ಉಕ್ರೇನ್ನಿಂದ ಮರಳಿದ ವಿದ್ಯಾರ್ಥಿಗಳ ನೆರವಿಗೆ ಸರಕಾರ ಬರಲಿ ಶಾಸಕ ಮಂಜುನಾಥ್ ಮನವಿ
Team Udayavani, Mar 7, 2022, 12:16 PM IST
ಹುಣಸೂರು: ಉಕ್ರೇನಿನಲ್ಲಿ ವೈದ್ಯ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದ್ದು, ಸರಕಾರ ಅವರ ಭವಿಷ್ಯದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕೆಂದು ಶಾಸಕ ಎಚ್.ಪಿ.ಮಂಜುನಾಥ್ ಮನವಿ ಮಾಡಿದರು.
ಭಾನುವಾರ ಸಂಜೆ ಉಕ್ರೇನ್ನಿಂದ ಹಿಂದಿರುಗಿದ ವೈದ್ಯ ವಿದ್ಯಾರ್ಥಿ ಪ್ರಜ್ವಲ್ ಮನೆಗೆ ಭೇಟಿ ಇತ್ತು, ಅಲ್ಲಿನ ಸಂಕಷ್ಟದ ಪ್ರಯಾಣದ ಬಗ್ಗೆ ಮಾಹಿತಿ ಪಡೆದು, ಪೋಷಕರ ದುಗುಡಕ್ಕೆ ಸ್ಪಂದಿಸಿ, ಉದಯವಾಣಿಯೊಂದಿಗೆ ಮಾತನಾಡಿದ ಶಾಸಕರು ಯುದ್ದ ಮುಗಿದರೂ ಮತ್ತೆ ಉಕ್ರೇನ್ಗೆ ಹೋಗುವುದು ಕಷ್ಟ, ಹೀಗಾಗಿ ಸರಕಾರ ವೈದ್ಯ ವಿದ್ಯಾರ್ಥಿಗಳ ಭವಿಷ್ಯವನ್ನು ಗಂಭೀರವಾಗಿ ಪರಿಗಣಿಸಿ, ಸ್ಥಳೀಯವಾಗಿ ಓದು ಮುಂದುವರೆಸಲು ಅವಕಾಶ ನೀಡುವುದು ಅತ್ಯವಶ್ಯವಾಗಿದೆ ಎಂದರು.
ಮಾದ್ಯಮಗಳಲ್ಲಿ ಹೇಳೂವುದು ನಿಲ್ಲಿಸಲಿ:
ಬಹುತೇಕರಲ್ಲಿ ಉಳ್ಳವರೇ ಉಕ್ರೇನ್ಗೆ ಹೋಗಿದ್ದಾರೆಂಬ ತಪ್ಪು ಅಭಿಪ್ರಾಯವಿದೆ. ಸಚಿವರುಗಳು ಸಹ ಟಿವಿಗಳಲ್ಲಿ ಬೇಕಾಬಿಟ್ಟಿ ಹೇಳಿಕೆ ನೀಡುತ್ತಿರುವುದು ಬೇಸರ, ಪ್ರಜ್ವಲ್ ನಂತರವರು ಓದುವ ಆಸೆಯಿಂದ ವಿದೇಶಕ್ಕೆ ಹೋಗಿದ್ದಾರೆಂಬುದನ್ನು ಮನಗಾಣಬೇಕು.
ಸಿದ್ದರಾಮಯ್ಯಗೆ ಮನವಿ:
ಪ್ರಜ್ವಲ್ ಒಬ್ಬ ಸಾಮಾನ್ಯನ ಮಗನಾಗಿದ್ದು, ಈತನೂ ಸೇರಿದಂತೆ ಎಲ್ಲ ವೈದ್ಯ ವಿದ್ಯಾರ್ಥಿಗಳ ಸಂಕಷ್ಟವನ್ನು ಸಿದ್ದರಾಮಯ್ಯರಿಗೆ ಮನವರಿಕೆ ಮಾಡಿಕೊಟ್ಟು, ಮಾ.೭ರ ಸೋಮವಾರ ಸದನದಲ್ಲಿ ಪ್ರಸ್ತಾಪಿಸಲು ಮನವಿ ಮಾಡುವುದಾಗಿ ಭರವಸೆ ಇತ್ತು. ಪ್ರಜ್ವಲ್ನ ಓದಿಗೆ ತಾವು ಎಲ್ಲ ರೀತಿಯ ಸಹಕಾರ ನೀಡುವುದಾಗಿ ಪೋಷಕರಿಗೆ ಭರವಸೆ ಇತ್ತರು.
ಈ ವೇಳೆ ಉದ್ಯಮಿ ರಾಜುಶಿವರಾಜೇಗೌಡ, ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸವರಾಜು, ಮುಖಂಡರಾದ ರಾಘು, ಮಂಟಿಕೊಪ್ಪಲುಕುಮಾರ್, ರಾಜೇಗೌಡ, ರಾಜಶೇಖರ್, ಗಣೇಶ್, ಪ್ರಾಚಾರ್ಯ ರವಿದೀಪಕ್ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ
Congress: ನನ್ನನ್ನು ಸಿಲುಕಿಸಲು ಹಳೇ ಪ್ರಕರಣಗಳಿಗೆ ಜೀವ: ಕುಮಾರಸ್ವಾಮಿ ಆರೋಪ
1 ಮೆಟ್ರಿಕ್ ಟನ್ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್ ಸಿಂಗ್
Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ!
Thug Life: ದುಬಾರಿ ಬೆಲೆಗೆ ಕಮಲ್ ಹಾಸನ್ ʼಥಗ್ ಲೈಫ್ʼ ಓಟಿಟಿ ರೈಟ್ಸ್ ಸೇಲ್
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Padmaavat To Billu.. ಟೈಟಲ್ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್ ಸಿನಿಮಾಗಳಿವು
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.