ಗರ್ಭಿಣಿಯಾಗಿರುವ ನಟಿ ಸಂಜನಾ ಗಲ್ರಾನಿಗೆ ಅಶ್ಲೀಲ ಸಂದೇಶ: ಆದಂ ಬಿದ್ದಪ್ಪ ಅರೆಸ್ಟ್


Team Udayavani, Mar 5, 2022, 3:51 PM IST

1-fdsf

ಬೆಂಗಳೂರು: ನಟಿ ಸಂಜನಾ ಗಲ್ರಾನಿ ಅವರಿಗೆ ಅಸಭ್ಯವಾಗಿ ಸಂದೇಶ ಕಳುಹಿಸಿದ ಆರೋಪದಲ್ಲಿ ಸೆಲೆಬ್ರಿಟಿ ಫ್ಯಾಶನ್ ಕೊರಿಯೋಗ್ರಾಫರ್ ಪ್ರಸಾದ್ ಬಿದ್ದಪ್ಪ ಅವರ ಪುತ್ರ ಆದಂ ಬಿದ್ದಪ್ಪ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಇಂದಿರಾನಗರ ಪೊಲೀಸರು ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಕ್ಕಾಗಿ ಆದಂ ಬಿದ್ದಪ್ಪ ವಿರುದ್ಧ ದೂರು ಸ್ವೀಕರಿಸಿದ್ದರು. ಆದರೆ, ಆದಂ ಬಿದ್ದಪ್ಪ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ನಟಿ ಸಂಜನಾ ಗರ್ಭಿಣಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ತಾಯ್ತನವನ್ನು ಆಚರಿಸುತ್ತಿರುವ ಘಟನೆ ಅಚ್ಚರಿಗೆ ಕಾರಣವಾಗಿದೆ. ಮೇ ತಿಂಗಳಲ್ಲಿ ಅವರು ತಾಯಿ ಯಾಗಲಿದ್ದಾರೆ ಎಂದು ತಿಳಿದು ಬಂದಿದೆ.

ಫೆಬ್ರವರಿ 25 ರ ರಾತ್ರಿ 10 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯ ನಡುವೆ ಆದಂ ಬಿದ್ದಪ್ಪ ಅವರು ನಟಿಗೆ ಅಸಭ್ಯ ಸಂದೇಶಗಳನ್ನು ಕಳುಹಿಸಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಟಿ ಪೊಲೀಸರಿಗೆ ವಾಟ್ಸಾಪ್ ಚಾಟ್ ಪ್ರೂಫ್ ಸಲ್ಲಿಸಿದ್ದು, ಆರೋಪಿ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಿದ್ದಾರೆ.

30 ರ ಹರೆಯದ ಆರೋಪಿಯು ಅಸಭ್ಯ ಸಂದೇಶಗಳನ್ನು ಕಳುಹಿಸಿದ್ದಾನೆ ಮತ್ತು ಚಾಟ್‌ನಲ್ಲಿ ಅವಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂಬ ಆರೋಪದಲ್ಲಿ ಐಪಿಸಿ ಸೆಕ್ಷನ್ 354ಎ (ಲೈಂಗಿಕ ಕಿರುಕುಳ), 506 (ಕ್ರಿಮಿನಲ್ ಬೆದರಿಕೆ) ಮತ್ತು 509 (ಮಹಿಳೆಯರ ಮಾನಹಾನಿಯನ್ನು ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ಅಥವಾ ಕೃತ್ಯ) ಐಟಿ ಕಾಯ್ದೆಯಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಕೊಡಗಿನ ಪೊಲ್ಲಿಬೆಟ್ಟದಿಂದ ಆದಂ ಬಿದ್ದಪ್ಪನನ್ನು ಪೊಲೀಸರು ಭದ್ರತೆಯಲ್ಲಿರಿಸಿ ನಗರಕ್ಕೆ ಕರೆತಂದಿದ್ದಾರೆ. ಶುಕ್ರವಾರ ಸಂಜೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಸಂಬಂಧ ಇಂದಿರಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಸಂಜನಾ ಗಲ್ರಾನಿ ಬೆಂಗಳೂರಿನಲ್ಲಿ ಹೃದಯರಕ್ತನಾಳದ ಶಸ್ತ್ರಚಿಕಿತ್ಸಕರಾಗಿರುವ ಡಾ ಅಜೀಜ್ ಪಾಶಾ ಅವರೊಂದಿಗೆ ರಹಸ್ಯ ವಾಗಿ ವಿವಾಹವಾಗಿದ್ದರು. ಕಳೆದ ವರ್ಷ ಸ್ಯಾಂಡಲ್‌ವುಡ್ ಡ್ರಗ್ ಹಗರಣದಲ್ಲಿ ಆಕೆ ಬಂಧನಕ್ಕೊಳಗಾಗಿದ್ದಾಗ, ಮದುವೆಯ ಡ್ರೆಸ್‌ನಂತೆಯೇ ಹಬ್ಬದ ಉಡುಗೆಯಲ್ಲಿ ಕಾಣಿಸಿಕೊಂಡ ಚಿತ್ರವೊಂದು ಹರಿದಾಡಿದ ಬಳಿಕ, ಸಂಜನಾ ತಾನು ಮದುವೆಯಾಗಿಲ್ಲ ಆದರೆ ಅಜೀಜ್‌ನೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

Kapu

Navarathiri: ಉಚ್ಚಿಲ ದಸರಾ: ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

krishna bhaire

FIR ದಾಖಲಾದ ಬಿಜೆಪಿಯವರು ರಾಜೀನಾಮೆ ನೀಡಲಿ: ಕೃಷ್ಣ ಭೈರೇಗೌಡ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Udupi: ಗೀತಾರ್ಥ ಚಿಂತನೆ-55: ಧೀಶಕ್ತಿ, ಬುದ್ಧಿಶಕ್ತಿಯ ವ್ಯತ್ಯಾಸ

Madikeri

Madikeri: ಕುಶಾಲನಗರದಲ್ಲಿ ಕೊಡಲಿಯಿಂದ ಕಡಿದು ಇಬ್ಬರ ಕೊ*ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

Actor Govinda: ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಗೋವಿಂದ ಡಿಸ್ಚಾರ್ಜ್

121

Border 2: ಸನ್ನಿ ಡಿಯೋಲ್‌ ʼಬಾರ್ಡರ್-2‌ʼಗೆ ʼಫೌಜಿʼಯಾಗಿ ಬಂದ ಸುನಿಲ್‌ ಶೆಟ್ಟಿ ಪುತ್ರ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

1-kanga-eme

‘Emergency’ ದೃಶ್ಯ ಕಡಿತಕ್ಕೆ ಕಂಗನಾ ಸಮ್ಮತಿ: CBFC

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

Tusshar Kapoor: ʼಗೋಲ್‌ ಮಾಲ್‌ʼ ನಟ ತುಷಾರ್‌ ಕಪೂರ್‌ ಫೇಸ್‌ಬುಕ್‌ ಖಾತೆ ಹ್ಯಾಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

supreme-Court

Court: ರಾಜ್ಯಕ್ಕೆ ಖನಿಜ ತೆರಿಗೆ ಅಧಿಕಾರ: ಪರಿಶೀಲನ ಅರ್ಜಿ ಸುಪ್ರೀಂ ವಜಾ

1-aaaa

Bandipur ಸಫಾರಿ ವೀಕ್ಷಿಸಿದ CJI ಡಿ.ವೈ.ಚಂದ್ರಚೂಡ್‌: ಕಾಡಾನೆಗಳ ದರ್ಶನ

Cheluvaray-swamy

Dasara: ಶ್ರೀರಂಗಪಟ್ಟಣ ದಸರಾಗೆ ಯಾವುದೇ ತಡವಾಗಿಲ್ಲ: ಸಚಿವ ಚಲುವರಾಯಸ್ವಾಮಿ

MNG-Deeraj

Mangaluru: ಒಂದೂವರೆ ಕೋಟಿಗೂ ಅಧಿಕ ಬಿಜೆಪಿ ಸದಸ್ಯತ್ವ ಗುರಿ: ಧೀರಜ್‌ ಮುನಿರಾಜು

1-asdd

PDOಗಳ ಅನಿರ್ದಿಷ್ಟಾವಧಿ ಧರಣಿ: ರಾಜ್ಯಾದ್ಯಂತ ಗ್ರಾ.ಪಂ. ಸೇವೆ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.