ಎರಡು ದಿನಗಳಲ್ಲಿ 7,400 ಮಂದಿ ವಾಪಸ್‌


Team Udayavani, Mar 4, 2022, 7:40 AM IST

ಎರಡು ದಿನಗಳಲ್ಲಿ 7,400 ಮಂದಿ ವಾಪಸ್‌

ಹೊಸದಿಲ್ಲಿ/ಕೀವ್‌: ಮುಂದಿನ 2 ದಿನಗಳಲ್ಲಿ 7400 ಭಾರತೀಯರನ್ನು ಯುದ್ಧಪೀಡಿತ ಉಕ್ರೇನ್‌ನಿಂದ ಕರೆತರುವುದಾಗಿ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಅಂದರೆ, ಶುಕ್ರವಾರ 3,500 ಮಂದಿ, ಶನಿವಾರ 3,900 ಮಂದಿ ಭಾರತಕ್ಕೆ ವಾಪಸ್‌ ಬರಲಿದ್ದಾರೆ ಎಂದಿದೆ.

ಯುದ್ಧಗ್ರಸ್ಥ ಉಕ್ರೇನ್‌ನಿಂದ ವಿವಿಧ ರೀತಿಯಲ್ಲಿ ಸಂಚರಿಸಿ ನೆರೆಯ ದೇಶಗಳಲ್ಲಿ ಆಶ್ರಯ ಪಡೆದಿರುವ ಭಾರತೀಯರನ್ನು ವಾಪಸ್‌ ತರುವ ಆಪರೇಷನ್‌ ಗಂಗಾ ಹೊಣೆ ಹೊತ್ತಿರುವ ಸಚಿವಾಲಯ ಈ ಮಾಹಿತಿ ನೀಡಿದೆ. ಶುಕ್ರವಾರವೇ ಏರ್‌ ಇಂಡಿಯಾ ಎಕ್ಸ್‌ಪ್ರಸ್‌, ಏರ್‌ ಇಂಡಿಯಾ, ಸ್ಪೇಸ್‌ಜೆಟ್‌, ಇಂಡಿಗೋ, ವಿಸ್ತಾರ ಮತ್ತು ಗೋ ಫ‌ಸ್ಟ್‌ ಕಂಪೆನಿಯ 17 ವಿಶೇಷ ವಿಮಾನಗಳು ಕಾರ್ಯಾಚರಣೆ ನಡೆಸಲಿವೆ ಎಂದು ಸಚಿವಾಲಯ ಹೇಳಿದೆ. ಉಕ್ರೇನ್‌ನ ನೆರೆ ದೇಶಗಳಾದ ರೊಮೇನಿಯಾ, ಹಂಗೇರಿ, ಪೋಲೆಂಡ್‌ಗಳಿಂದ ವಿಶೇಷ ವಿಮಾನಗಳ ಮೂಲಕ ಕರೆತರಲಾಗುತ್ತಿದೆ.

6,998 ಮಂದಿ ವಾಪಸ್‌: ಫೆ. 22ರಿಂದಲೇ ಭಾರತೀಯರ ರಕ್ಷಣ ಕಾರ್ಯಾಚರಣೆ ನಡೆಸುತ್ತಿದ್ದು, ಈವರೆಗೆ 6,998 ಮಂದಿಯನ್ನು ಕರೆತರಲಾಗಿದೆ. ಗುರುವಾರ 10 ನಾಗರಿಕ ವಿಮಾನಗಳು ಮತ್ತು ಮೂರು ವಾಯುಪಡೆ ವಿಮಾನಗಳು ಜನರನ್ನು ಕರೆತಂದಿವೆ.

ಐಎಎಫ್ ವಿಮಾನದಲ್ಲಿ 798 ಮಂದಿ: ರೊಮೇನಿಯಾ, ಪೋಲೆಂಡ್‌, ಹಂಗೇರಿಯಿಂದ ಹೊರಟಿದ್ದ ನಾಲ್ಕು ಸಿ-17 ಐಎಎಫ್ ವಿಮಾನಗಳು ಗುರುವಾರ ಬೆಳಗಿನ ಜಾವ ಹಿಂಡನ್‌ ಏರ್‌ಬೇಸ್‌ಗೆ ಬಂದಿವೆ. ನಾಲ್ಕು ವಿಮಾನಗಳಲ್ಲಿ ಕ್ರಮವಾಗಿ 200, 210, 208 ಮತ್ತು 180 ಪ್ರಯಾಣಿಕರು ಬಂದಿಳಿದಿದ್ದಾರೆ.

ರಷ್ಯಾದಿಂದ ಉಕ್ರೇನ್‌ಗೆ 130 ಬಸ್‌:  ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸಿಲುಕಿರುವ ಭಾರತೀಯರು ಸೇರಿದಂತೆ ವಿದೇಶಿಯರನ್ನು ಸ್ಥಳಾಂತರಿಸಲು 130 ಬಸ್‌ಗಳನ್ನು ಕಳುಹಿಸಲು ಸಿದ್ಧವಿರುವುದಾಗಿ ರಷ್ಯಾ ಹೇಳಿದೆ. ಬುಧವಾರ ರಾತ್ರಿ ಪ್ರಧಾನಿ ನರೇಂದ್ರ ಮೋದಿ ಅವರು, ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಜತೆಗೆ ಮಾತುಕತೆ ನಡೆಸಿದ ಬಳಿಕ ಈ ಹೇಳಿಕೆ ಹೊರಬಿದ್ದಿದೆ. ಖಾರ್ಕಿವ್‌ ಮತ್ತು ಸುಮಿ ನಗರಗಳಲ್ಲಿ ಸಿಲುಕಿರುವ ಭಾರತೀಯರನ್ನು ಹಸ್ತಾಂತರಿಸಲು ಈ ಬಸ್‌ಗಳನ್ನು ಕಳುಹಿಸುವುದಾಗಿ ರಷ್ಯಾ ಮಿಲಿಟರಿ ಹೇಳಿದೆ.

 1,000  ಮಂದಿ ಖಾರ್ಕಿವ್‌  ತೊರೆದ ವಿದ್ಯಾರ್ಥಿಗಳು :

ಬುಧವಾರ ಎರಡು ಬಾರಿ ತುರ್ತು ಎಚ್ಚರಿಕೆ ನೀಡಿದ ಮೇಲೆ ಒಂದು ಸಾವಿರ ಭಾರತೀಯ ವಿದ್ಯಾರ್ಥಿಗಳು ಖಾರ್ಕಿವ್‌ನಿಂದ ಪಿಸೋಚಿನ್‌ ಪಸ್ಯೂìಯೆಂಟ್‌ಗೆ ತೆರಳಿದ್ದಾರೆ ಎಂದು ವಿದೇಶಾಂಗ ಇಲಾಖೆ ಹೇಳಿದೆ. ಖಾರ್ಕಿವ್‌ ಸೇರಿದಂತೆ ಯುದ್ಧಪೀಡಿತ ನಗರಗಳಿಂದ ಭಾರತೀಯರನ್ನು ಸ್ಥಳಾಂತರಿಸಲು ಶಕ್ತಿಮೀರಿ ಪ್ರಯತ್ನಿಸಲಾಗುತ್ತಿದೆ. ಹೀಗಾಗಿಯೇ ಬುಧವಾರ ಎರಡು ಬಾರಿ ಎಚ್ಚರಿಕೆ ನೀಡಲಾಯಿತು ಎಂದು ಇಲಾಖೆ ತಿಳಿಸಿದೆ.

ಅರಿವು ಮೂಡಿಸಲು ಯತ್ನ: ಯುದ್ಧಪೀಡಿತ ಪ್ರಾಂತ್ಯಗಳಲ್ಲಿರುವ ಭಾರತೀಯರಿಗೆ ತಮ್ಮ ಸುರಕ್ಷತೆಯ ಬಗ್ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ಅರಿವು ಮೂಡಿಸಲು ಭಾರತ ಸರಕಾರ ವಿಭಿನ್ನ ರೀತಿಯಲ್ಲಿ ಮುಂದಾಗಿದೆ.

ಯುದ್ಧ ತಜ್ಞರು, ಸೇನೆಯ ನಿವೃತ್ತ ಜನರಲ್‌ಗ‌ಳನ್ನು ಸಂದರ್ಶನ ಮಾಡುವ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಆ ಸಂದರ್ಶನಗಳಲ್ಲಿ ಅವರು ಶೆಲ್‌ ಹಾಗೂ ಕ್ಷಿಪಣಿ ದಾಳಿಗಳು ಸತತವಾಗಿ ನಡೆಯುತ್ತಿರುವ ಪ್ರಾಂತ್ಯಗಳಲ್ಲಿ ಹೇಗೆ ರಕ್ಷಿಸಿಕೊಳ್ಳಬೇಕು? ಆಹಾರ, ನೀರು ಸೀಮಿತವಾಗಿರುವಾಗ ಅವುಗಳನ್ನು ಹೇಗೆ ಬಳಸಿಕೊಳ್ಳಬೇಕು ಎಂಬಿತ್ಯಾದಿ ಮಾಹಿತಿಗಳನ್ನು ನೀಡಿದ್ದಾರೆ. ಆ ಸಂದರ್ಶನದ ವೀಡಿಯೋಗಳನ್ನು “ಯು ಟ್ಯೂಬ್‌’ ಸೇರಿದಂತೆ ಹಲವಾರು ಡಿಜಿಟಲ್‌ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ.

ರಷ್ಯಾ ಸಂಸ್ಥೆಗಳ ಜತೆ ವಿತ್ತೀಯ ವಹಿವಾಟು ಬೇಡ: ಎಸ್‌ಬಿಐ :

ಅಮೆರಿಕ ಮತ್ತು ಮಿತ್ರ ರಾಷ್ಟ್ರಗಳು ರಷ್ಯಾವನ್ನು ಜಗತ್ತಿನ ಬ್ಯಾಂಕಿಂಗ್‌ ಮತ್ತು ವಿತ್ತೀಯ ಸಂಸ್ಥೆಗಳ ಸರಣಿ, ಸ್ವಿಫ್ಟ್ನಿಂದ ಉಚ್ಚಾಟಿಸಿದ ಬಿಸಿ ಭಾರತಕ್ಕೂ ತಟ್ಟಿದೆ. ಭಾರತೀಯ ಸ್ಟೇಟ್‌ ಬ್ಯಾಂಕ್‌ ರಷ್ಯಾ ವತಿಯಿಂದ ನಡೆಯುವ ವಿತ್ತೀಯ ವಹಿವಾಟು ಸ್ಥಗಿತ ಗೊಳಿಸಲು ನಿರ್ಧರಿಸಿದೆ. ಈ ಬಗ್ಗೆ ಬ್ಯಾಂಕ್‌ನ ಆಡಳಿತ ಮಂಡಳಿ, “ಅಮೆರಿಕ, ಐರೋಪ್ಯ ಒಕ್ಕೂಟ ಅಥವಾ ವಿಶ್ವಸಂಸ್ಥೆ ನಿಷೇಧಕ್ಕೆ ಒಳಪಡಿಸಿದ ಸಂಸ್ಥೆ, ಬಂದರು ಮಂಡಳಿ, ಯಾವುದೇ ಸಂಸ್ಥೆಗೆ ಸಂಬಂಧಿಸಿದ ಹಣಕಾಸು ವ್ಯವಹಾರವನ್ನು ಸ್ವೀಕರಿಸು ವಂತಿಲ್ಲ. ಅದನ್ನು ನಡೆಸಿ ಅಪಾಯ ಆಹ್ವಾನಿಸುವುದು ಬೇಡ’ ಎಂದು ಆಂತರಿಕವಾಗಿ ಸುತ್ತೋಲೆ ಹೊರ ಡಿಸಿದೆ. ಅಂಥ ಸಂಸ್ಥೆಗಳಿಗೆ ಪಾವತಿ ಮಾಡಬೇಕಾಗಿದ್ದರೆ ಬದಲಿ ವ್ಯವಸ್ಥೆಗಳ ಮೂಲಕ ನಡೆಸುವಂತೆಯೂ ಸೂಚಿಸಲಾಗಿದೆ.

ಕೇಂದ್ರಕ್ಕೆ ಕಾಂಗ್ರೆಸ್‌ ಬೆಂಬಲ :

ವಿಶ್ವಸಂಸ್ಥೆಯಲ್ಲಿ ರಷ್ಯಾ ವಿರುದ್ಧ ನಿರ್ಣಯ ಕೈಗೊಳ್ಳುವ ಸಭೆಗಳಿಂದ ಕೇಂದ್ರ ಸರಕಾರ ದೂರ ಉಳಿದಿರುವ ನಿರ್ಧಾರಕ್ಕೆ ಕಾಂಗ್ರೆಸ್‌ ಸೇರಿ ವಿಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ. ಜತೆಗೆ ವಿದ್ಯಾರ್ಥಿಗಳ ರಕ್ಷಣೆಗೆ ಕೈಗೊಂಡಿರುವ ಕ್ರಮಗಳಿಗೂ ಸಂತೃಪ್ತಿ ವ್ಯಕ್ತಪಡಿಸಿವೆ. ದಿಲ್ಲಿಯಲ್ಲಿ ಗುರುವಾರ ವಿದೇಶಾಂಗ ವಿಚಾರಗಳಿಗಾಗಿನ ಸಂಸತ್‌ನ ಸ್ಥಾಯಿ ಸಮಿತಿ ಮುಂದೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಹಾಜರಾಗಿ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆ ಸಹಿತ ವಿವರಣೆ ನೀಡಿದ್ದಾರೆ. ಸಭೆಯಲ್ಲಿ ಕೇಂದ್ರದ ಮಾಜಿ ಸಚಿವ ಶಶಿ ತರೂರ್‌, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ, ಶಿವಸೇನೆಯ ಪ್ರಿಯಾಂಕಾ ಚೌಧರಿ ಸೇರಿದಂತೆ ಪ್ರಮುಖರು ಹಾಜರಿದ್ದರು. ಬಳಿಕ ಟ್ವೀಟ್‌ ಮಾಡಿದ ಸಂಸದ ತರೂರ್‌, “ಉತ್ತಮ ರೀತಿಯಲ್ಲಿ ಸಭೆ ನಡೆಯಿತು ಮತ್ತು ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ’ ಎಂದು ಬರೆದುಕೊಂಡಿದ್ದಾರೆ. ಜತೆಗೆ ಸಭೆಯಲ್ಲಿ ಸ್ಥಾಯಿ ಸಮಿತಿ ಸದಸ್ಯರು ಎತ್ತಿದ ಪ್ರಶ್ನೆಗಳಿಗೆ ಸೂಕ್ತ ರೀತಿಯಲ್ಲಿ ಕೇಂದ್ರದ ವತಿಯಿಂದ ಉತ್ತರ ದೊರೆತಿದೆ ಎಂದೂ ಹೇಳಿಕೊಂಡಿದ್ದಾರೆ.

ಟಾಪ್ ನ್ಯೂಸ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!

1-deee

Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ

1-ind-a

ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Jammu Kashmir: ಬಿಜೆಪಿಯ ʼನಯಾ ಕಾಶ್ಮೀರʼ ಕೈಕೊಟ್ಟಿದ್ದೆಲ್ಲಿ? ಕಣಿವೆಯ ಜನರ ಭಾವನೆಯೇನು?

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

13

Malpe: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

Shettar (3)

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

POlice

Kundapura: ಅಕ್ರಮ ಮದ್ಯ ಸಾಗಾಟ; ವಶ

courts-s

POCSO ಪ್ರಕರಣದ ಆರೋಪಿ ನಟಿ ಸಲ್ಲಿಸಿದ ನಿರೀಕ್ಷಣ ಜಾಮೀನು ಅರ್ಜಿ ವಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.