಸೋ ಚಿನ್‌ ತಲುಪಲು ಕೇವಲ ಆರು ಗಂಟೆಗಳ ಅವಧಿ ನೀಡಲಾಗಿತ್ತು. ರೈಲು ನಿಲ್ದಾಣಕ್ಕೆ ಹೋಗುವ ದಾರಿ ಯಲ್ಲಿಯೇ ನಾಲ್ಕು ಮಿಸೈಲ್‌ ಆಕ್ರಮಣ ನಡೆದು ಕಟ್ಟಡಗಳು, ಟ್ಯಾಂಕರ್‌ಗಳು ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದವು. ಇದ್ಯಾವುದರ ಕಡೆ ಗಮನ ಕೊಡದೇ, ಸುಮಾರು ಒಂದು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು 12 ಕಿ.ಮೀ. ಜೀವ ಕೈಯಲ್ಲಿಟ್ಟುಕೊಂಡು ಓಡಿ ಬಂದಿದ್ದೇವೆ. ರೈಲು, ಮೆಟ್ರೋ ಗಳಲ್ಲಿ ಉಕ್ರೇನ್‌ ನಾಗರಿಕರಿಗೆ ಮೊದಲ ಆದ್ಯತೆ ನೀಡುತ್ತಿದ್ದಾರೆ. ನಮ್ಮನ್ನು ಉಕ್ರೇನಿನ ಸೈನಿಕರು ಹೊಡೆದು ಕೆಳಗಿಳಿಸುತ್ತಿದ್ದಾರೆ. ಎಂದರು.

ಸಿಗ್ನಲ್‌ ಹೆಚ್ಚಿದ್ದಲ್ಲಿ ದಾಳಿ :

ಒಂದು ಪ್ರದೇಶದಿಂದ ಮತ್ತೂಂದು ಪ್ರದೇಶಕ್ಕೆ ತೆರಳಬೇಕಾದರೆ ಎಲ್ಲ ವಿದ್ಯಾರ್ಥಿಗಳು ತಮ್ಮ ಮೊಬೈಲ್‌ನ ಇಂಟರ್ನೆಟ್‌, ಜಿಯೋ ಲೊಕೇಶನ್‌ ಅನ್ನು ಆಫ್ ಮಾಡಿಕೊಂಡು ಹೋಗುತ್ತೇವೆ. ಏಕೆಂದರೆ, ಹೆಚ್ಚು ಸಿಗ್ನಲ್‌ ಇರುವ ಕಡೆ ದಾಳಿ ಮಾಡುತ್ತಿದ್ದಾರೆ. ಆದ್ದರಿಂದ ಮೊಬೈಲ್‌ ಸ್ವಿಚ್‌ ಆಫ್ ಮಾಡಿಕೊಳ್ಳುತ್ತೇವೆ.

ಕತ್ತಲೆಯಲ್ಲೆ ದಿನ :

ಹಾಸ್ಟೆಲ್‌ನ ದೀಪ ಆರಿಸಿ ಕೊಂಡು ಇರುವಂತೆ ತಿಳಿಸಿದಂತೆ ಹಾಗೆಯೇ ದಿನ ಕಳೆಯುತ್ತಿದ್ದೇವೆ ಎಂದರು.

ಉಕ್ರೇನ್‌ನಲ್ಲಿ ಸಿಲುಕಿರುವರ ಜತೆ ಸಿಎಂ ಮಾತುಕತೆ :

ಬೆಂಗಳೂರು: ಉಕ್ರೇನ್‌ನಲ್ಲಿ ಸಂಕಷ್ಟಕ್ಕೆ ಸಿಲುಕಿದ ವೈದ್ಯಕೀಯ ವಿದ್ಯಾರ್ಥಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ದೂರವಾಣಿ ಮೂಲಕ ಮಾತನಾಡಿದರು. ಖಾರ್ಕಿವ್‌ನಿಂದ 30 ಕಿ.ಮೀ. ದೂರದ ಪ್ರದೇಶಕ್ಕೆ ನಾವು ನಡೆದುಕೊಂಡು ಬಂದಿದ್ದೇವೆ. ಸದ್ಯ ಸುರಕ್ಷಿತವಾಗಿದ್ದೇವೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಗೆ ತಿಳಿಸಿದರು.

ವಿದ್ಯಾರ್ಥಿಗಳಿಗೆ ಧೈರ್ಯ ಹೇಳಿದ ಮುಖ್ಯಮಂತ್ರಿಗಳು, ಈ ಸಂಬಂಧ ವಿದೇಶಾಂಗ ಸಚಿವಾಲಯದ ಅಧಿ ಕಾರಿಗಳ ಜತೆ ನಮ್ಮ ಸರಕಾರ ನಿರಂತರ ಸಂಪರ್ಕದಲ್ಲಿದೆ. ನಿಮಗೆ ಎಲ್ಲ ರೀತಿಯ ಸಹಕಾರ ಸಿಗುವ ನಿಟ್ಟಿನಲ್ಲಿ ಪ್ರಯತ್ನ ನಡೆದಿದೆ. ನಿಮ್ಮನ್ನು ಅಲ್ಲಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ವ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ರಾಜ್ಯದ 200 ಮಂದಿ ಖಾರ್ಕಿವ್‌ನಲ್ಲಿ ಇದ್ದಾರೆ  :

ಅಂದಾಜು ರಾಜ್ಯದ 200 ವಿದ್ಯಾರ್ಥಿಗಳು ಖಾರ್ಕಿವ್‌ನಲ್ಲಿ ಬಾಕಿಯಾಗಿದ್ದಾರೆ. ಮಾತುಕತೆ ಸಂದರ್ಭ ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರು ಮುಖ್ಯಮಂತ್ರಿ ಜತೆಗಿದ್ದರು.

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

Hindalga Jail: Inmate assaulted by four undertrials

Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.